“ಧೋನಿ, ಫಿನಿಶಸ್ ಇಟ್ ಆಫ್ ಇನ್ ಸ್ಟೈಲ್…”; ಇಂದು ಟೀಂ ಇಂಡಿಯಾ ವಿಶ್ವಕಪ್ ವಿಜಯದ ದಿನ


Team Udayavani, Apr 2, 2022, 10:50 AM IST

On this day in 2011, India won the men’s ODI World Cup

ಮುಂಬೈ: ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳು ಉಸಿರು ಬಿಗಿ ಹಿಡಿದು ನಿಂತಿದ್ದರು, ಮುಂಬೈನ ಹೃದಯ ಭಾಗದಲ್ಲಿರುವ ವಾಂಖೆಡೆ ಕ್ರೀಡಾಂಗಣ ಜನರಿಂದ ಕಿಕ್ಕಿರಿದಿತ್ತು. ಅದು 49ನೇ ಓವರ್ ನ ಎರಡನೇ ಎಸೆತ, ಲಂಕನ್ ವೇಗಿ ನುವಾನ್ ಕುಲಶೇಖರ ವೇಗದಿಂದ ಓಡಿ ಬಂದು ಬಾಲ್ ಎಸೆದಿದ್ದರು, ಕ್ರೀಸ್ ನಲ್ಲಿದ್ದ ನಾಯಕ ಮಹೇಂದ್ರ ಸಿಂಗ್ ಧೋನಿ ಉಸಿರು ಬಿಗು ಹಿಡಿದು ರಭಸದಿಂದ ತನ್ನ ನೆಚ್ಚಿನ ಹೆಲಿಕಾಪ್ಟರ್ ಶಾಟ್ ಬಾರಿಸಿದ್ದರು.

ಧೋನಿ ಬ್ಯಾಟಿಗೆ ತಾಗಿದ ಚೆಂಡು ಆಗಸದೆತ್ತರಕ್ಕೆ ಸಾಗುತ್ತಿದ್ದಂತೆ ಕುರ್ಚಿಯ ಕೊನೆಯಲ್ಲಿ ಕುಳಿತಿದ್ದ ಎಲ್ಲರೂ ಎದ್ದು ನಿಂತಿದ್ದರು. ಚೆಂಡು ಲಾಂಗ್ ಬೌಂಡರಿ ಗೆರೆ ದಾಟಿ ಲ್ಯಾಂಡ್ ಆಗಿತ್ತು. ಕಮೆಂಟರಿ ಬಾಕ್ಸ್ ನಲ್ಲಿದ್ದ ರವಿ ಶಾಸ್ತ್ರಿ, “ ಧೋನಿ, ಫಿನಿಶಸ್ ಇಟ್ ಆಫ್ ಇನ್ ಸ್ಟೈಲ್, ಇಂಡಿಯಾ ಲಿಫ್ಟ್ಸ್ ದಿ ವರ್ಲ್ಡ್ ಕಪ್ ಆಫ್ಟರ್ 28 ಇಯರ್ಸ್ “ ಎಂದು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಎಂದೂ ಮರೆಯದ ಸಾಲುಗಳನ್ನು ಎದೆಯುಬ್ಬಿಸಿ ಹೇಳಿದ್ದರು.

ಹೌದು 2011ರ ಏಪ್ರಿಲ್ 2ರಂದು ಭಾರತ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್ ಜಯಿಸಿತ್ತು. ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಟೀಂ ಇಂಡಿಯಾ ಆರು ವಿಕೆಟ್ ಅಂತರದಿಂದ ಸೋಲಿಸಿತ್ತು.

ಇದನ್ನೂ ಓದಿ:ಗುಮ್ಮ ಬಂತು ಗುಮ್ಮ…; ‘ವಿಕ್ರಾಂತ್ ರೋಣ’ನ ದರ್ಶನಕ್ಕೆ ದಿನಾಂಕ ಫಿಕ್ಸ್

ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾ ತಂಡ ಮಹೇಲಾ ಜಯವರ್ಧನೆ ಶತಕದ ನೆರವಿನಿಂದ ಆರು ವಿಕೆಟ್ ನಷ್ಟಕ್ಕೆ 274 ರನ್ ಗಳಿಸಿತ್ತು. ಗುರಿ ಬೆನ್ನತ್ತಿದ್ದ ಭಾರತ ತಂಡಕ್ಕೆ ಗೌತಮ್ ಗಂಭೀರ್ ಮತ್ತು ನಾಯಕ ಮಹೇಂದ್ರ ಸಿಂಗ್ ಧೋನಿ ನೆರವಾಗಿದ್ದರು. ಗಂಭೀರ್ 97 ರನ್ ಗಳಿಸಿದ್ದರೆ, ನಾಯಕ ಮಹೇಂದ್ರ ಸಿಂಗ್ ಧೋನಿ ಅಜೇಯ 91 ರನ್ ಗಳಿಸಿದ್ದರು.

ನಾಯಕ ಧೋನಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಕೂಟದುದ್ದಕ್ಕೂ ಅಮೋಘ ಪ್ರದರ್ಶನ ತೋರಿದ್ದ ಯುವರಾಜ್ ಸಿಂಗ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.