ಜೀವನ ಮೌಲ್ಯಗಳ ಸಂರಕ್ಷಣೆಗಾಗಿ ಶ್ರಮಿಸಿ

ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವ

Team Udayavani, Apr 4, 2022, 11:38 AM IST

3

ಧಾರವಾಡ: ಆಧುನಿಕ ನವ ನಾಗರಿಕತೆಯ ಸಮಾಜದಲ್ಲಿ ಬಹಳಷ್ಟು ಪ್ರಗತಿ ಸಾಧಿಸಿದ್ದೇವೆ. ಆದರೆ ನೆಮ್ಮದಿಯ ಶಾಂತಿಪೂರ್ಣ ಬದುಕಿಗೆ ಅಗತ್ಯವಾದ ಅಂಶಗಳನ್ನು ಮರೆಯುತ್ತಿದ್ದೇವೆ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರು ಡಾ| ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯರು ಹೇಳಿದರು.

ಕವಿಸಂನಲ್ಲಿ ಹಮ್ಮಿಕೊಂಡಿದ್ದ ವೀರಶೈವ-ಲಿಂಗಾಯತ ಧರ್ಮ ಸಂಸ್ಥಾಪಕ ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಮನುಷ್ಯನ ಬದುಕು ಅತೃಪ್ತಿ-ಅಸಮಾಧಾನದಿಂದ ಕೂಡಿದ್ದು, ನೀತಿ-ನಿಯಮ ಇಲ್ಲದ ಸಮಾಜ ಮತ್ತು ಧರ್ಮ ಎಂದಿಗೂ ಬೆಳೆಯುವುದಿಲ್ಲ. ಜೀವನ ಮೌಲ್ಯಗಳ ಸಂರಕ್ಷಣೆಗಾಗಿ ಎಲ್ಲರೂ ಶ್ರಮಿಸುವ ಅಗತ್ಯವಿದೆ ಎಂದರು.

ಸುಳ್ಳದ ಪಂಚಗೃಹ ಹಿರೇಮಠದ ಶಿವಸಿದ್ಧರಾಮೇಶ್ವರ ಶಿವಾಚಾರ್ಯರು ಅಧ್ಯಕ್ಷತೆ ವಹಿಸಿದ್ದರು.

ಅಮ್ಮಿನಬಾವಿ ಪಂಚಗೃಹ ಹಿರೇಮಠದ ಅಭಿನವ ಶಾಂತಲಿಂಗ ಶಿವಾಚಾರ್ಯರ ನೇತೃತ್ವದಲ್ಲಿ ಜರುಗಿದ ಸಮಾರಂಭದಲ್ಲಿ ಶಿರಕೋಳ ಹಿರೇಮಠದ ಗುರುಸಿದ್ಧೇಶ್ವರ ಶಿವಾಚಾರ್ಯರು, ಹಣ್ಣಿಕೇರಿ ಹಿರೇಮಠದ ರೇವಣಸಿದ್ಧ ಶಿವಾಚಾರ್ಯರು, ಬ್ಯಾಹಟ್ಟಿ ಹಿರೇಮಠದ ಮರುಳಸಿದ್ಧ ಶಿವಾಚಾರ್ಯರು, ಶಿವಮೊಗ್ಗ ಜಿಲ್ಲೆ ಮಳಲಿಮಠದ ನಾಗಭೂಷಣ ಶಿವಾಚಾರ್ಯರು, ಮೊರಬ ಹಿರೇಮಠದ ಸೋಮಶೇಖರ ಶಿವಾಚಾರ್ಯರು ಹಾಗೂ ಹೊಸಯಲ್ಲಾಪೂರ ಹಿರೇಮಠದ ಗದಗಯ್ಯ ಸ್ವಾಮೀಜಿ ಇದ್ದರು.

ಶಾಸಕ ಅಮೃತ ದೇಸಾಯಿ ಸಮಾರಂಭಕ್ಕೆ ಚಾಲನೆ ನೀಡಿದರು. ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಮಿತಿ ಸಂಚಾಲಕರಾದ ರಾಜೇಂದ್ರ ಹಿರೇಮಠ, ಸರೋಜಾ ಪಾಟೀಲ, ವಿಜಯಲಕ್ಷ್ಮೀ ಚಿಕ್ಕಮಠ, ಚನ್ನಬಸಯ್ಯ ಬಾಳೆದಮಠ, ಅಮಿತ ಪಾಟೀಲ, ಗುರುಸ್ವಾಮಿ ಹಿರೇಮಠ, ಮಹೇಶ ಗುರುಸ್ಥಲಮಠ, ಮೃತ್ಯುಂಜಯ ರೊಟ್ಟಿಮಠ, ಮಹೇಶ್ವರಿ ಹಿರೇಮಠ, ಶಕುಂತಲಾ ಹಿರೇಮಠ, ಬಸವರಾಜ ಕುರಹಟ್ಟಿಮಠ ಇದ್ದರು.

ಜಯಲಕ್ಷ್ಮೀ ಹಿರೇಮಠ ನಿರೂಪಿಸಿದರು. ಮಂಜುನಾಥ ಹಿರೇಮಠ ಸ್ವಾಗತಿಸಿದರು. ಈಶ್ವರ ಹಿರೇಮಠ ವಂದಿಸಿದರು. ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ರಂಭಾಪುರಿ ಸ್ವಾಮೀಜಿ ಸನ್ಮಾನಿಸಿದರು. ಹೊಸಯಲ್ಲಾಪೂರ ಹಿರೇಮಠದಿಂದ ಕರ್ನಾಟಕ ವಿದ್ಯಾವರ್ಧಕ ಸಂಘದವರೆಗೂ ರೇಣುಕಾಚಾರ್ಯರ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ಜರುಗಿತು.

ಧರ್ಮದ ಮೂಲ ಸ್ವರೂಪ ಬದಲಿಸಲಾಗದು: ಕೆಲವರು ಪಂಚ ಪೀಠಗಳ ಸತ್ಕಾರ್ಯ ಮರೆತು ಮೂಢನಂಬಿಕೆ ಎಂದು ಬಿಂಬಿಸುತ್ತಿದ್ದು, ಇಂತಹ ಅಪಪ್ರಚಾರಕ್ಕೆ ಕಿವಿಗೊಡಬಾರದು. ಕೆಲವು ಮಠಾಧೀಶರು, ನಾಸ್ತಿಕ ಬಂಡಾಯ ಸಾಹಿತಿಗಳು ಜನರಿಗೆ ತಪ್ಪು ಮಾರ್ಗದರ್ಶನ ನೀಡುತ್ತಿದ್ದಾರೆ. ಕುಂಕುಮ ಏಕೆ ಇಡುತ್ತೀರಿ, ಬಳೆ ಏತಕ್ಕೆ ಹಾಕುತ್ತೀರಿ, ಹೂ ಏಕೆ ಮುಡಿಯುತ್ತೀರಿ, ದೇವರಿಗೆ ಹಾಲಿನ ಅಭಿಷೇಕ ಏತಕ್ಕಾಗಿ, ಮದುವೆಯಲ್ಲಿ ಮಂಗಲಾಕ್ಷತೆ ಹಾಕುವ ಬಗ್ಗೆಯೂ ಪ್ರಶ್ನೆ ಮಾಡುತ್ತಿದ್ದಾರೆ. ಈ ಮೂಲಕ ನಮ್ಮ ನಿಮ್ಮ ಸಂಬಂಧ ಛಿದ್ರ ಮಾಡಲು ಪ್ರಯತ್ನ ಮಾಡಲಾಗುತ್ತಿದೆ. ಯಾರೂ ಏನೇ ಪ್ರಯತ್ನ ಮಾಡಿದರೂ ಮೂಲ ಧರ್ಮದ ಸ್ವರೂಪವನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ ಎಂದು ರಂಭಾಪುರಿ ಶ್ರೀಗಳು ಹೇಳಿದರು.

ಟಾಪ್ ನ್ಯೂಸ್

K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ

K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ

T20 World Cup; Despite being injured, Taskin’s place in the Bangladesh team!

T20 World Cup; ಗಾಯಗೊಂಡಿದ್ದರೂ ಬಾಂಗ್ಲಾ ತಂಡದಲ್ಲಿ ತಸ್ಕಿನ್‌ಗೆ ಸ್ಥಾನ!

Pakistan Govt Airlines to Private: PM Shehbaz Sharif

Pakistan ಸರ್ಕಾರಿ ವಿಮಾನ ಕಂಪನಿಗಳು ಖಾಸಗಿಗೆ: ಪಿಎಂ ಶೆಹಬಾಜ್‌ ಷರೀಫ್

Why Ganga river is not clean despite spending Rs 20000 crore: Congress

Varanasi; 20000 ಕೋಟಿ ರೂ. ವ್ಯಯಿಸಿದರೂ ಗಂಗಾ ನದಿ ಏಕೆ ಶುದ್ಧವಾಗಿಲ್ಲ: ಕಾಂಗ್ರೆಸ್‌

Modi Code of Conduct: TMC Accused, Complaint Submitted

Election; ಮೋದಿ ನೀತಿ ಸಂಹಿತೆ: ಟಿಎಂಸಿ ಆರೋಪ, ದೂರು ಸಲ್ಲಿಕೆ!

22-harangi

Madikeri: ಹಾರಂಗಿ ನಾಲೆ ಸಮೀಪ ವ್ಯಕ್ತಿಯ ಶವ ಪತ್ತೆ

HDK ನಾನೂ ಪೆನ್‌ಡ್ರೈವ್‌ ಬಿಡುತ್ತೇನೆ, ದೊಡ್ಡ ತಿಮಿಂಗಲ ಹಿಡಿಯುತ್ತಾರಾ?

HDK ನಾನೂ ಪೆನ್‌ಡ್ರೈವ್‌ ಬಿಡುತ್ತೇನೆ, ದೊಡ್ಡ ತಿಮಿಂಗಲ ಹಿಡಿಯುತ್ತಾರಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Karnataka Rain ರಾಜ್ಯದ 5 ಜಿಲ್ಲೆಗಳಲ್ಲಿ ಕೃತ್ತಿಕಾ ಮಳೆ ಅಬ್ಬರ

Karnataka Rain ರಾಜ್ಯದ 5 ಜಿಲ್ಲೆಗಳಲ್ಲಿ ಕೃತ್ತಿಕಾ ಮಳೆ ಅಬ್ಬರ

1-eqwewqeqwe

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

1-wqewqwewq

Rain; ಬೆಳಗಾವಿ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ

K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ

T20 World Cup; Despite being injured, Taskin’s place in the Bangladesh team!

T20 World Cup; ಗಾಯಗೊಂಡಿದ್ದರೂ ಬಾಂಗ್ಲಾ ತಂಡದಲ್ಲಿ ತಸ್ಕಿನ್‌ಗೆ ಸ್ಥಾನ!

Mumbai; ಉದ್ಧವ್‌ ಬಣದ ಅಭ್ಯರ್ಥಿ ಅನಿಲ್‌ ದೇಸಾಯಿ ರ್ಯಾಲಿಯಲ್ಲಿ ಇಸ್ಲಾಮಿಕ್‌ ಧ್ವಜ ಹಾರಾಟ?

Mumbai; ಉದ್ಧವ್‌ ಬಣದ ಅಭ್ಯರ್ಥಿ ಅನಿಲ್‌ ದೇಸಾಯಿ ರ್ಯಾಲಿಯಲ್ಲಿ ಇಸ್ಲಾಮಿಕ್‌ ಧ್ವಜ ಹಾರಾಟ?

Pakistan Govt Airlines to Private: PM Shehbaz Sharif

Pakistan ಸರ್ಕಾರಿ ವಿಮಾನ ಕಂಪನಿಗಳು ಖಾಸಗಿಗೆ: ಪಿಎಂ ಶೆಹಬಾಜ್‌ ಷರೀಫ್

Why Ganga river is not clean despite spending Rs 20000 crore: Congress

Varanasi; 20000 ಕೋಟಿ ರೂ. ವ್ಯಯಿಸಿದರೂ ಗಂಗಾ ನದಿ ಏಕೆ ಶುದ್ಧವಾಗಿಲ್ಲ: ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.