ಗಡಿಯಲ್ಲಿ ಕನ್ನಡ ಉಳಿಸಿ-ಬೆಳೆಸಲು ಪ್ರಯತ್ನಿಸಿ


Team Udayavani, Apr 6, 2022, 11:15 AM IST

6kannada

ಬೀದರ: ಗಡಿ ಭಾಗದಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಸಂಸ್ಕಾರ ಕಣ್ಮರೆಯಾಗುತ್ತಿದೆ. ಅದನ್ನು ಉಳಿಸಿ-ಬೆಳೆಸಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು ಎಂದು ಬುಡಾ ಅಧ್ಯಕ್ಷ ಬಾಬು ವಾಲಿ ಹೇಳಿದರು.

ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ನೂಪುರ ನೃತ್ಯ ಅಕಾಡೆಮಿ, ಜನಧ್ವನಿ ಟ್ರಸ್ಟ್‌ ಹಾಗೂ ಗಡಿ ಅಭಿವೃದ್ಧಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಗಡಿ ಸಮಸ್ಯೆ ಹಾಗೂ ಭಾಷಾಭಿವೃದ್ಧಿ ಕುರಿತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಗಡಿಯಲ್ಲಿ ಅನೇಕ ಸಮಸ್ಯೆಗಳಿವೆ. ರಸ್ತೆ, ನೀರು, ಚರಂಡಿ, ಕನ್ನಡ ಶಾಲೆಗಳು ಹಾಗೂ ಶಿಕ್ಷಕರ ಕೊರತೆ ಇವುಗಳನ್ನು ನೀಗಿಸಲು ಸ್ಥಳೀಯ ಸಂಘ-ಸಂಸ್ಥೆಗಳು ತಮ್ಮ ಹೋರಾಟದ ಮೂಲಕ ಸಮಸ್ಯೆ ನಿವಾರಿಸಲು ಪ್ರಯತ್ನಿಸಬೇಕು. ಜೊತೆಗೆ ತಮ್ಮ ಸಾಮಾಜಿಕ ಜವಾಬ್ದಾರಿ ಮೂಲಕ ಕನ್ನಡ ಭಾಷೆ ಬೆಳೆಸಬೇಕು ಎಂದರು.

ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಮಾತನಾಡಿ, ಕೇವಲ ಗಡಿ ಸಮಸ್ಯೆ ಕುರಿತು ಮಾತನಾಡುವುದು, ವಿಚಾರ ಸಂಕಿರಣ ಮಾಡುವುದರಿಂದ ಬಗೆಹರಿಯುವುದಿಲ್ಲ. ಬದಲಾಗಿ ಅದನ್ನು ಪ್ರಾಯೋಗಿಕವಾಗಿ ಮಾಡಿ ತೋರಿಸಬೇಕಾಗಿದೆ ಎಂದರು.

ಸಂಘದ ಅಧ್ಯಕ್ಷ ಡಾ| ಜಗನ್ನಾಥ ಹೆಬ್ಟಾಳೆ ಮಾತನಾಡಿ, ಗಡಿಯಲ್ಲಿ ಎಲ್ಲ ಭಾಷಾ ಮಾಧ್ಯಮಕ್ಕೂ ಒಬ್ಬೊಬ್ಬ ಕನ್ನಡ ಶಿಕ್ಷಕ-ಶಿಕ್ಷಕಿಯರನ್ನು ನೇಮಕ ಮಾಡಬೇಕು. ಶಿಕ್ಷಕರ ಜೊತೆಗೆ ಪಾಲಕರು ಕೂಡ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಕನಿಷ್ಟ 1ರಿಂದ 10ನೇ ತರಗತಿವರೆಗೆ ಕಲಿಸಲು ಶಪಥ ಮಾಡಬೇಕು. ಹೀಗಾದಾಗ ಮಾತ್ರ ಗಡಿಯಲ್ಲಿ ಕನ್ನಡ ಉಳಿಸಲು ಸಾಧ್ಯ ಎಂದರು.

ಅಕಾಡೆಮಿ ಅಧ್ಯಕ್ಷೆ ಉಷಾ ಪ್ರಭಾಕರ ಅಧ್ಯಕ್ಷತೆ ವಹಿಸಿದ್ದರು. ಸಹಾರ್ದ ಸಂಸ್ಥೆ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು, ಜಾನಪದ ಪರಿಷತ್ತಿನ ಜಿಲ್ಲಾ ಸಂಯೋಜಕ ಡಾ| ರಾಜಕುಮಾರ ಹೆಬ್ಟಾಳೆ, ಸಂಘದ ಕಾರ್ಯದರ್ಶಿ ನಿಜಲಿಂಗಪ್ಪ ತಗಾರೆ, ಹಿರಿಯ ಸಾಹಿತಿ ಡಾ| ಎಂ.ಜಿ. ದೇಶಪಾಂಡೆ, ಪ್ರಭಾಕರ ಎ.ಎಸ್‌ ಇತರರಿದ್ದರು. ಹರ್ಷವರ್ಧನ ಸ್ವಾಮಿ ನಿರೂಪಿಸಿದರು. ಮಲ್ಲಿಕಾರ್ಜುನ ಸ್ವಾಮಿ ಸ್ವಾಗತಿಸಿದರು. ರಾಘವೇಂದ್ರ ಸ್ವಾಮಿ ವಂದಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ: ಕಲಾವಿದರಾದ ದೇವಿದಾಸ ಚಿಮಕೋಡೆ, ಕಾಶಿನಾಥ ಪಾಟೀಲ, ಶರಣಪ್ಪ ಪಾಟಿಲ, ಮಹಾರುದ್ರಪ್ಪ ಗ್ಯಾನಪನೋರ್‌, ಮಹಾದೇವಿ ಸಂಗಡಿಗರಿಂದ ಜಾನಪದ ಗಾಯನ, ನೂಪುರ ನೃತ್ಯ ಅಕಾಡೆಮಿಯಿಂದ ಜಾನಪದ ನೃತ್ಯ ಕಾರ್ಯಕ್ರಮ ಜರುಗಿದವು. ನಂತರ ನಡೆದ ಕವಿಗೋಷ್ಠಿಯಲ್ಲಿ ಅನೇಕರು ಸ್ವರಚಿತ ಕವನ ವಾಚನ ಮಾಡಿದರು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.