ಕಾರ್ಮಿಕ ಇಲಾಖೆ ಯೋಜನೆ ಲಾಭ ಪಡೆಯಲು ಸಲಹೆ
Team Udayavani, Apr 2, 2022, 2:29 PM IST
ಗುರುಮಠಕಲ್: ತಮ್ಮ ಕಠಿಣ ಪರಿಶ್ರಮ ಮತ್ತು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಸರಕಾರವು ಹಲವಾರು ಯೋಜನೆಗಳನ್ನು ರೂಪಿಸಿದೆ. ಅವುಗಳ ಲಾಭ ಪಡೆಯುವಂತೆ ಜೆಡಿಎಸ್ ರಾಜ್ಯ ಯುವ ಮುಖಂಡ ಶರಣಗೌಡ ಕಂದಕೂರ ಕರೆ ನೀಡಿದರು.
ಪಟ್ಟಣದ ಕೊಡ್ಲಿ ಮಠದಲ್ಲಿ ಶ್ರೀ ನಗರೇಶ್ವರ ಕಟ್ಟಡ ಕಾರ್ಮಿಕರ ಸಂಘ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಾಡಿನ ಅಭಿವೃದ್ಧಿಯು ವಿವಿಧ ಸ್ಥರಗಳಲ್ಲಿನ ಕಾರ್ಮಿಕರ ಶ್ರಮದಿಂದ ಗುರುತಿಸಲ್ಪಡುತ್ತದೆ. ಕಟ್ಟಡ ಕಾರ್ಮಿಕರು ಸೇರಿದಂತೆ ಹಲವಾರು ವಿವಿಧ ಕಾರ್ಮಿಕರನ್ನು ಸರಕಾರ ಗುರುತಿಸಿದೆ. ಅವರ ಅಭಿವೃದ್ಧಿಗಾಗಿ ಕಾರ್ಮಿಕ ಗರ್ಭಿಣಿ ಯೋಜನೆ, ಮಕ್ಕಳ ವಿದ್ಯಾಭ್ಯಾಸ ಯೋಜನೆ, ವೈದ್ಯಕೀಯ, ಟೆಂಟ್ ಸೌಲಭ್ಯ ಸೇರಿದಂತೆ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದರು.
ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ, ನರಸಪ್ಪ ಗಡ್ಡಲ್, ಪ್ರಕಾಶ ನೀರಟ್ಟಿ, ಅನಂತಪ್ಪ ಬೋಯಿನ, ಜಿ. ತಮ್ಮಣ್ಣ, ಬಸಣ್ಣ ದೇವರಳ್ಳಿ, ಸಂಘದ ಪದಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ