ಎತ್ತುಗಳ ಜಾತ್ರೆಗೆ ರೈತರಿಂದ ಉತ್ತಮ ಸ್ಪಂದನೆ
Team Udayavani, Apr 5, 2022, 2:44 PM IST
ಜಗಳೂರು: ತಾಲೂಕಿನ ದೇವಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡದಗುಡ್ಡದಲ್ಲಿ ನಡೆದ ಎತ್ತುಗಳ ಜಾತ್ರೆಯಲ್ಲಿ ಎತ್ತುಗಳ ಮಾರಾಟಕ್ಕೆ ರೈತರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.
ಬೆಲೆ ಅಧಿಕವಾದರೂ ರೈತರು ವ್ಯವಸಾಯಕ್ಕೆ ಸೂಕ್ತವಾದ ಎತ್ತುಗಳನ್ನು ಖರೀದಿಸಿದರು. ಕೊಡದಗುಡ್ಡ ಗ್ರಾಮದಲ್ಲಿ ವೀರಭದ್ರಸ್ವಾಮಿಯ ರಥೋತ್ಸವದ ನಂತರ ಎತ್ತುಗಳ ಜಾತ್ರೆ ನಡೆಯುವುದು ವಾಡಿಕೆ. ಈ ಜಾತ್ರೆಗೆ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳು ಸೇರಿದಂತೆ ವಿಜಯನಗರ, ಚಿತ್ರದುರ್ಗ ಸೇರಿದಂತೆ ಇತರೆ ಜಿಲ್ಲೆಗಳಿಂದ ವ್ಯಾಪಾರಸ್ಥರು ಆಗಮಿಸಿ ವ್ಯಾಪಾರ ವಹಿವಾಟು ಮಾಡಿದರು.
ಕೊರೊನಾ ಹಿನ್ನಲೆಯಲ್ಲಿ ಕಳೆದೆರೆಡು ವರ್ಷಗಳಿಂದ ಎತ್ತುಗಳ ಜಾತ್ರೆಯನ್ನು ರದ್ದು ಮಾಡಲಾಗಿತ್ತು. ಈ ಬಾರಿ ಕೋವಿಡ್ ನಿಯಮಗಳು ಸಡಿಲಗೊಂಡ ಹಿನ್ನೆಲೆಯಲ್ಲಿ ಜಾತ್ರೆಯಲ್ಲಿ ಸಾವಿರಾರು ಜೋಡಿ ಎತ್ತುಗಳು ಮಾರಾಟವಾದವು. ಒಂದು ಜೊತೆ ಎತ್ತುಗಳಿಗೆ 60 ಸಾವಿರದಿಂದ 1.80 ಲಕ್ಷ ರೂ.ವರೆಗೆ ದರ ನಿಗದಿಯಾಗಿತ್ತು.
ತಂತ್ರಜ್ಞಾನ ಎಷ್ಟೇ ಮುಂದುವರೆದರೂ ವ್ಯವಸಾಯಕ್ಕೆ ಎತ್ತುಗಳೇ ಸೂಕ್ತ. ಬಿತ್ತನೆ ಮಾಡುವಾಗ ಮತ್ತು ಕಟಾವು ಮಾಡಿದ ಬೆಳೆಯನ್ನು ತುಳಿಸುವಾಗ ಎತ್ತುಗಳು ಬೇಕೆ ಬೇಕು. ಅಲ್ಲದೆ ಮನೆಯ ಮುಂದೆ ಎತ್ತುಗಳಿದ್ದರೆ ಅದರ ಸೊಗಸೇ ಬೇರೆ ಎನ್ನುತ್ತಾರೆ ರೈತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ
Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ
Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ
LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು
MUST WATCH
ಹೊಸ ಸೇರ್ಪಡೆ
Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ
London: ಚಾಕುವಿನಿಂದ ಇರಿದು ಭಾರತೀಯ ಮೂಲದ ಮಹಿಳೆಯ ಹತ್ಯೆ
Rajasthan; ಗಣಿಯಲ್ಲಿ ಲಿಫ್ಟ್ ಕುಸಿದು ಸಂಕಷ್ಟಕ್ಕೆ ಸಿಲುಕಿದ್ದ 14 ಮಂದಿಯ ರಕ್ಷಣೆ
Parkನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ; ಕೇಂದ್ರ ವಿ.ವಿ.ಯ ವಿವಾದಿತ ಅಧ್ಯಾಪಕನ ಸೆರೆ
Android ಮೊಬೈಲ್ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ