ಚುನಾವಣೆಯಲ್ಲಿ ಜಯಪ್ರಕಾಶ್ ನಾಯ್ಡುಗೆ ತಕ್ಕಪಾಠ ಕಲಿಸಿದ್ದೇವೆ : ಅಮರೇಶ್


Team Udayavani, Apr 4, 2022, 12:28 PM IST

ಚುನಾವಣೆಯಲ್ಲಿ ಜಯಪ್ರಕಾಶ್ ನಾಯ್ಡುಗೆ ತಕ್ಕಪಾಠ ಕಲಿಸಿದ್ದೇವೆ : ಅಮರೇಶ್

ಬೇತಮಂಗಲ : ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡದೆ ಗುಂಪುಗಾರಿಕೆಯನ್ನು ತಡೆಯದೆ, ಪ್ರತಿ ಚುನಾವಣೆಯಲ್ಲೂ ಒಳ ಒಪ್ಪಂದಗಳನ್ನು ಮಾಡಿಕೊಂಡು ಪಕ್ಷದ್ರೋಹ ಮಾಡುತ್ತಿರುವ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಜಯಪ್ರಕಾಶ್ ನಾಯ್ಡುಗೆ ಈ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಾಗಿದೆ ಎಂದು ಮುಖಂಡ ಭಟ್ರಕುಪ್ಪ ಅಮರೇಶ್ ಟಾಂಗ್ ನೀಡಿದರು.

ಪಟ್ಟಣದ ಬಸ್ ನಿಲ್ಧಾಣದಲ್ಲಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಆಯ್ಕೆಯಾದ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿ ಮಾತನಾಡಿದರು.

ತಾಲೂಕಿನಲ್ಲಿ ಗುಂಪುಗಾರಿಕೆ ಇರೋದು ಪಕ್ಷದ ಹೈಕಮಾಂಡ್ ವರೆಗೂ ಗೊತ್ತಿದೆ. ಜಯಪ್ರಕಾಶ್ ಅಧ್ಯಕ್ಷರಾದ ಮೇಲೆ ಇವೆಲ್ಲವನ್ನು ಸರಿ ಮಾಡದೆ, ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳದೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆಂದು ಗಂಭೀರ ಆರೋಪ ಮಾಡಿದರು.

ಮಾಜಿ ಶಾಸಕ ವೈ.ಸಂಪಂಗಿ ನೇತೃತ್ವದಲ್ಲಿ 10 ಸ್ಥಾನಗಳಿಗೆ ಪಕ್ಷದ ಕಾರ್ಯಕರ್ತರ ಗೆಲುವಿಗೆ ಬುನಾದಿ ಹಾಕಿದ್ದರು. ಆದರೆ ಜಯಪ್ರಕಾಶ್ ನಾಯ್ಡು ಕಾಂಗ್ರೆಸ್ ಜತೆ ಒಪ್ಪಂದ ಮಾಡಿಕೊಂಡು ಹಿನಾಯವಾಗಿ ಸೋಲು ಕಂಡಿದ್ದಾರೆ. ಇದಕ್ಕೆಲ್ಲ ಕಾರಣ ನಿಷ್ಠಾವಂತ, ಮೂಲ ಬಿಜೆಪಿಗರನ್ನು ಕಡೆಗಣಿಸಿ ಏಕಪಕ್ಷಿಯ ನಿರ್ಧಾರಗಳನ್ನು ಕೈಗೊಂಡು ಒಳ ಒಪ್ಪಂದಗಳನ್ನು ಮಾಡಿಕೊಂಡಿರುವುದು ಎಂದು ದೂರಿದರು.

ಇದನ್ನೂ ಓದಿ : ಕುಣಿಗಲ್ : ಪರೀಕ್ಷೆಗೆ ತೆರಳಲು ತ್ರಿಬಲ್ ರೈಡ್: ಬೈಕ್ ಅಪಘಾತವಾಗಿ SSLC ವಿದ್ಯಾರ್ಥಿ ಸಾವು

ಪ್ರಪ್ರಥಮವಾಗಿ ಕೆಜಿಎಫ್ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಚುನಾವಣೆಯಲ್ಲಿ 13 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆಲವು ಸಾಧಿಸಿದ್ದು, ಇತಿಹಾಸ ಸೃಷ್ಠಿಯಾಗಿದೆ ಎಂದರು. ಎಲ್ಲಾ ನೂತನ ನಿರ್ದೇಶಕರಿಗೆ ಶುಭ ಹಾರೈಸಿದರು. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಹೈಕಮಾಂಡ್ ಭಿ.ಪಾರಂ ನೀಡುವ ಅಭ್ಯರ್ಥಿಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ ಎಂದರು.

ನೂತನ ನಿರ್ದೇಶಕ ಪ್ರವೀಣ್ ಕುಮಾರ್ ಮಾತನಾಡಿ, ಕೆಜಿಎಫ್ ಕ್ಷೇತ್ರದಲ್ಲಿ ಬಿಜೆಪಿ ಬಲಿಷ್ಠವಾಗಿದೆ. ಇದನ್ನು ಚದುರಿಸಲು ಯಾರಿಂದ ಸಾಧ್ಯವಿಲ್ಲ, ಪ್ರಥಮ ಬಾರಿಗೆ ಸಹಕಾರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ಇದು ಇತಿಹಾಸ ಪುಟಗಳಲ್ಲಿ ಸೇರಲಿದೆ. ಮುಂದಿನ ದಿನಗಳಲ್ಲಿಯೂ ಸಹ ಬಿಜೆಪಿ ಹಿಡಿತ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್-ಬಿಜೆಪಿಗೆ ಮುಖಭಂಗ: ವೈ.ಸಂಪಂಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಸೋಲಿಸಲು ಬಿ.ಟೀಂ ಬಿಜೆಪಿ ಪಕ್ಷದ ಅಧ್ಯಕ್ಷರು, ಕೆಲವು ಮುಖಂಡರು, ಕಾಂಗ್ರೆಸ್ ಶಾಸಕಿ ಎಂ.ರೂಪಕಲಾ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಗೋವಿಂದಗೌಡ ಪಣತೊಟ್ಟಿದ್ದರು ಆದರೆ ಮತದಾರ ಪ್ರಭುಗಳು ತಕ್ಕ ಶಾಸ್ತಿ ಮಾಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಗೆ ಈ ಫಲಿತಾಂಶ ದಿಕ್ಸೂಚಿಯಾಗಲಿದೆ ಎಂದರು. ಕಾಂಗ್ರೆಸ್ ಮುಲುಗುವ ದೋಣಿಯಾಗಿದೆ. ಬಿಜೆಪಿ ಬಲಿಷ್ಠವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಗಂಗಾವತಿ ಪೊಲೀಸರ ಭರ್ಜರಿ ಬೇಟೆ : 6 ತಿಂಗಳಲ್ಲಿ 33 ಬೈಕ್ ಕದ್ದ ಆರೋಪಿಯ ಬಂಧನ

ಹೈಕೆಮಾಂಡ್ ಸೂಚನೆಯಂತೆ ವೈ.ಸಂಪಂಗಿ ನಡೆದುಕೊಂಡಿಲ್ಲ:ಜಯಪ್ರಕಾಶ್
ಟಿಎಪಿಎಂಸಿಎಸ್ ನಿರ್ದೇಶಕರ 10 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ತಲಾ 5 ಸ್ಥಾನಗಳನ್ನು ಹಂಚಿಕೊಳ್ಳಲು ಹೈಕೆಮಾಂಡ್ ತಮಗೆ ಹಾಗೂ ವೈ.ಸಂಪಂಗಿ ಅವರಿಗೆ ಸೂಚನೆ ನೀಡಿತ್ತು ಆದರೆ ವೈ.ಸಂಪಂಗಿ ಹೈಕೆಮಾಂಡ್ ಆದೇಶಕ್ಕೆ ಕ್ಯಾರೆ ಅನ್ನದೆ 10 ಮಂದಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದರು. ಇದರಿಂದ ನಿಷ್ಠಾವಂತ ಕಾರ್ಯಕರ್ತ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಈ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತರಲಾಗಿದೆ ಎಂದು ಕೆಜಿಎಫ್ ಗ್ರಾಮಾಂತರ ಮಂಡಲ ಅಧ್ಯಕ್ಷ ಜಯಪ್ರಕಾಶ್ ನಾಯ್ಡು ಉದಯವಾಣಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ಪಿ.ಎನ್ ಪುರುಷೋತ್ತಮ್, ಮಂಜುನಾಥ, ಪ್ರವೀಣ್, ಗ್ರಾಪಂ ಅಧ್ಯಕ್ಷ ಸುನೀಲ್, ಮಾಜಿ ಅಧ್ಯಕ್ಷ ಹುಲ್ಕೂರು ಶ್ರೀನಿವಾಸ್, ಮುರಳಿ ಮೋಹನ್, ಹಿರಿಯ ಮುಖಂಡರಾದ ಡೇರಿ ವೆಂಕಟೇಶ್, ವಿಜಿ ಕುಮಾರ್, ಗ್ರಾಪಂ ಸದಸ್ಯ ಪ್ರಸಾದ್, ನಾರಾಯಣಸ್ವಾಮಿ, ಮಾರಸಂದ್ರ ಬಾಬು, ಧನುಷ್ ನಾಯ್ಡು, ವಿಜಯ್ ಭಾಸ್ಕರ್, ಶ್ರೀಪತಿ ಹಾಗೂ ಪಕ್ಷದ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.