ಮದ್ಯಪಾನ ನಿರ್ಮೂಲನೆಯೇ ನಮ್ಮ ಉದ್ದೇಶ

ಮೌನ ತಪಸ್ವಿ ಶ್ರೀ ಜಡೆಯೊಡೆಯ ಶಾಂತಲಿಂಗ ಸ್ವಾಮಿಗಳ ಯುಗಾದಿ-ಅಷ್ಟ ದಶಮಾನೋತ್ಸವ ಸಮಾರಂಭ

Team Udayavani, Apr 4, 2022, 11:59 AM IST

5

ಹುಬ್ಬಳ್ಳಿ: ಮದ್ಯಪಾನದಿಂದ ಬಹಳಷ್ಟು ಸಂಸಾರಗಳು ಬೀದಿಪಾಲಾಗಿವೆ, ಆಗುತ್ತಲೇ ಇವೆ. ಇದನ್ನು ನಿರ್ಮೂಲನೆ ಮಾಡುವುದೇ ನಮ್ಮ ಉದ್ದೇಶ ಎಂದು ಶ್ರೀ ಜಡೆಯ ಶಾಂತಲಿಂಗ ಸ್ವಾಮೀಜಿ ಹೇಳಿದರು.

ಸರ್‌ ಸಿದ್ದಪ್ಪ ಕಂಬಳಿ ರಸ್ತೆಯ ಬುಳ್ಳಾ ಪ್ರೆಸ್ ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮೌನ ತಪಸ್ವಿ ಶ್ರೀ ಜಡೆಯೊಡೆಯ ಶಾಂತಲಿಂಗ ಸ್ವಾಮಿಗಳ ಯುಗಾದಿ ಮತ್ತು ಅಷ್ಟ ದಶಮಾನೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಮದ್ಯಪಾನದಿಂದ ಶರೀರ, ಸಂಸಾರ ಹಾಳಾಗುವುದರ ಜೊತೆಗೆ ಹಣ, ಮರ್ಯಾದೆ ಹೋಗುತ್ತದೆ. ಎಲ್ಲ ರೀತಿಯಿಂದಲೂ ಹಾನಿಯಾಗಿದೆ. ಇದನ್ನು ಸಾಧ್ಯವಾದಷ್ಟು ದೂರ ಮಾಡಬೇಕು. ಸರಕಾರ ಈ ಬಗ್ಗೆ ಯೋಚಿಸಬೇಕು. ನಾವು ಮಾಡುವ ಯಾವುದೇ ಕೆಲಸದ ಉದ್ದೇಶ ಒಳ್ಳೆಯದಾಗಿರಬೇಕು. ಅಂದಾಗ ಮಾತ್ರ ಯಶಸ್ಸು ದೊರೆಯುತ್ತದೆ ಎಂದರು.

ಮಾಜಿ ಸಿಎಂ ಜಗದೀಶ ಶೆಟ್ಟರ ಮಾತನಾಡಿ, ಭಾರತದಲ್ಲಿ ಸಾಮರಸ್ಯ ವಾತಾವರಣ ಇರುವುದರಿಂದಲೇ ವಿಶ್ವದಲ್ಲಿ ತನ್ನದೆಯಾದ ವೈಶಿಷ್ಟ್ಯತೆ ಹೊಂದಿದೆ. ಇದಕ್ಕೆಲ್ಲ ನಮ್ಮಲ್ಲಿಯ ಧಾರ್ಮಿಕತೆ, ಸಂಸ್ಕೃತಿ ಪರಂಪರೆಯೇ ಮೂಲ ಕಾರಣ. ಸಾಮರಸ್ಯದಿಂದ ಬದುಕುವುದು ಆಗಬೇಕಾದರೆ ದುದನಿಯ ಜಡೆಯ ಶ್ರೀಗಳಂಥವರ ಆಶೀರ್ವಾದ ಮುಖ್ಯ. ಅವರ ಸಂದೇಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಜಡೆ ಹಿರೇಮಠದ ಘನ ಬಸವ ಅಮರೇಶ್ವರ ಶಿವಾಚಾರ್ಯರು ಮಾತನಾಡಿ, ರಾಜ್ಯದಲ್ಲಿ ಸ್ವಾಮಿಗಳು ಹೆಚ್ಚಾಗಿದ್ದಾರೆ. ಆದರೆ ಸಂತರು, ಮಹಾಂತರು, ಸಾಧಕರು ಸಿಗುವುದು ಬಹಳ ಅಪರೂಪ. ಅಂಥವರಲ್ಲಿ ಜಡೆಯ ಶಾಂತಲಿಂಗ ಶ್ರೀಗಳು ಅಗ್ರಗಣ್ಯರಾಗಿದ್ದಾರೆ. ಮಹಾತ್ಮರು, ಸಂತರಿಗೆ ಕಷ್ಟಗಳು ತಪ್ಪಿಲ್ಲ. ಅದನ್ನು ಗೆದ್ದು ಬಂದವರೇ ಯೋಗಿಗಳು ಎಂದರು.

ಗೊಗ್ಗೆಹಳ್ಳಿಯ ಪಂಚಸಂಸ್ಥಾನ ಮಠದ ಶ್ರೀ ಸಂಗಮೇಶ್ವರ ಶಿವಾಚಾರ್ಯರು, ಮೂಡಿಯ ಸದಾಶಿವ ಸ್ವಾಮೀಜಿ, ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಶಾಸಕ ಡಿ.ಆರ್‌. ಪಾಟೀಲ ಮಾತನಾಡಿದರು.

ಶಾಸಕ ಶ್ರೀನಿವಾಸ ಮಾನೆ, ವಿಆರ್‌ಎಲ್‌ ಸಮೂಹ ಸಂಸ್ಥೆ ಚೇರ್ಮೆನ್‌ ಡಾ| ವಿಜಯ ಸಂಕೇಶ್ವರ, ಕೆಎಲ್‌ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಅಣ್ಣಿಗೇರಿಯ ಆರ್‌.ಎ. ದೇಸಾಯಿ, ಮಲ್ಲಿಕಾರ್ಜುನ ಸಾವಕಾರ, ವೀರಣ್ಣ ಮಳಗಿ, ಬುಳ್ಳಾ ಕುಟುಂಬದ ಸದಸ್ಯರು ಮೊದಲಾದವರಿದ್ದರು.

ಯುಗಾದಿಗೆ ಒಮ್ಮೆ ಮಾತ್ರ ಮಾತನಾಡುವ ಮೌನತಪಸ್ವಿ ಶ್ರೀಗಳ ಆಶೀರ್ವಚನ ಕೇಳಲು ಬೆಂಗಳೂರು, ಕಲಬುರಗಿ, ಸೊಲ್ಲಾಪುರ, ದುದನಿ, ವಿಜಯಪುರ, ಬಾಗಲಕೋಟೆ, ಗದಗ, ಶ್ಯಾಗೋಟಿ, ಹುಬ್ಬಳ್ಳಿ-ಧಾರವಾಡ ಹಾಗೂ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು. ಪಿ.ಡಿ. ಶಿರೂರ ಪ್ರಾಸ್ತಾವಿಕ ಮಾತನಾಡಿದರು.

ಎಲ್ಲ ಧರ್ಮಗಳ ಗುರಿ ಒಂದೇ ಆಗಿದೆ. ಅವರವರ ಆಚರಣೆಯ ಮಾರ್ಗ ಬೇರೆ ಬೇರೆ ಆಗಿದೆ. ಅವರ ಧರ್ಮ ಅವರಿಗೆ ಶ್ರೇಷ್ಠ. ಅವರಿಗೆ ಅನುಕೂಲವಾಗುವ ದಾರಿಯಲ್ಲಿ ಅವರು ಹೋಗುತ್ತಾರೆ. ಆದರೆ ನಿಮ್ಮ ಗುರುಗಳು ಹೇಳಿದ ಮಾರ್ಗ ಮಾತ್ರ ಬಿಡಬೇಡಿ. –ಶ್ರೀ ಜಡೆಯ ಶಾಂತಲಿಂಗ ಸ್ವಾಮೀಜಿ

ಟಾಪ್ ನ್ಯೂಸ್

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

RIshab Panth

RCB ವಿರುದ್ಧ ನಾನು ಆಡಿದ್ದರೆ…: ಬಿಸಿಸಿಐ ನಿರ್ಧಾರದ ವಿರುದ್ಧ ಪಂತ್ ಅಸಮಾಧಾನ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

NewsClick ಸಂಪಾದಕ ಪ್ರಬೀರ್‌ ಬಂಧನ ಕಾನೂನು ಬಾಹಿರ; ಬಿಡುಗಡೆಗೆ ಸುಪ್ರೀಂ ಆದೇಶ

NewsClick ಸಂಪಾದಕ ಪ್ರಬೀರ್‌ ಬಂಧನ ಕಾನೂನು ಬಾಹಿರ; ಬಿಡುಗಡೆಗೆ ಸುಪ್ರೀಂ ಆದೇಶ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Fraud: ಉದ್ಯೋಗ ನೆಪದಲ್ಲಿ 2 ಕೋಟಿ ರೂ. ವಂಚನೆ; ಸಿಐಡಿ ಲೇಡಿ ಆಫೀಸರ್‌ ಸೆರೆ

Fraud: ಉದ್ಯೋಗ ನೆಪದಲ್ಲಿ 2 ಕೋಟಿ ರೂ. ವಂಚನೆ; ಸಿಐಡಿ ಲೇಡಿ ಆಫೀಸರ್‌ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Hubli: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಭೀಕರ ಹತ್ಯೆ!

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Karnataka Rain ರಾಜ್ಯದ 5 ಜಿಲ್ಲೆಗಳಲ್ಲಿ ಕೃತ್ತಿಕಾ ಮಳೆ ಅಬ್ಬರ

Karnataka Rain ರಾಜ್ಯದ 5 ಜಿಲ್ಲೆಗಳಲ್ಲಿ ಕೃತ್ತಿಕಾ ಮಳೆ ಅಬ್ಬರ

1-eqwewqeqwe

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

1-wqewqwewq

Rain; ಬೆಳಗಾವಿ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

RIshab Panth

RCB ವಿರುದ್ಧ ನಾನು ಆಡಿದ್ದರೆ…: ಬಿಸಿಸಿಐ ನಿರ್ಧಾರದ ವಿರುದ್ಧ ಪಂತ್ ಅಸಮಾಧಾನ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

1-a-l-1

Art of Living ಗ್ಲೋಬಲ್ ಹ್ಯಾಪಿನೆಸ್ ಕಾರ್ಯಕ್ರಮದಲ್ಲಿ 87 ದೇಶಗಳು ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.