ಸರ್ಕಾರಿ ಕಚೇರಿಗಳಲ್ಲಿಲ್ಲ ಕುಡಿವ ನೀರಿನ ವ್ಯವಸ್ಥೆ
Team Udayavani, Apr 4, 2022, 4:52 PM IST
ಸಿರುಗುಪ್ಪ: ನಗರ ಸೇರಿದಂತೆ ತಾಲೂಕಿನ ವಿವಿಧ ಕಡೆಗಳಲ್ಲಿ ಕುಡಿಯುವ ನೀರಿನ ಅರವಟಿಕೆ ಸ್ಥಾಪಿಸಿ ಜನರ ಕುಡಿಯುವ ನೀರಿನ ದಾಹ ನೀಗಿಸುವ ಕೆಲಸ ಮಾಡುವವರ ಸಂಖ್ಯೆ ಕಡಿಮೆಯಾಗಿದ್ದು, ಬಿರು ಬೇಸಿಗೆ ಇದ್ದರೂ ನಗರದ ಪ್ರಮುಖ ಸ್ಥಳಗಳಲ್ಲಿ ಕುಡಿಯುವ ನೀರಿನ ಅರವಟಿಕೆಗಳು ಕಂಡು ಬರುತ್ತಿಲ್ಲ. ದೊಡ್ಡ ಗಡಿಗೆಯಲ್ಲಿ ರಾತ್ರಿವೇಳೆ ಇಲ್ಲವೆ ಬೆಳಗಿನ ಜಾವದಲ್ಲಿ ನೀರು ಹಾಕಿದರೆ ಮಧ್ಯಾಹ್ನಕ್ಕೆಲ್ಲ ತಂಪಾದ ನೀರು ಕುಡಿಯಲು ದೊರೆಯುತ್ತಿತ್ತು.
ಈಗ ಅರವಟಿಕೆಗಳು ಕೇವಲ ಬೆರಳೆಣಿಕೆಯಷ್ಟು ಸ್ಥಾಪನೆಯಾಗಿದ್ದು, ಸಾರ್ವಜನಿಕರು ಹಣಕೊಟ್ಟು ನೀರು ಖರೀದಿಸುವ ಪರಿಸ್ಥಿತಿ ಉಂಟಾಗಿದೆ. ಅಧಿಕಾರಿಗಳು, ಶಾಸಕರು, ಜನಪ್ರತಿನಿಧಿಗಳು ಸಾರ್ವಜನಿಕರಿಗೆ ಉಪಯೋಗವಾಗುವಂತೆ ಜನನಿಬೀಡ ಪ್ರದೇಶಗಳಲ್ಲಿ ನೀರಿನ ಅರವಟಿಗೆ ಸ್ಥಾಪನೆ ಮಾಡಲು ಮುಂದಾಗಬೇಕಾಗಿದೆ.
ನಗರಕ್ಕೆ ವಿವಿಧ ಕೆಲಸ ಕಾರ್ಯಗಳಿಗಾಗಿ ಗ್ರಾಮೀಣ ಪ್ರದೇಶದಿಂದ ಬರುವ ಜನರು ತಮ್ಮ ಕೆಲಸ ಕಾರ್ಯಗಳಿಗಾಗಿ ಕಚೇರಿಗಳಿಗೆ ಭೇಟಿ ನೀಡುವುದು ಸಾಮಾನ್ಯ. ಆದರೆ ಕನಿಷ್ಟ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ ಎಂಬುದು ಸಾರ್ವಜನಿಕರ ಆರೋಪ. ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಗರಸಭೆ, ತಾಲೂಕಿನ ಪ್ರತಿ ಗ್ರಾಮಕ್ಕೆ ನೀರು ಪೂರೈಕೆ ಮಾಡುವ
ಗ್ರಾಮೀಣ ಕುಡಿಯುವ ನೀರು ಇಲಾಖೆಯಲ್ಲಿಯೂ ಸಿಬ್ಬಂದಿಗಾಗಿ ಶುದ್ಧ ಕುಡಿಯುವ ನೀರಿನ ಕ್ಯಾನ್ ತೆಗೆದುಕೊಳ್ಳುತ್ತಾರೆ. ಆದರೆ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ.
ಇದನ್ನೂ ಓದಿ : ಹರಕ ಮಳಿ, ಮುರುಕ ಹಪ್ಪಳ.! ನಾಕೂ ಲೋಕ ಅದ್ಲ-ಬದ್ಲ ಖಾತ್ರಿ!; ಕಾಲಜ್ಞಾನ ನುಡಿದ ಶಿವಯ್ಯ ಮುತ್ಯಾ
ತಹಶೀಲ್ದಾರ್ ಕಚೇರಿ, ಲೋಕೋಪಯೋಗಿ ಇಲಾಖೆ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಉಪವಿಭಾಗ ಕಚೇರಿ, ಸಹಾಯಕ ಕೃಷಿ ನಿರ್ದೇಶಕರು ಕಚೇರಿ, ಸಿಡಿಪಿಒ ಕಚೇರಿ ಮುಂತಾದ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಬಸ್ನಿಲ್ದಾಣದಲ್ಲಿ ಕುಡಿಯುವ ನೀರಿನ ಘಟಕದ ವ್ಯವಸ್ಥೆಯೇ ಇಲ್ಲ, ಇದರಿಂದಾಗಿ ಪ್ರಯಾಣಿಕರು ಹಣಕೊಟ್ಟು ಬಾಟಲಿ ನೀರು ಖರೀದಿಸಬೇಕಾಗಿದೆ. ಒಟ್ಟಾರೆ ನಗರಕ್ಕೆ ಬರುವ ಗ್ರಾಮಾಂತರ ಪ್ರದೇಶದ ಜನರು ಹಣಕೊಟ್ಟು ಬಾಟಲಿ ನೀರನ್ನು ಕುಡಿಯುವುದು ಅನಿವಾರ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ