ಖಾಸಗಿ ವಿಡಿಯೋ ಕಾಲ್‌: ಬೆಂಗಳೂರಿನ ಯುವತಿಗೆ ಬ್ಲ್ಯಾಕ್‌ಮೇಲ್‌, ಆರೋಪಿ ಸೆರೆ‌


Team Udayavani, Mar 31, 2022, 11:14 AM IST

rape

ಬೆಂಗಳೂರು: ಡೇಟಿಂಗ್‌ ಆ್ಯಪ್‌ನಲ್ಲಿ ಪರಿಚಯವಾದ ಯುವತಿಯ ಖಾಸಗಿ ವಿಡಿಯೋ ಇಟ್ಟಕೊಂಡು ಮೂರು ಲಕ್ಷ ರೂ.ಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪಿಯನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ.

ಕಾಡುಗೋಡಿ ನಿವಾಸಿ 35 ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದ ಮೇರೆಗೆ ತಮಿಳುನಾಡಿನ ಹೊಸೂರು ಮೂಲದ ಗಣೇಶ್‌ (25)ಎಂಬಾತನನ್ನು ಬಂಧಿಸಲಾಗಿದೆ. ಒಂದೂವರೆ ವರ್ಷದ ಹಿಂದೆ ಸಂತ್ರಸ್ತೆ ಡೇಟಿಂಗ್‌ ಆ್ಯಪ್‌ನಲ್ಲಿ ಖಾತೆ ತೆರೆದಿದ್ದರು. ಆಗ ಆರೋಪಿ ಗಣೇಶ್‌ ಪರಿಚಯವಾಗಿದ್ದ. ನಂತರ ಇಬ್ಬರೂ ಸ್ನೇಹಿತರಾಗಿದ್ದರು.

ಸಂತ್ರಸ್ತೆಯೊಂದಿಗೆ ಸಲುಗೆ ಬೆಳೆಸಿಕೊಂಡ ಆರೋಪಿ ಆಕೆಗೆ ವಾಟ್ಸ್‌ಆ್ಯಪ್‌ ಹಾಗೂ ವಿಡಿಯೋ ಕರೆ ಮಾಡಿ ಮಾತನಾಡುತ್ತಿದ್ದ. ಈ ವೇಳೆ ಯುವತಿ ಜತೆ ಖಾಸಗಿಯಾಗಿ ವಿಡಿಯೋ ಕಾಲ್‌ನಲ್ಲಿ ಮಾತನಾಡಿದ್ದು, ಅದನ್ನು ರೆಕಾರ್ಡ್‌ ಮಾಡಿಕೊಂಡಿದ್ದಾನೆ. ಇದೀಗ 15 ದಿನಗಳಿಂದ ಆರೋಪಿ, ಸಂತ್ರಸ್ತೆಗೆ ವಿಡಿಯೋ ಕಳುಹಿಸಿ ಮೂರು ಲಕ್ಷ ರೂ. ಕೊಡಬೇಕು. ಇಲ್ಲವಾದರೆ ಅದನ್ನು ಪತಿಗೆ ಕಳುಹಿಸುವುದಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಾನೆ. ಅದರಿಂದ ಗಾಬರಿಗೊಂಡ ಮಹಿಳೆ ಕಾಡುಗೋಡಿ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ವೈನ್‌ ಡೆಲಿವರಿ ಸೋಗಿನಲ್ಲಿ ಯುವತಿಗೆ ವಂಚನೆ

ಆನ್‌ಲೈನ್‌ ಮೂಲಕ ವೈನ್‌ ಆರ್ಡರ್‌ ಮಾಡಿದ್ದ ಯುವತಿಯೊಬ್ಬರ ಬಳಿ ಡೆಲಿವರಿ ಶುಲ್ಕ ಪಡೆಯುವ ನೆಪದಲ್ಲಿ ಸೈಬರ್‌ ವಂಚಕರು 49 ಸಾವಿರ ರೂ. ದೋಚಿದ್ದಾರೆ. ಈ ಸಂಬಂಧ ಲಾಲ್‌ಬಾಗ್‌ ರಸ್ತೆಯ 22 ವರ್ಷದ ಯುವತಿ ಕೇಂದ್ರ ವಿಭಾಗದ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಂಚನೆಗೊಳಗಾದ ಯುವತಿ ಮಾ.26ರರಂದು ವೈನ್ಸ್‌ ಹೋಮ್‌ ಡೆಲಿವರಿ ಎಂಬ ಆನ್‌ಲೈನ್‌ ವಹಿವಾಟಿನಲ್ಲಿ ವೈನ್ಸ್‌ ಬುಕ್‌ ಮಾಡಿದ್ದು, ಆನ್‌ಲೈನ್‌ ಮೂಲಕ 540 ರೂ. ಶುಲ್ಕವನ್ನು ಪಾವತಿಸಿದ್ದರು. ಕೆಲ ಹೊತ್ತಿನ ಬಳಿಕ ಸೈಬರ್‌ ವಂಚಕ ಯುವತಿಗೆ ಕರೆ ಮಾಡಿ, ಡೆಲಿವರಿ ಮಾಡಿದ ಶುಲ್ಕ 10 ರೂ. ಪಾವತಿಸಬೇಕಂದು ಹೇಳಿದ್ದಾನೆ. ಜತೆಗೆ ಶುಲ್ಕ ಪಾವತಿಯಾಗಲು ಒಟಿಪಿ ನೀಡಬೇಕು ಎಂದು ಯುವತಿ ಯಿಂದ ಒಟಿಪಿ ಪಡೆದುಕೊಂಡಿದ್ದ. ಆದಾದ ಕೆಲ ನಿಮಿಷಗಳಲ್ಲೇ ಯುವತಿಯ ಬ್ಯಾಂಕ್‌ ಖಾತೆಯಿಂದ 49,326 ರೂ. ಅನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ.

ಹಣ ಕಡಿತವಾದ ಸಂದೇಶ ಬಂದ ಕೂಡಲೇ ಕೇಂದ್ರ ವಿಭಾಗದ ಸೆನ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಂಚನೆಗೊಳಗಾದವರ ಖಾತೆಯ ವಿವರ ನೀಡುವಂತೆ ಮಂಗಳವಾರ ಬ್ಯಾಂಕ್‌ಗೆ ಪತ್ರ ಬರೆದಿದ್ದಾರೆ.

ಟಾಪ್ ನ್ಯೂಸ್

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

1-wqewee

Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ

MOdi (3)

Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್‌ ಅರ್ಜಿ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Himanth-Bisw

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್‌ ಬಿಸ್ವಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.