ಪಹಣಿ ತಿದ್ದುಪಡಿ ಮಾಡುವ ಅಧಿಕಾರ ಮತ್ತೆ ತಹಶೀಲ್ದಾರ್ಗೆ
ಡಿ.31ರವರೆಗೆ ತಿದ್ದುಪಡಿ ಅಧಿಕಾರ ವಿಸ್ತರಣೆ
Team Udayavani, Apr 5, 2022, 1:01 PM IST
ದಾವಣಗೆರೆ: ಕಂದಾಯ ಅದಾಲತ್ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಮಾಡಲು ತಹಶೀಲ್ದಾರ್ಗೆ ಇರುವ ಅಧಿಕಾರವನ್ನು ಕಂದಾಯ ಇಲಾಖೆ ಮುಂದಿನ ಡಿಸೆಂಬರ್ವರೆಗೆ (31-12-2022) ವಿಸ್ತರಿಸಿದೆ.
ಪಹಣಿಗಳಲ್ಲಿನ ಲೋಪಗಳನ್ನು ತ್ವರಿತವಾಗಿ ಸರಿಪಡಿಸಿಕೊಳ್ಳಲು ಕಂದಾಯ ಅದಾಲತ್ ಕಾರ್ಯಕ್ರಮ ಹೆಚ್ಚು ಅನುಕೂಲವಾಗುತ್ತಿರುವ ಹಿನ್ನೆಲೆಯಲ್ಲಿ ಇಲಾಖೆ, ಈ ವರ್ಷವೂ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರ್ಗೆ ನೀಡಿ ಕಾರ್ಯಕ್ರಮ ಮುಂದುವರಿಸಿದೆ.
ಕಂದಾಯ ಅದಾಲತ್ ಮೂಲಕ ಪಹಣಿ ತಿದ್ದುಪಡಿ ಮಾಡುವ ಅಧಿಕಾರವನ್ನು ಸಹಾಯ ಆಯುಕ್ತರಿಂದ ತಹಶೀಲ್ದಾರ್ಗೆ ನೀಡಲಾಗಿದೆ. ಈ ಅಧಿಕಾರವನ್ನು ಆಗಾಗ ವಿಸ್ತರಿಸುತ್ತ ಬರಲಾಗಿದೆ. ಈ ವರ್ಷ 31-12-2021ಕ್ಕೆ ಅಧಿಕಾರ ಕೊನೆಗೊಂಡು, ಪಹಣಿ ತಿದ್ದುಪಡಿ ಅಧಿಕಾರ ಮೂರು (ಜನವರಿ, ಫೆಬ್ರವರಿ ಮತ್ತು ಮಾರ್ಚ್) ತಿಂಗಳು ಮರಳಿ ಸಹಾಯಕ ಆಯುಕ್ತರ ಕೈಗೆ ಹೋಗಿತ್ತು. ತಹಶೀಲ್ದಾರ್ಗೆ ನೀಡಿರುವ ಈ ವಿಶೇಷ ಅಧಿಕಾರವನ್ನು ಈಗ ಡಿಸೆಂಬರ್ ಅಂತ್ಯದ ವರೆಗೆ ವಿಸ್ತರಿಸಿದ್ದು, ಪ್ರಸಕ್ತ ಏಪ್ರಿಲ್ನಿಂದ ಲೇ ತಹಶೀಲ್ದಾರರು ಕಂದಾಯ ಅದಾಲತ್ ಮೂಲಕ ಪಹಣಿ ತಿದ್ದುಪಡಿ ಕಾರ್ಯ ಮುಂದುವರಿಸಲಿದ್ದಾರೆ.
ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಎಲ್ಲ ತಾಲೂಕುಗಳ ಗ್ರಾಮ ಲೆಕ್ಕಾಧಿ ಕಾರಿಗಳ ವೃತ್ತ ಮಟ್ಟದಲ್ಲಿ ಕಂದಾಯ ಅದಾಲತ್ ಗಳನ್ನು ನಡೆಸಿ ಪಹಣಿಗಳಲ್ಲಿನ ಲೋಪಗಳನ್ನು ಸರಿಪಡಿಸಲು ಈ ಕಾರ್ಯಕ್ರಮದ ಮೂಲಕ ಅವಕಾಶ ನೀಡಲಾಗಿದೆ.
ಕಂದಾಯ ಅದಾಲತ್ ಕಾರ್ಯಕ್ರಮದಡಿ ಬಾಕಿಯಿರುವ ಹಾಗೂ ಸ್ವೀಕೃತವಾಗುವ ಅರ್ಜಿಗಳನ್ನು 2022ರ ಡಿಸೆಂಬರ್ ಅಂತ್ಯಕ್ಕೆ ತಿದ್ದುಪಡಿ ಮಾಡಿ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಯಾವ ಕಾರಣಕ್ಕೂ ಮುಂದೆ ಕಂದಾಯ ಅದಾಲತ್ ಕಾರ್ಯಕ್ರಮವನ್ನು ವಿಸ್ತರಿಸಲಾಗುವುದಿಲ್ಲ ಎಂಬ ಎಚ್ಚರಿಕೆಯನ್ನು ಇಲಾಖೆ ಅಧಿಕಾರಿಗಳಿಗೆ ನೀಡಿದೆ.
ಇದನ್ನೂ ಓದಿ:ಎಲ್ಲ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಮೊದಲ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ: ಸಿಎಂ
ಹೆಚ್ಚುವರಿ ಸಿಬ್ಬಂದಿ ಇಲ್ಲ: ಕಂದಾಯ ಅದಾ ಲತ್ ಕಾರ್ಯಕ್ರಮ ಆರಂಭದಲ್ಲಿ (2014ರಲ್ಲಿ) ಹೆಚ್ಚಿನ ಅರ್ಜಿಗಳು ಸ್ವೀಕೃತವಾಗುತ್ತಿದ್ದವು. ಆದ್ದರಿಂದ ಆಗ ಕಂದಾಯ ಅದಾಲತ್ ನಡೆಸಲು ಅನುಕೂಲವಾಗುವಂತೆ ಪ್ರತಿ ತಾಲೂಕಿಗೆ ಇಬ್ಬರು ನಿವೃತ್ತ ಕಂದಾಯ ಇಲಾಖಾ ನೌಕರರ ಸೇವೆ ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು.
ಆದರೆ 2021ರ ಅಂತ್ಯಕ್ಕೆ ಬಾಕಿ ಇರುವ ಅರ್ಜಿಗಳ ಸಂಖ್ಯೆ ಅದಾ ಲತ್ ಆರಂಭವಾದಾಗ ಇದ್ದಷ್ಟು ಇಲ್ಲ. ಆದ್ದರಿಂದ ಈ ಕಾರ್ಯಕ್ಕಾಗಿ ಹೆಚ್ಚುವರಿ ಸಿಬ್ಬಂದಿ ನೇಮಿಸಿಕೊಳ್ಳುವ ಅವಶ್ಯಕತೆ ಇಲ್ಲ. ಅರ್ಜಿಗಳನ್ನು ವಿಲೇವಾರಿ ಮಾಡಲು ಆಯಾ ಕಚೇರಿಯ ಸಿಬ್ಬಂದಿಯನ್ನೇ ನಿಯೋಜಿಸಿಕೊಳ್ಳಬೇಕು ಎಂದು ಇಲಾಖೆ ಸೂಚಿಸಿದೆ.
ಜಿಲ್ಲಾಧಿಕಾರಿಗಳು ತಪ್ಪದೇ ಪ್ರತಿ ವಾರ ಕಂದಾಯ ಅದಾಲತ್ಗೆ ಸಂಬಂಧಿಸಿದಂತೆ ಪ್ರತಿ ತಾಲೂಕಿನ ತಹಶೀಲ್ದಾರರ ಪ್ರಗತಿ ಪರಿಶೀಲಿಸಿ ಅತಿ ಹೆಚ್ಚು ಪಹಣಿ ತಿದ್ದುಪಡಿ ಮಾಡುವ ನಿಟ್ಟಿನಲ್ಲಿ ಸೂಕ್ತ ನಿರ್ದೇಶನ ನೀಡಬೇಕು. ಕಂದಾಯ ಅದಾಲತ್ ಕಾರ್ಯಕ್ರಮದ ಮೇಲುಸ್ತುವಾರಿ ಜವಾಬ್ದಾರಿ ಭೂಮಾಪನ ಇಲಾಖೆ ಆಯುಕ್ತರು, ಕಂದಾಯ ಇಲಾಖೆ ನಿರ್ದೇಶಕರದ್ದಾಗಿದ್ದು (ಭೂಮಿ ವಿಭಾಗ) ಅನುಷ್ಠಾನದ ಪ್ರಗತಿ ವಿವರವನ್ನು ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಪರಿಶೀಲಿಸಬೇಕು ಎಂದು ಇಲಾಖೆ ನಿರ್ದೇಶಕರು ನಿರ್ದೇಶನ ನೀಡಿದ್ದಾರೆ.
ತಿದ್ದುಪಡಿ ಮುಖ್ಯ ಅಂಶಗಳು: ಡಾಟಾ ಎಂಟ್ರಿಗೆ ಬಳಸಲಾದ ಕೈಬರಹದ ಪಹಣಿ ಮತ್ತು ಭೂಮಿ ಡಾಟಾ ಬೇಸ್ನಲ್ಲಿರುವ ಪಹಣಿಗಳನ್ನು ಹೋಲಿಸಿದಾಗ ಕಂಡು ಬರುವ ವ್ಯತ್ಯಾಸಗಳು, ಡಾಟಾ ಎಂಟ್ರಿಗೆ ಬಳಸಲಾದ ಕೈಬರಹ ಪಹಣಿಯಲ್ಲಿ ಗಣಕೀಕರಣದ ಪೂರ್ವದಲ್ಲೇ ಇದ್ದ ಮ್ಯುಟೇಶನ್ ಪ್ರಕಾರ ಪಹಣಿ ಕಾಲೋಚಿಗೊಳಿಸದಿರುವುದು ಅಥವಾ ತಪ್ಪಾಗಿ ಕಾಲೋಚಿತಗೊಳಿಸಿರುವುದು, ಯಾವುದೇ ಮ್ಯುಟೇಶನ್ ಇಲ್ಲದೇ ಪಹಣಿಯಿಂದ ನಮೂದನ್ನು ತೆಗೆದು ಹಾಕಿರುವುದು ಇಲ್ಲವೇ ಹೊಸದಾಗಿ ನಮೂದು ಮಾಡಿರುವುದು ಈ ಪಹಣಿ ತಿದ್ದುಪಡಿಯಲ್ಲಿ ಕಂಡು ಬರುವ ಮುಖ್ಯ ಅಂಶಗಳಾಗಿವೆ.
ಕಂದಾಯ ಅದಾಲತ್ ಮೂಲಕ ಪಹಣಿ ತಿದ್ದುಪಡಿ ಕಾರ್ಯವನ್ನು ಸರ್ಕಾರ ಮತ್ತೆ ತಹಶೀಲ್ದಾರ್ಗಳಿಗೆ ವಹಿಸಿದೆ. ಈ ಅಧಿಕಾರವನ್ನು 2022, ಡಿ.31ರವರೆಗೆ ವಿಸ್ತರಿಸಿದೆ. ಪಹಣಿಯಲ್ಲಿನ ಲೋಪದೋಷ ತಿದ್ದುಪಡಿ ಮಾಡಲು ಕಂದಾಯ ಅದಾಲತ್ ಕಾರ್ಯಕ್ರಮ ಹೆಚ್ಚು ಅನುಕೂಲವಾಗಿದೆ. ●ಮಹಾಂತೇಶ ಬೀಳಗಿ, ಜಿಲ್ಲಾಧಿಕಾರಿ, ದಾವಣಗೆರೆ
-ಎಚ್.ಕೆ. ನಟರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್
ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?
Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!
Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ
Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!
Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ