ಕಮಲಾಪುರ ಪಟ್ಟಣ ಪಂಚಾಯ್ತಿಗೆ ಪುರಸಭೆ ಭಾಗ್ಯ
ಬಹುವರ್ಷಗಳ ಬೇಡಿಕೆ ಸಾಕಾರ ಸನ್ನಿಹಿತ
Team Udayavani, Apr 3, 2022, 5:37 PM IST
ಹೊಸಪೇಟೆ: ಹಂಪಿಗೆ ಹೆಬ್ಟಾಗಿಲು ಎಂದೇ ಕರೆಸಿಕೊಳ್ಳುವ ತಾಲೂಕಿನ ಕಮಲಾಪುರ ಪಟ್ಟಣ ಪಂಚಾಯಿತಿಗೆ ಇದೀಗ ಪುರಸಭೆಯಾಗಿ ಮೇಲ್ದರ್ಜೇಗೇರುವ ಭಾಗ್ಯ ಒಲಿದು ಬಂದಿದ್ದು ಅಭಿವೃದ್ಧಿ ಪರ್ವ ಆರಂಭವಾಗಲಿದೆ. ಕಮಲಾಪುರ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದ್ದು,ಈ ಭಾಗದ ಜನರ ಬಹುದಿನದ ಬೇಡಿಕೆ ಈಡೇರಿದೆ.
ಬಹು ವರ್ಷಗಳಿಂದ ಈ ಪಟ್ಟಣದ ನಾಗರಿಕರು ಮತ್ತು ಪಪಂ ಸದಸ್ಯರು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂದು ಸಚಿವ ಆನಂದ್ ಸಿಂಗ್ ಅವರಲ್ಲಿ ಬೇಡಿಕೆಯನ್ನಿಟ್ಟಿದ್ದರು. ಇದಕ್ಕೆ ಸ್ಪಂದಿಸಿದ ಸಚಿವ ಆನಂದ್ ಸಿಂಗ್ ಅವರು ಮಾರ್ಚ್ 11ರಂದು ನಡೆದ ಕ್ಯಾಬಿನೆಟ್ನಲ್ಲಿ ಈ ವಿಷಯವನ್ನು ತಂದಿದ್ದರು. ಈ ಬಗ್ಗೆ ವಿಸ್ತೃತ ಚರ್ಚೆ ನಡೆದು ಕ್ಯಾಬಿನೆಟ್ನಲ್ಲಿ ಒಪ್ಪಿಗೆ ದೊರೆತಿದೆ.
ಗ್ರಾಪಂನಿಂದ ಪಪಂ
ಗ್ರಾಮ ಪಂಚಾಯಿತಿಯಾಗಿದ್ದ ಕಮಲಾಪುರ ಜನಸಂಖ್ಯೆ ಆಧಾರದಲ್ಲಿ 1998ರಲ್ಲಿ ಪಟ್ಟಣ ಪಂಚಾಯಿತಿಯಾಗಿ ಬಡ್ತಿ ಪಡೆದಿತ್ತು. ಈಗ ಪುರಸಭೆಯಾಗಿ ಮೇಲ್ದರ್ಜೆಗೇರಿದೆ. ಇದರಿಂದ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೂ ಅನುಕೂಲವಾಗಲಿದೆ.
ಪುರಸಭೆಗೆ ಪ್ರಸ್ತಾವನೆ ಸಲ್ಲಿಕೆ
ಕಮಲಾಪುರ ಪಟ್ಟಣವನ್ನು ಜನಗಣತಿ ಆಧಾರದ ಮೇಲೆ ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರಕ್ಕೆ ಈ ಹಿಂದೆಯೇ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಕಮಲಾಪುರ ಪಪಂ ಮುಖ್ಯಾಧಿಕಾರಿಗಳು 2021ರ ಡಿಸೆಂಬರ್ 20ರಂದು ಮತ್ತು ಜಿಲ್ಲಾಧಿಕಾರಿಗಳು ಫೆ. 21ರಂದು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಬಳಿಕ ಸರ್ಕಾರದ ಕಾರ್ಯದರ್ಶಿಗೆ ಸಲ್ಲಿಸಲಾಗಿತ್ತು. ಈ ಬಗ್ಗೆ ಪಟ್ಟಣ ಪಂಚಾಯತ್ನ ಸಭೆಯಲ್ಲೂ ನಿರ್ಣಯ ಅಂಗೀಕರಿಸಲಾಗಿತ್ತು.
ಕಮಲಾಪುರದ ಜನಸಂಖ್ಯೆ ಎಷ್ಟಿದೆ?
2011ರ ಜನಗಣತಿ ಅನ್ವಯ ಕಮಲಾಪುರದ ಜನಸಂಖ್ಯೆ 25,552 ಇದೆ. ವಾರ್ಷಿಕವಾಗಿ ಶೇ. 1.50ರಷ್ಟು ಜನಸಂಖ್ಯೆ ಬೆಳವಣಿಗೆಯಾಗಿದ್ದು, 2021ಕ್ಕೆ ಪಟ್ಟಣದ ಜನಸಂಖ್ಯೆ 29, 385 ಅಗುತ್ತದೆ. ಈ ಪಟ್ಟಣ 39.60 ಚ.ಕಿ.ಮೀ ವ್ಯಾಪ್ತಿ ಹೊಂದಿದ್ದು, ಪ್ರತಿ ಚ.ಕಿ.ಮೀ.ಗೆ 742 ಜನಸಾಂದ್ರತೆ ಹೊಂದಿದೆ. ಪ್ರಸ್ತುತ ಪಟ್ಟಣ ಪಂಚಾಯತ್ ಸರಹದ್ದನ್ನೇ ಪುರಸಭೆ ಸರಹದ್ದಾಗಿ ಗುರುತಿಸಲಾಗಿದೆ. ಹಾಗಾಗಿ ಪುರಸಭೆಯಾದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದಲೂ ಅನುದಾನ ಹರಿದು ಬರಲಿದೆ. ಇದರಿಂದ ಹಂಪಿಗೆ ಭೇಟಿ ನೀಡುವ ಪ್ರವಾಸಿಗರು ಕಮಲಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕಮಲಾಪುರ ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಕೈಗೊಂಡು ಈ ಭಾಗದಲ್ಲೂ ಉದ್ಯೋಗ ಸೃಷ್ಟಿಸಲು ಪುರಸಭೆಯಿಂದ ಅನುಕೂಲ ಆಗಲಿದೆ ಎಂಬುದು ಕಮಲಾಪುರ ಪಟ್ಟಣದ ಸದಸ್ಯರ ಅಭಿಪ್ರಾಯವಾಗಿದೆ.
-ಪಿ.ಸತ್ಯನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ