ಜಗದ್ಗುರು ರೇಣುಕಾಚಾರ್ಯರ ಯುಗಮಾನೋತ್ಸವ ಕಾರ್ಯಕ್ರಮ
Team Udayavani, Apr 1, 2022, 10:14 AM IST
ಅಣ್ಣಿಗೇರಿ: ರೇಣುಕಾಚಾರ್ಯರ ಜಯಂತಿಯನ್ನು ಸರಕಾರದಿಂದ ಮಾ.16ರಂದು ಆಚರಣೆ ಮಾಡಲು ಘೋಷಣೆ ಮಾಡಿರುವುದು ಅಭಿನಂದನೀಯ. ಅದೇ ರೀತಿ ಜಂಗಮ ಸಮಾಜದವರಿಗೆ ಬೇಡ ಜಂಗಮ ಪ್ರಮಾಣ ಪತ್ರ ನೀಡುವ ಕಾರ್ಯಕ್ಕೂ ಸರ್ಕಾರ ಮುಂದಾಗಬೇಕಾಗಿದೆ ಎಂದು ನರಗುಂದ ಪತ್ರಿವನ ಮಠದ ಸಿದ್ಧವೀರ ಶಿವಯೋಗಿ ಶಿವಾಚಾರ್ಯರು ಹೇಳಿದರು.
ಪಟ್ಟಣದ ಪುರದ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಜಗದ್ಗುರು ರೇಣುಕಾಚಾರ್ಯರ ಯುಗಮಾನೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ತಮ್ಮ ತಾಯಿ-ತಂದೆ ಹೆಸರಿನಲ್ಲಿ ಅಣ್ಣಿಗೇರಿ ಜಂಗಮ ಸಮಾಜಕ್ಕೆ ಶ್ರೀ ರೇಣುಕಾಚಾರ್ಯ ಜಯಂತ್ಯುತ್ಸವಕ್ಕಾಗಿ 2 ಲಕ್ಷ ನಗದನ್ನು ದೇಣಿಗೆಯಾಗಿ ನೀಡಿದರು. ಮುಂದಿನ ದಿನಗಳಲ್ಲಿ ರೇಣುಕಾಚಾರ್ಯರ ಸಭಾಭವನಕ್ಕೆ 10 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದರು. ಅಡನೋರಿನ ಶಿವಾಚಾರ್ಯರು, ಹೊಸಳ್ಳಿಯ ಬೂದೀಶ್ವರ ಶ್ರೀಗಳು ಆಶೀರ್ವಚನ ನೀಡಿದರು.
ಜಿಪಂ ಮಾಜಿ ಉಪಾಧ್ಯಕ್ಷ ಶಿವಾನಂದ ಕರಿಗಾರ, ಬಿ.ಬಿ. ಗಂಗಾಧರಮಠ, ವೀರೇಶ ಪುರದೀರಪ್ಪನಮಠ, ನಾಗಪ್ಪ ದಳವಾಯಿ, ಜಂಗಮ ಸಮಾಜದ ತಾಲೂಕಾಧ್ಯಕ್ಷ ಸುರೇಶ ಹೊಂಬಾಳಿಮಠ, ಸುರೇಶ ಹಿರೇಮಠ, ಜಗದೀಶ ಅಬ್ಬಿಗೇರಿಮಠ, ಕಿರಣ ಹಿರೇಮಠ, ಪ್ರಕಾಶ ಕರವೀರಮಠ, ವೀರಯ್ಯ ಪರ್ವತದೇವರ ಮಠ, ಶ್ರೀಶೈಲಯ್ಯ ನಮಸ್ತೆಮಠ, ಭಾರತಿ ಹಿರೇಮಠ, ಶಶಿಕಲಾ, ಶೋಭಾ ಹಿರೇಮಠ ಇನ್ನಿತರರಿದ್ದರು.
ಪುರಸಭೆ ನೂತನ ಸದಸ್ಯರನ್ನು ಸನ್ಮಾನಿಸಲಾಯಿತು. ವಿ.ಎಂ. ಹಿರೇಮಠ ಸ್ವಾಗತಿಸಿದರು. ಮಾಂತೇಶ ವಸ್ತ್ರದ ಪ್ರಾಸ್ತಾವಿಕ ಮಾತನಾಡಿದರು. ಎಂ.ವಿ. ಮುತ್ತಲಗೇರಿ ನಿರೂಪಿಸಿದರು. ಸೋಮಶೇಖರ ಹಿರೇಮಠ ವಂದಿಸಿದರು.
ಭವ್ಯ ಮೆರವಣಿಗೆ: ರೇಣುಕಾಚಾರ್ಯರ ಭಾವಚಿತ್ರದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಬಂಗಾರೇಶ ಹಿರೇಮಠ, ಶಿವಯೋಗಿ ಸುರಕೋಡ, ಷಣ್ಮುಖ ಗುರಿಕಾರ ಚಾಲನೆ ನೀಡಿದರು. ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ, ಬಸವರಾಜ ಕುಂದಗೋಳಮಠ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ