ದೇಶಾದ್ಯಂತ ನಿರುದ್ಯೋಗ ಪ್ರಮಾಣ ಇಳಿಕೆ : ಕರ್ನಾಟಕ, ಗುಜರಾತ್ನಲ್ಲಿ ಅತ್ಯಂತ ಕಡಿಮೆ
ಹರಿಯಾಣದಲ್ಲಿ ಅತೀ ಹೆಚ್ಚು ನಿರುದ್ಯೋಗ ದರ
Team Udayavani, Apr 4, 2022, 8:00 AM IST
ಹೊಸದಿಲ್ಲಿ: ಎರಡು ವರ್ಷಗಳಿಂದ ನಿರುದ್ಯೋಗದ ಸುಳಿಗೆ ಸಿಲುಕಿದ್ದ ದೇಶಕ್ಕೆ ಈಗ ಸಮಾಧಾನಕರ ಸುದ್ದಿ ಸಿಕ್ಕಿದೆ. ಕೊರೊನಾದ ಬಳಿಕ ದೇಶದ ಆರ್ಥಿಕತೆ ಸಹಜ ಸ್ಥಿತಿಗೆ ಮರಳುತ್ತಿದ್ದು, ನಿರುದ್ಯೋಗ ಪ್ರಮಾಣ ಇಳಿಮುಖವಾಗುತ್ತಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯಾಸ್ ಎಕಾನಮಿ (ಸಿಎಂಐಇ) ವರದಿ ಹೇಳಿದೆ.
ದೇಶದ ಒಟ್ಟು ನಿರುದ್ಯೋಗ ಪ್ರಮಾಣ ಪ್ರಸಕ್ತ ವರ್ಷದ ಫೆಬ್ರವರಿಯಲ್ಲಿ ಶೇ. 8.10 ಇದ್ದದ್ದು ಮಾರ್ಚ್ನಲ್ಲಿ ಶೇ.7.6ಕ್ಕೆ ಇಳಿಕೆಯಾಗಿದೆ ಎಂದು ಪ್ರತೀ ತಿಂಗಳ ದತ್ತಾಂಶವನ್ನು ನೀಡುವ ಸಿಎಂಐಇಯು ರವಿವಾರ ಬಿಡುಗಡೆ ಮಾಡಿರುವ ವರದಿಯಲ್ಲಿ ಹೇಳಿದೆ. ಎ. 2ರಂದು ಇದು ಮತ್ತಷ್ಟು ಇಳಿಮುಖವಾಗಿದ್ದು, ಶೇ. 7.5ಕ್ಕೆ ತಲುಪಿದೆ. ನಗರ ನಿರುದ್ಯೋಗ ಪ್ರಮಾಣ ಶೇ. 8.5ರಷ್ಟಿದ್ದರೆ, ಗ್ರಾಮೀಣ ಭಾಗದಲ್ಲಿ ಶೇ. 7.1ರಷ್ಟಿದೆ. ಈ ಬೆಳವಣಿಗೆಯು ದೇಶದ ಆರ್ಥಿಕತೆಯು ಹಳಿಗೆ ಮರಳುತ್ತಿರುವುದರ ಸೂಚಕ ಎಂದು ವರದಿ ತಿಳಿಸಿದೆ.
ವಿಶೇಷವೆಂದರೆ ಕರ್ನಾಟಕ ಮತ್ತು ಗುಜರಾತ್ನಲ್ಲಿ ಮಾರ್ಚ್ ತಿಂಗಳಲ್ಲಿ ಅತೀ ಕಡಿಮೆ ನಿರುದ್ಯೋಗ ದರ (ಶೇ. 1.8) ದಾಖಲಾಗಿದೆ. ಹರಿಯಾಣದಲ್ಲಿ ಅತ್ಯಧಿಕ ನಿರುದ್ಯೋಗವಿದ್ದು (ಶೇ.26.7), ರಾಜಸ್ಥಾನ, ಜಮ್ಮು – ಕಾಶ್ಮೀರ, ಬಿಹಾರ, ತ್ರಿಪುರ ಮತ್ತು ಪ. ಬಂಗಾಲ ಅನಂತರದ ಸ್ಥಾನಗಳಲ್ಲಿವೆ.
ಇದನ್ನೂ ಓದಿ : ಹುಣಸೂರು : ತಂದೆಯಿಂದಲೇ ನಡೆಯಿತಾ 4 ವರ್ಷದ ಮಗನ ಅಪಹರಣ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”