ಹೀಗೆ ಮಾಡಿದರೆ ಬಿಜೆಪಿ ಮುಕ್ತ ಭಾರತವಾಗಲಿದೆ: ಹೆಚ್ ಡಿಕೆ ಕಿಡಿ

ಇಷ್ಟು ವರ್ಷ ಇಲ್ಲದೇ ಇರುವ ಧ್ವನಿವರ್ಧಕ ವಿವಾದ ಈಗ ಯಾಕೆ ?

Team Udayavani, Apr 4, 2022, 2:27 PM IST

jds

ಬೆಂಗಳೂರು: ”ಇಷ್ಟು ವರ್ಷ ಇಲ್ಲದೇ ಇರುವ ಧ್ವನಿವರ್ಧಕ ವಿವಾದ ಈಗ ಯಾಕೆ ? ಇದು ಕರ್ನಾಟಕ, ಉತ್ತರ ಪ್ರದೇಶವಲ್ಲ, ಬಿಜೆಪಿಯವರು ಕಾಂಗ್ರೆಸ್ ಮುಕ್ತ ಎಂದು ಹೇಳಿದ್ದರು. ಹೀಗೆ ಮಾಡಿದರೆ ಬಿಜೆಪಿ ಮುಕ್ತವಾಗಲಿದೆ” ಎಂದು ಮಾಜಿ ಸಿಎಂ‌ ಎಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಜಾಬ್, ಹಲಾಲ್ ಬಗ್ಗೆ ಧೈರ್ಯವಾಗಿ ಚರ್ಚಿಸಬೇಕಿತ್ತು ಎಂದು ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಮುಂದೆ ಹೇಳಿದ್ದಾರೆ. ವಿವಾದಕ್ಕೆ ಬೆಂಕಿ ಹಚ್ಚಿಕೊಟ್ಟವರು ಕಾಂಗ್ರೆಸ್ ನವರು. ನಾನು ಬಿಜೆಪಿ ಜೊತೆ ಚಕ್ಕಂದ ಮಾಡಿಕೊಳ್ಳಲು ಹೊಂದಾಣಿಕೆ ಮಾಡಿಕೊಂಡಿಲ್ಲ, ಈ ಸರ್ಕಾರಕ್ಕೆ ಪಾಪದ‌ ಕೊಡ ತುಂಬಿದೆ. ಹೀಗಾಗಿ ಇನ್ನು ಮುಂದೆ ಹೋರಾಟ ಮಾಡುತ್ತೇವೆ ಎಂದು ಟೀಕಿಸಿದರು.

ಬಿಜೆಪಿ ಸರ್ಕಾರ ಬರಲು ಕಾರಣ ಯಾರು ? ನಾವೇನು ಬಿಜೆಪಿ ಜೊತೆಗೆ ಹೋಗಿಲ್ಲ. ಈಗಿನ ಸರ್ಕಾರ ಬರಲು ಕಾರಣ ಯಾರು ?ಕುಮಾರಸ್ವಾಮಿ ದೊಡ್ಡವರು ಅಂತಾ ಹೇಳುತ್ತಾರೆ.ಇಲ್ಲಿ ದೊಡ್ಡವರು, ಚಿಕ್ಕವರು ಬರುವುದಿಲ್ಲ.ಧೈರ್ಯವಾಗಿ ಎದುರಿಸಿ ಏನಾಗಿದೆ ನಿಮಗೆ ಎಂದು ಡಿ.ಕೆ.ಶಿವಕುಮಾರ್ ಅವರಿಗೆ ಪರೋಕ್ಷವಾಗಿ ಸವಾಲು ಹಾಕಿದರು.

ನಾನು ಬಿಜೆಪಿ ವಿರುದ್ಧ ಸೆಟೆದು ನಿಂತಿರೋದು ಜನರ ರಕ್ಷಣೆಗಾಗಿ.ಯಾರನ್ನೂ ಮೆಚ್ಚಿಸಲು ಅಲ್ಲ.ಇಷ್ಟೆಲ್ಲಾ ಆದರೂ ಸರ್ಕಾರ ಜಾಣ ಕಿವುಡಾಗಿದೆ.ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ.ನಾನು ಯಾವುದೇ ಸೋಗು ಹಾಕುವುದಿಲ್ಲ. ನಾನು ದಾರ್ಶನಿಕ ಅಂತಾ ಫಲಕ ಹಾಕೊಕೊಂಡಿಲ್ಲ.ಅದೆಲ್ಲಾ ಬಿಜೆಪಿಯವರದ್ದು.ನಾನೇನು ಸಮಾಜ ಬದಲಾವಣೆಯ ಪರಿವರ್ತಕನಲ್ಲ. ನಾನು ಓಟ್ ಬ್ಯಾಂಕ್ ಗಾಗಿ ಮಾತನ್ನಾಡುತ್ತಿಲ್ಲ.ಎಲ್ಲಿ ಅನ್ಯಾಯವಾಗಲಿದೆಯೋ ಅಲ್ಲಿ ಧ್ವನಿ ಎತ್ತುತ್ತೇನೆ.ನಾನು ಬೆಂದ ಮನೆಯಲ್ಲಿ ಗಳ ಇರಿಯೋನಲ್ಲಾ. ಮತ‌ ಪಡೆಯುವ ಸಲುವಾಗಿ ಹಿಂದೂ ಅಂತಾ ಹೇಳುತ್ತಾರೆ. ಅಧಿಕಾರದ ಸುಪ್ಪತ್ತಿಗೆಗಾಗಿ‌‌ ಕಂದಾಚಾರ ಮಾಡುತ್ತಿರೋರು ಬಿಜೆಪಿಯವರು ಎಂದು ಟೀಕಿಸಿದರು.

ಕಾಶ್ಮೀರ್ ಫೈಲ್ ಗೆ ತೆರಿಗೆ ವಿನಾಯಿತಿ‌ ಕೊಟ್ಟಿದ್ದಾರೆ.ಮಂತ್ರಿಗಳ ಕಚೇರಿಯಲ್ಲಿರುವ ಜನರ ಫೈಲ್ ಗಳಿವೆ.ಮೊದಲು ಇದಕ್ಕೆ ತೆರಿಗೆ ವಿನಾಯಿತಿ ಕೊಡಲಿ.ಜನರ ಜೊತೆ ಚೆಲ್ಲಾಟವಾಡುವುದನ್ನ ನಿಲ್ಲಿಸಿ.ಅದು ಬಿಟ್ಟು ಹಲಾಲ್, ಜಟ್ಕಾ ಅಂತಾ ಹಿಡಿದುಕೊಂಡು ಕುಳಿತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ರೀತಿ ನಾನು ಅಂಜಿಕೊಂಡು ಕುಳಿತುಕೊಂಡಿಲ್ಲ.ಎಲ್ಲವನ್ನೂ ಧೈರ್ಯವಾಗಿ ಹೇಳಿದ್ದೇನೆ.ವಿಶ್ವಹಿಂದೂ ಪರಿಷತ್,ಬಜರಂಗ ದಳದವರು ಏನೇನೋ ಮಾಡುತ್ತಿದ್ದಾರೆ . ರೈತರು ಕಷ್ಟದಲ್ಲಿರುವಾಗ ಯಾವ ವಿಶ್ವಹಿಂದೂ ಪರಿಷತ್, ಬಜರಂಗ ದಳದವರು ಬಂದಿದ್ದರು ?ಎಂದು ವಾಗ್ದಾಳಿ ನಡೆಸಿದರು.

ಹಿಜಾಬ್ ವಿಚಾರ ಬಂದಾಗ ಕಾಂಗ್ರೆಸ್ ನವರು ಮನೆಯಲ್ಲಿ ಸೇರಿಕೊಂಡರು.ಹಿಜಾಬ್ ವಿಚಾರ ಮಾತನ್ನಾಡಬೇಡಿ ಅಂತಾ ಕೆಪಿಸಿಸಿ ಅಧ್ಯಕ್ಷರೇ ಹೇಳುತ್ತಾರೆ.ಇದು ಓಟ್ ಬ್ಯಾಂಕ್ ರಾಜಕಾರಣವಲ್ಲದೇ  ಇನ್ನೇನು ? ಮುಸ್ಲಿಂರು ಯಾಕೆ ಕಾಂಗ್ರೆಸ್ ನ್ನ ನಂಬಬೇಕು ? ನಾವು ಈ ವಿಚಾರವಾಗಿ ಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.

ಪೆಟ್ರೋಲಿಯಂ, ಸಿಮೆಂಟ್, ಗ್ಯಾಸ್ ಬೆಲೆ ಎಷ್ಟಾಗಿದೆ ?ಬಜರಂಗ ದಳದವರು, ವಿಶ್ವಹಿಂದೂ ಪರಿಷತ್ ನವರು ಬಂದು ಜನರ ಸಮಸ್ಯೆ ಬಗೆಹರಿಸಲಿ. ಆಗ ನಾನು ನಿಮ್ಮ ಜೊತೆ ಕೈಜೋಡಿಸುತ್ತೇನೆ. ಕಾಂಗ್ರೆಸ್ ಸರಿಯಾಗಿದಿದ್ದರೆ ಇಂದು ಯಾಕೆ ಈ ಪರಿಸ್ಥಿತಿ ಬರುತ್ತಿತ್ತು ? ಗ್ಯಾಸ್ ಸಿಲಿಂಡರ್ ಗೆ ಅಲಂಕಾರ ಮಾಡಿಕೊಂಡು ಹೊರಟಿದ್ದಾರೆ ಎಂದು ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.