ಏ.1ರಂದು ಚಿಕ್ಕಬಳ್ಳಾಪುರಕ್ಕೆ; ಅಮಿತ್‌ಶಾ ಸಮಾರಂಭಕ್ಕೆ ಸಾವಿರ ಜನ ಭಾಗಿ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಷ್ಟ್ರ ನಾಯಕರಾಗಿದ್ದು ದಿಟ್ಟ ನಿರ್ಧಾರಗಳನ್ನು ಕೈಗೊಂಡಿದ್ದಾರೆ.

Team Udayavani, Mar 31, 2022, 4:12 PM IST

ಏ.1ರಂದು ಚಿಕ್ಕಬಳ್ಳಾಪುರಕ್ಕೆ; ಅಮಿತ್‌ಶಾ ಸಮಾರಂಭಕ್ಕೆ ಸಾವಿರ ಜನ ಭಾಗಿ

ದೇವನಹಳ್ಳಿ: ಏ.1ರಂದು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸಲಿದ್ದು ದೇವನಹಳ್ಳಿ ತಾಲೂಕಿನಿಂದ 1 ಸಾವಿರದಿಂದ ಒಂದೂವರೆ ಸಾವಿರದವರೆಗೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ಪಟ್ಟಣದ ಸೂಲಿಬೆಲೆ ರಸ್ತೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿ.ಅಶ್ವಥನಾರಾಯಣ್‌(ಎಸ್‌ಎಲ್‌ ಎನ್‌) ಅವರ ನಿವಾಸದಲ್ಲಿ ತಾಲೂಕು ಬಿಜೆಪಿಯಿಂದ ಹಮ್ಮಿ ಕೊಂಡಿದ್ದ ಏ.1ರಂದು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಆಗಮಿಸಲಿರುವ ಕೇಂದ್ರ ಗೃಹಸಚಿವ ಅಮಿತ್‌ ಶಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ತುಮಕೂರಿನ ಸಿದ್ಧಗಂಗಾ ಶ್ರೀಗಳ 115ನೇ ಜನ್ಮ ಜಯಂತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನ ಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ಸಮಾಗಮ ಕ್ರೀಡಾಂಗಣಕ್ಕೆ ಮಧ್ಯಾಹ್ನ2.15ಕ್ಕೆ ಆಗಮಿಸಲಿದ್ದಾರೆ. ಬಳಿಕ ಸತ್ಯಸಾಯಿ ಗ್ರಾಮದಲ್ಲಿ ಈಗಾಗಲೇ ನಿರ್ಮಾಣವಾಗಿರುವ ಸರಳ ಸ್ಮಾರಕ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 400 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಕೇಂದ್ರ ಸಚಿವ ಅಮಿತ್‌ ಶಾ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.

ನಂತರ ಚಿಕ್ಕಬಳ್ಳಾಪುರ ನಗರದ ಸಿದ್ದೇಶ್ವರ ಸಮುದಾಯ ಭವನದಲ್ಲಿ ಇದೇ ಮೊದಲ ಬಾರಿಗೆ ಆಗಮಿಸುತ್ತಿರುವಹಿನ್ನೆಲೆಯಲ್ಲಿಅವರನ್ನು ಸ್ವಾಗತಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಬೇಕಾಗಿ ಕೋರಲಾಗಿದೆ ಎಂದು ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಷ್ಟ್ರ ನಾಯಕರಾಗಿದ್ದು ದಿಟ್ಟ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ವಲ್ಲಭಬಾಯಿ ಪಟೇಲ್‌ ನಂತರ ಅಮಿತ್‌ ಶಾ ತನ್ನದೇ ಆದ ವ್ಯಕ್ತಿತ್ವವನ್ನು ಮತ್ತು ದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ಕೊಟ್ಟಿದ್ದಾರೆ. ಮೊದಲ ಬಾರಿಗೆ ಸಹಕಾರ ಸಚಿವರಾಗಿದ್ದಾರೆ. ಕೇಂದ್ರ ಗೃಹ ಸಚಿವರು ನಮ್ಮ ಕ್ಷೇತ್ರಕ್ಕೆ ಬರುತ್ತಿರುವುದು ಸಂತಸ ತಂದಿದೆ. ಕೇಂದ್ರ ಅಮಿತ್‌ ಶಾ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು 370 ತಿದ್ದುಪಡಿ ಮೂಲಕ ರದ್ದುಮಾಡಿ ದೇಶಾದ್ಯಂತ ಸಮಾನವಾದ ಕಾನೂನನ್ನು ಜಾರಿಗೊಳಿಸುವುದರ ಮೂಲಕ ದಿಟ್ಟ ನಿರ್ಧಾರಕ್ಕೆ ನಾಂದಿ ಹಾಡಿದ್ದಾರೆ ಎಂದು ತಿಳಿಸಿದರು.

ಅಮಿತ್‌ ಶಾ ಅವರು ನಮ್ಮ ಕ್ಷೇತ್ರಕ್ಕೆ ಬರುತ್ತಿರುವುದರಿಂದ ಪಕ್ಕದ ಕ್ಷೇತ್ರವಾದ ದೇವನಹಳ್ಳಿಗೆ ಮತ್ತಷ್ಟು ಶಕ್ತಿ ಬರಲು ಸಾಧ್ಯವಾಗುತ್ತದೆ. ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು, ಮುಖಂಡರು ಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಕ್ಷೇತ್ರದಿಂದ ಬರಬೇಕು ಎಂದು ಹೇಳಿದರು.

ಮಾಜಿ ಶಾಸಕರಾದ ಜಿ.ಚಂದ್ರಣ್ಣ, ಪಿಳ್ಳಮುನಿಶಾಮಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ,ಅಂತಾರಾಷ್ಟ್ರೀಯವಿಮಾನ ನಿಲ್ದಾಣ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿ.ಅಶ್ವಥನಾರಾಯಣ್‌(ಎಸ್‌.ಎಲ್‌.ಎನ್‌.), ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಎಚ್‌.ಎಂ.ರವಿಕುಮಾರ್‌, ತಾಲೂ ಕು ಬಿಜೆಪಿ ಅಧ್ಯಕ್ಷ ಸುನಿಲ್‌, ಉಪಾಧ್ಯಕ್ಷರಾದ ನಾಗೇಶ್‌, ಪುನೀತ, ಪ್ರಧಾನ ಕಾರ್ಯದರ್ಶಿ ನೀಲೇರಿ ಮಂಜುನಾಥ್‌, ದೇವನಹಳ್ಳಿ ಟೌನ್‌ ಬಿಜೆಪಿ ಅಧ್ಯಕ್ಷ ಸಂದೀಪ್‌, ವಿಜಯಪುರ ಟೌನ್‌ ಅಧ್ಯಕ್ಷ ಮಂಜುನಾಥ್‌, ಜಿಲ್ಲಾ ಮಾದ್ಯಮ ಪ್ರಮುಖ್‌ ಎಸ್‌. ರಮೇಶ್‌ ಕುಮಾರ್‌, ತಾಲೂಕು ಮಹಿಳಾಮೋರ್ಚಾ ಅಧ್ಯಕ್ಷೆ ವಿಮಲಾ, ಕಾರ್ಯದರ್ಶಿ ದಾಕ್ಷಾಯಿಣಿ, ತಾಪಂ ಮಾಜಿ ಉಪಾಧ್ಯಕ್ಷ ಎಸ್‌.ಎಂ ನಾರಾಯಣಸ್ವಾಮಿ ಮುಖಂಡರಾದ ದೇಸು ನಾಗರಾಜ್‌, ವೈಕೆ ಚಂದ್ರಶೇಖರ್‌, ಶಿವನಾಪುರ ಎಸ್‌. ಆರ್‌.ವಿಜಯಕುಮಾರ್‌, ವಿಜಯಪುರ ಗಿರೀಶ್‌, ಅನಿಲ್‌ ಯಾದವ್‌, ಉಮೇಶ್‌ ಇತರರು ಇದ್ದರು.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.