ತೂತು ಮಡಿಕೆಯಲ್ಲಿ ಸ್ವಾರ್ಥ,ದುರಾಸೆ!


Team Udayavani, Apr 5, 2022, 2:23 PM IST

ತೂತು ಮಡಿಕೆಯಲ್ಲಿ ಸ್ವಾರ್ಥ,ದುರಾಸೆ!

“ತೂತು ಮಡಿಕೆ’ – ಹೀಗೊಂದು ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಆರಂಭದಲ್ಲೇ ತನ್ನ ಪೋಸ್ಟರ್‌ ಮೂಲಕ ಕುತೂಹಲ ಹುಟ್ಟಿಸಿರುವ ಈ ಚಿತ್ರದ ಮೋಶನ್‌ ಪೋಸ್ಟರ್‌ ಟೀಸರ್‌ ಈಗ ಬಿಡುಗಡೆಯಾಗಿದೆ. ನಟ ಶ್ರೀನಗರ ಕಿಟ್ಟಿ ಮುಖ್ಯ ಅತಿಥಿಯಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭಕೋರಿದರು.

ಆರಂಭದಲ್ಲಿ ಕಿರುಚಿತ್ರಗಳ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟ ಬಳಿಕ “ಮೂಕ ವಿಸ್ಮಿತ’, “ಸಿಲಿಕಾನ್‌ ಸಿಟಿ’, “ಕಿಸ್‌’ ಸಿನಿಮಾಗಳಲ್ಲಿ ಸಪೋರ್ಟಿಂಗ್‌ ರೋಲ್‌ನಲ್ಲಿ ಕಾಣಿಸಿಕೊಂಡಿದ್ದ ಚಂದ್ರ ಕೀರ್ತಿ, “ತೂತು ಮಡಿಕೆ’ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಚಿತ್ರಕ್ಕೆ ಚಂದ್ರ ಕೀರ್ತಿ ಅವರೇ ಕಥೆ ಬರೆದು ನಿರ್ದೇಶನವನ್ನೂ ಮಾಡಿದ್ದಾರೆ.

ಚಿತ್ರದಲ್ಲಿ ಪಾವನಾ ನಾಯಕಿಯಾಗಿದ್ದಾರೆ. ಉಳಿದಂತೆ ಉಳಿದಂತೆ ಪ್ರಮೋದ್‌ ಶೆಟ್ಟಿ, ಗಿರೀಶ್‌ ಶಿವಣ್ಣ, ಉಗ್ರಂ ಮಂಜು, ನಂದಗೋಪಾಲ್‌, ಶಂಕರ್‌ ಅಶ್ವಥ್‌, ಅರುಣ್‌ ಮೂರ್ತಿ, ರಾಘವೇಂದ್ರ ನರೇಶ್‌, ಸಿತಾರಾ ಮತ್ತಿತರ ಕಲಾವಿದರ ದೊಡ್ಡ ದಂಡೇ “ತೂತು ಮಡಿಕೆ’ ಸಿನಿಮಾದಲ್ಲಿದೆ.

ಇದನ್ನೂ ಓದಿ: ಬಿಡುಗಡೆಗೂ ಮುನ್ನ KGF-2 ದಾಖಲೆ: ಬ್ರಿಟನ್ ನಲ್ಲಿ 12 ಗಂಟೆಯಲ್ಲಿ 5 ಸಾವಿರ ಟಿಕೆಟ್ ಸೇಲ್

ಪ್ರತಿಯೊಬ್ಬ ಮನುಷ್ಯನಲ್ಲೂ ಒಂದಷ್ಟು “ಲೂಪ್‌ ಹೋಲ್ಸ್‌’ ಇದ್ದೇ ಇರುತ್ತದೆ. ಅಂಥ “ಲೂಪ್‌ ಹೋಲ್ಸ್‌’ ಮುಚ್ಚಿಕೊಂಡಾಗಲಷ್ಟೇ ಆತ ಏನಾದರೂ ಸಾಧಿಸ ಬಲ್ಲ, ದೊಡ್ಡವನಾಗಬಲ್ಲ. ನಮ್ಮ ನಡುವೆಯೇ ಇರುವಂಥ ಇಂಥ ಸ್ವಾರ್ಥ, ದುರಾಸೆ, ವ್ಯಾಮೋಹ ಮೊದಲಾದ “ಲೂಪ್‌ ಹೋಲ್ಸ್‌’ಗಳ ನಡುವಿನ ಕಥೆಯೇ “ತೂತು ಮಡಿಕೆ’. ಇದು ಪ್ರತಿಯೊಬ್ಬನಿಗೂ ಕನೆಕ್ಟ್ ಆಗುವಂಥ ವಿಷಯ. ಸಾದಾಸೀದಾ ವಿಷಯವನ್ನು ಇಟ್ಟುಕೊಂಡು ನೋಡುಗರಿಗೆ ನೋಡುಗರ ಮನ ಮುಟ್ಟುವಂತೆ ತೆರೆಮೇಲೆ ಹೇಳುತ್ತಿದ್ದೇವೆ’ ಎನ್ನುವುದು “ತೂತು ಮಡಿಕೆ’ ಚಿತ್ರತಂಡದ ಮಾತು.

“ಕಾಸಿನ ದುರಾಸೆಯಿಂದ ಅತ್ಯಮೂಲ್ಯ “ಆ್ಯಂಟಿಕ್‌ ಪೀಸ್‌’ ಒಂದರ ಹಿಂದೆ ಬೀಳುವ ಒಂದಷ್ಟು ಪಾತ್ರಗಳ ಸುತ್ತ ಏನೆಲ್ಲ ನಡೆಯುತ್ತದೆ. ಕೊನೆಗೆ ಈ “ಆ್ಯಂಟಿಕ್‌ ಪೀಸ್‌’ ಹಿಂದೆ ಬಿದ್ದವರಿಗೆ ದಕ್ಕುತ್ತದೆಯಾ? ಇಲ್ಲವಾ? ಹೀಗೆ, “ಆ್ಯಂಟಿಕ್‌ ಪೀಸ್‌’ ಹಿಂದೆ ಬಿದ್ದು ಶಾಂತಿ ಕಳೆದುಕೊಂಡವರ ಕಥೆ “ತೂತು ಮಡಿಕೆ’ಯಲ್ಲಿದೆ’ ಎಂದು ಚಿತ್ರದ ಕಥಾಹಂದರ ಬಿಚ್ಚಿಡುತ್ತದೆ ಚಿತ್ರತಂಡ.

ನಾಯಕಿ ಪಾವನಾ, ಪ್ರಮೋದ್‌ ಶೆಟ್ಟಿ, ಗಿರಿ, ಉಗ್ರಂ ಮಂಜು ತಮ್ಮ ಪಾತ್ರಗಳ ಹಾಗೂ ಹೊಸಬರ ತಂಡದ ಶಿಸ್ತು ಹಾಗೂ ಶ್ರಮದ ಬಗ್ಗೆ ಮಾತನಾಡಿದರು.

ಚಿತ್ರಕ್ಕೆ ನವೀನ್‌ ಚಲ್ಲ ಛಾಯಾಗ್ರಹಣ, ಉಜ್ವಲ್‌ ಚಂದ್ರ ಸಂಕಲನವಿದೆ. ಚಿತ್ರದ ಎರಡು ಹಾಡುಗಳಿಗೆ ಸ್ವಾಮಿನಾಥನ್‌ ಆರ್‌. ಕೆ ಸಂಗೀತ ಸಂಯೋಜಿಸಿದ್ದಾರೆ. ವಿಜಯ ಪ್ರಕಾಶ್‌, ಚೇತನ್‌ ನಾಯಕ್‌ ಧ್ವನಿಯಾಗಿದ್ದು, ಹಾಡುಗಳಿಗೆ ಚೇತನ್‌ ಕುಮಾರ್‌, ನಿತಿನ್‌ ಜೈ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. ಮೋಹನ್‌ ಮಾಸ್ಟರ್‌ ಈ ಗೀತೆಗಳಿಗೆ ನೃತ್ಯ ಸಂಯೋಜಿಸಿದ್ದಾರೆ.

ಚಿತ್ರಕ್ಕೆ ಚಂದ್ರ ಕೀರ್ತಿ, ಎಎಸ್‌ಜಿ ಮತ್ತು ಡಾಲರ್‌ ಚಿತ್ರಕಥೆ, ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. “ಸರ್ವತಾ ಸಿನಿ ಗ್ಯಾರೇಜ್‌’ ಬ್ಯಾನರ್‌ನಲ್ಲಿ ಮಧುಸೂದನ್‌ ರಾವ್‌ ಮತ್ತು ಶಿವಕುಮಾರ್‌ ಕೆ. ಬಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

The Judgement;

The Judgement; ಭವಿಷ್ಯ ನಿರ್ಧರಿಸುವ ಜಡ್ಜ್ಮೆಂಟ್‌: ರವಿಚಂದ್ರನ್‌

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.