ಪ್ರೇತೋಚ್ಛಾಟನೆ ನೆಪದಲ್ಲಿ ಬಾಲಕಿಗೆ ಥಳಿಸಿ ಧೂಪದ ಕಡ್ಡಿಯಿಂದ ಸುಟ್ಟ ಮಂತ್ರವಾದಿಯ ಬಂಧನ!
Team Udayavani, Apr 3, 2022, 12:58 PM IST
ರಾಂಚಿ: ದುಷ್ಟಶಕ್ತಿಗಳನ್ನು ದೂರವಿಡಲು 14 ವರ್ಷದ ಬಾಲಕಿಯನ್ನು ಥಳಿಸಿ, ಆಕೆಯ ದೇಹದ ಭಾಗಗಳನ್ನು ಅಗರಬತ್ತಿಗಳಿಂದ ಸುಟ್ಟ ಆರೋಪದ ಮೇಲೆ ಜಾರ್ಖಂಡ್ನ ಛತ್ರಾ ಜಿಲ್ಲೆಯಲ್ಲಿ ಮಂತ್ರವಾದಿಯೊಬ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಕಳೆದ ವಾರ ಹೋಳಿ ಆಡಿದ ನಂತರ ಬಾಲಕಿ ಅಸ್ವಸ್ಥಳಾಗಿದ್ದಳು. ಮಾಂತ್ರಿಕ ಮೌಲಾನಾ ಎಂ.ಡಿ ವಾಹಿದ್ ಎಂಬಾತ ಭೂತೋಚ್ಚಾಟನೆಯ ಮೂಲಕ ಅವಳು ಗುಣಮುಖಳಾಗುತ್ತಾಳೆ ಎಂದು ಆಕೆಯ ಕುಟುಂಬಕ್ಕೆ ಭರವಸೆ ನೀಡಿದ್ದ.
ಬಳಿಕ ನಾಲ್ಕು ದಿನಗಳಲ್ಲಿ, ವಾಹಿದ್ ಬಾಲಕಿಗೆ ಚಿತ್ರಹಿಂಸೆ ನೀಡಿದ್ದಾನೆ. ನಂತರ ಅವಳು ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಮಹಿಳೆಗೆ ಹಲ್ಲೆ ಪ್ರಕರಣ: ಆಸಿಫ್ ಆಪದ್ಭಾಂಧವ ಸೇರಿ ಮೂವರ ಬಂಧನ
ಪ್ರೇತೋಚ್ಚಾಟನೆ ನೆಪದಲ್ಲಿ ಮಂತ್ರವಾದಿ ವಾಹಿದ್ ಬಾಲಕಿಯನ್ನು ಥಳಿಸಿದ್ದಾನೆ. ಬಳಿಕ ಸುಡುವ ಧೂಪದ್ರವ್ಯದ ತುಂಡುಗಳಿಂದ ಅವಳ ಮುಖ, ತುಟಿ ಮತ್ತು ಕೈಗಳನ್ನು ಸುಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯನ್ನು ಛತ್ರದಲ್ಲಿರುವ ಸದರ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಆಕೆಯ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ, ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ.
ಬಾಲಕಿಯ ಕುಟುಂಬವು ಲಾವಾಲಾಂಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಮಂತ್ರವಾದಿ ವಾಹಿದ್ (35) ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ರಂಜನ್ ತಿಳಿಸಿದ್ದಾರೆ.
307 (ಕೊಲೆ ಯತ್ನ), ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪಿಸಿಎಸ್ಒ) ಕಾಯ್ದೆ ಸೇರಿದಂತೆ ಐಪಿಸಿಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ