ಪುರಸಭೆ ಚುನಾವಣೆಗೂ ಮುನ್ನ ಲೆಕ್ಕಾಚಾರ


Team Udayavani, Apr 4, 2022, 9:50 AM IST

2wwadi

ವಾಡಿ: ಪಟ್ಟಣದ ಪುರಸಭೆಯ ಐದು ವರ್ಷ ಆಡಳಿತಾವಧಿ ಯಾವಾಗ ಕೊನೆಗೊಳ್ಳುತ್ತದೋ? ಚುನಾವಣೆ ಯಾವಾಗ ಘೋಷಣೆಯಾಗುತ್ತದೆಯೋ? ಎನ್ನುವ ಕಾತುರದಲ್ಲಿರುವ ಆಡಳಿತಾ ರೂಢ ಕಾಂಗ್ರೆಸ್‌ ಹಾಗೂ ಪ್ರತಿಪಕ್ಷ ಬಿಜೆಪಿಯ ಕಾರ್ಯಕರ್ತರಲ್ಲಿ ತಳಮಳ ಶುರುವಾಗಿದೆ.

ಚುನಾವಣೆ ಘೋಷಣೆಗೂ ಮುನ್ನವೇ ಗೆಲುವಿನ ರಣತಂತ್ರ ಹೆಣೆಯಲು ಎರಡೂ ಪಕ್ಷಗಳ ನಾಯಕರು ಗುಪ್ತ ಸಭೆಗಳನ್ನು ಸಂಘಟಿಸಿ ಪೂರ್ವ ಸಿದ್ಧತೆಗೆ ಮುಂದಾಗಿದ್ದಾರೆ. ಕಾಂಗ್ರೆಸ್‌ ಗಿಂತ ಒಂದು ಹೆಜ್ಜೆ ಮುಂದೆ ಹೋಗಿರುವ ಬಿಜೆಪಿ, ಪ್ರತಿಯೊಂದು ವಾರ್ಡ್‌ಗಳ ಮತದಾರರ ಪಟ್ಟಿಗಳನ್ನು ಪಡೆದು ತೆರೆಮರೆಯಲ್ಲಿ ರಾಜಕೀಯ ಚಟುವಟಿಕೆ ಆರಂಭಿಸಿದೆ.

ಪುರಸಭೆಯ ಸಾರ್ವತ್ರಿಕ ಚುನಾವಣೆ 2017 ಏ.9ರಂದು ನಡೆದಿದ್ದು, 2017ರ ನವೆಂಬರ್‌ 10ರಂದು ಮೊದಲ ಅವಧಿ ಅಧ್ಯಕ್ಷರಾಗಿ ಕಾಂಗ್ರೆಸ್‌ ನ ಮೈನಾಬಾಯಿ ಗೋಪಾಲ ರಾಠೊಡ, ಉಪಾಧ್ಯಕ್ಷರಾಗಿ ಮಲ್ಲಯ್ಯ ಗುತ್ತೇದಾರ ಪದಗ್ರಹಣ ಮಾಡಿದ್ದರು. ಮೊದಲ 30 ತಿಂಗಳ ಆಡಳಿತ ಅಧಿಕಾರವ 2020ರ ಮೇ 10ರಂದು ಕೊನೆಗೊಂಡಿತು. ಎರಡನೇ ಅವಧಿಯ ಅಧ್ಯಕ್ಷರಾಗಿ ಝರೀನಾಬೇಗಂ, ಉಪಾಧ್ಯಕ್ಷರಾಗಿ ತಿಮ್ಮಯ್ಯ ಪವಾರ 2020ರ ಸೆ.3ರಂದು ಪದಗ್ರಹಣ ಮಾಡಿದ್ದಾರೆ. 2017ರ ಸಾರ್ವತ್ರಿಕ ಚುನಾವಣೆ ನಡೆದ ದಿನಾಂಕದ ಪ್ರಕಾರ 2022 ಏ.9ಕ್ಕೆ ಪುರಸಭೆಯ ಆಡಳಿತದ ಐದು ವರ್ಷ ಅವಧಿ ಪೂರ್ಣಗೊಳ್ಳಲಿದೆ.

ಅಧ್ಯಕ್ಷ-ಉಪಾಧ್ಯಕ್ಷರ ಪದಗ್ರಹಣದ ದಿನಾಂಕದ ಪ್ರಕಾರ ಅಡಳಿತಾವಧಿ ಲೆಕ್ಕ ಮಾಡಿದ್ದಾದರೆ ಪ್ರಸಕ್ತ ಸಾಲಿನ ಅಕ್ಟೋಬರ್‌ ಅಥವಾ ನವೆಂಬರ್‌ ತಿಂಗಳಲ್ಲಿ ಎರಡು ತಿಂಗಳು ಮುಂಚಿತವಾಗಿಯೇ ಎರಡನೇ ಅವಧಿಯ 28 ತಿಂಗಳು ಪೂರ್ಣವಾಗಿ ಚುನಾವಣೆ ಘೋಷಣೆಯಾಗುವ ಸಾಧ್ಯತೆಗಳಿವೆ. ಹಿಂದಿನ ಚುನಾವಣೆಗಳಲ್ಲಿ ಬಹುಮತ ಪಡೆದು ನೇರವಾಗಿ ಪುರಸಭೆ ಗದ್ದುಗೆ ಹಿಡಿಯಲು ಸಾಧ್ಯವಾಗದ ಬಿಜೆಪಿಗೆ ಈ ಬಾರಿ ಕಾಂಗ್ರೆಸ್‌ ಪಕ್ಷವನ್ನು ಸೋಲಿಸಿ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೇರಬೇಕು ಎನ್ನುವ ಆಶಯವಿದ್ದು, ಬಿಜೆಪಿ ನಾಯಕರು ಸದ್ಯ ಎರಡು ಸುತ್ತಿನ ಸಭೆ ನಡೆಸಿದ್ದಾರೆ.

ಕಳೆದ 15 ವರ್ಷಗಳಿಂದ ಪುರಸಭೆ ಅಧಿಕಾರದಲ್ಲಿರುವ ಕಾಂಗ್ರೆಸ್‌ ತನ್ನ ಪ್ರತಿಷ್ಠೆ ಉಳಿಸಿಕೊಳ್ಳುವ ಕಸರತ್ತು ಮಾಡುತ್ತಿದೆ. ವಿಧಾನಸಭೆ ಚುನಾವಣೆಗೂ ಮುಂಚೆಯೇ ನಡೆಯಲಿರುವ ಚಿತ್ತಾಪುರ ಮತಕ್ಷೇತ್ರದ ವಾಡಿ ಪುರಸಭೆ ಚುನಾವಣೆ ಗೆಲ್ಲುವುದು ಶಾಸಕ ಪ್ರಿಯಾಂಕ್‌ ಖರ್ಗೆ ಅವರಿಗೂ ಸವಾಲಾಗಿದೆ. ಎರಡನೇ ಅವಧಿಯ ಆಡಳಿತದ ಮೂವತ್ತು ತಿಂಗಳು ಪೂರ್ಣಗೊಳ್ಳುತ್ತದೋ ಅಥವಾ ಅದಕ್ಕೂ ಮೊದಲೇ ಸರ್ಕಾರ ಚುನಾವಣೆ ಘೋಷಣೆ ಮಾಡುತ್ತದೋ ಎನ್ನುವ ಗೊಂದಲ ಕಾಂಗ್ರೆಸ್‌-ಬಿಜೆಪಿ ನಾಯಕರನ್ನು ಕಾಡುತ್ತಿದೆ.

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಆಡಳಿತಾವಧಿ ಚುನಾವಣೆ ದಿನಾಂಕದಿಂದ ಶುರುವಾಗಿವುದಿಲ್ಲ. ಚುನಾವಣಾಧಿಕಾರಿಗಳು ನಡೆಸುವ ಚುನಾಯಿತ ಸದಸ್ಯರ ಮೊದಲ ಸಭೆಯಿಂದ ಐದು ವರ್ಷ ಅವಧಿಯ ಗಣತಿಯಾಗುತ್ತದೆ. ಎರಡನೇ ಅವಧಿಗೆ ಮೀಸಲಾತಿ ಪ್ರಕಟವಾಗಲು ತಡವಾಗಿದ್ದನ್ನು ಲೆಕ್ಕಕ್ಕೆ ತೆಗೆದುಕೊಳ್ಳಲಾಗುವುದಿಲ್ಲ. ವಾಡಿ ಪುರಸಭೆಯ ಜನಪ್ರತಿನಿಧಿಗಳ ಐದು ವರ್ಷದ ಆಡಳಿತಾವಧಿ 2017ರ ನ.10ರಂದು ಆರಂಭಗೊಂಡಿದ್ದು, 2022ರ ನ.10ರಂದು ಕೊನೆಗೊಳ್ಳಲಿದೆ. -ಉಮಾಕಾಂತ ಹಳ್ಳೆ ತಹಶೀಲ್ದಾರ್‌, ಚಿತ್ತಾಪುರ

-ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.