ನಮ್ಮ ಶತ್ರು ಬಿಜೆಪಿಯಲ್ಲ, ಆರ್ ಎಸ್ಎಸ್ :ಬಿ.ಕೆ.ಹರಿಪ್ರಸಾದ್
Team Udayavani, Apr 1, 2022, 1:17 PM IST
ಬೆಂಗಳೂರು : ಕಾಂಗ್ರೆಸ್ ನ ನಿಜವಾದ ಶತ್ರು ಬಿಜೆಪಿಯಲ್ಲ, ಆರ್ ಎಸ್ ಎಸ್ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.
ರಾಹುಲ್ ಗಾಂಧಿ ಸಮ್ಮುಖದಲ್ಲಿ ನಡೆದ ಕೆಪಿಸಿಸಿ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ನಾವು ನಿಜವಾಗಿಯೂ ಹೋರಾಟ ಮಾಡಬೇಕಿರುವುದು ಬಿಜೆಪಿ ವಿರುದ್ಧವಲ್ಲ. ನಮ್ಮ ಹೋರಾಟ ಆರ್ ಎಸ್ ಎಸ್ ವಿರುದ್ಧ. ಏಕೆಂದರೆ ಇದೊಂದು ಸೈದ್ಧಾಂತಿಕ ಹೋರಾಟವಾಗಿದ್ದು, ದೇಶದ ಯುವಕರಲ್ಲಿ ಭಾರತದ ನಿಜವಾದ ಇತಿಹಾಸ ತಿಳಿಸಬೇಕು. ನಮಗೆ ಬೇಕಿರುವುದು ಗಾಂಧಿಯವರು ಮಂಡಿಸಿದ ಸರ್ವ ಧರ್ಮ ಸಮಭಾವದ ಸಿದ್ಧಾಂತ ಎಂದು ಅಭಿಪ್ರಾಯಪಟ್ಟರು.
ಇದನ್ನೂ ಓದಿ :ಎಲ್ಲರನ್ನು ಒಟ್ಟಿಗೆ ಕರೆದೊಯ್ಯುವೆ : ರಾಹುಲ್ ಗೆ ಡಿಕೆಶಿ ಭರವಸೆ
ರಾಜ್ಯದಲ್ಲಿ ಬಿಜೆಪಿ ಈಗ ಕೋಮು ಅಜೆಂಡಾವನ್ನು ಬಿತ್ತುತ್ತಿದೆ. ಕಾಂಗ್ರೆಸ್ ಜಾರಿಗೆ ತಂದ ಎಲ್ಲ ವಿಚಾರಧಾರೆಗಳನ್ನು ಹಾಳು ಮಾಡುತ್ತಿದ್ದಾರೆ. ಸಂವಿಧಾನಿಕ ಮೌಲ್ಯಗಳನ್ನು ಅಪಮೌಲ್ಯಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ನಮ್ಮ ಪರವಾಗಿ ಯಾರು ನಿಲ್ಲುತ್ತಾರೋ, ಅವರಿಗೆ ಶಕ್ತಿ ತುಂಬುದುವುದು, ಅವರ ಪರವಾಗಿ ಮಾತನಾಡುವುದು ನಮ್ಮ ಕರ್ತವ್ಯ ಎಂದು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ