“ಕೈ’ನಿಂದ ಸಾಮಾಜಿಕ ನೆಲೆಗಟ್ಟಿನಲ್ಲಿ ದೇಶ ಅಭಿವೃದ್ಧಿ


Team Udayavani, Apr 6, 2022, 2:54 PM IST

“ಕೈ’ನಿಂದ ಸಾಮಾಜಿಕ ನೆಲೆಗಟ್ಟಿನಲ್ಲಿ ದೇಶ ಅಭಿವೃದ್ಧಿ

ತುಮಕೂರು: ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್‌ ಪಕ್ಷದ ಕೊಡುಗೆ ಅಪಾರ. ಪಂಚವಾರ್ಷಿಕ ಯೋಜನೆ ಗಳ ಮೂಲಕ ಕೃಷಿ, ಕೈಗಾರಿಕೆ, ಹೈನುಗಾರಿಕೆ ಮುಂತಾದ ಯೋಜನೆಗಳ ಮೂಲಕ ಇಡೀ ರಾಷ್ಟ್ರಕ್ಕೆ ಸ್ವಾವಲಂ ಬನೆಯ ಪಾಠ ಕಲಿಸಿದ್ದು ಬಾಬು ಜಗಜೀವನ್‌ ರಾಂ ಎಂದು ಮಾಜಿ ಶಾಸಕ, ಕಾಂಗ್ರೆಸ್‌ ಹಿರಿಯ ಮಖಂಡ ಡಾ.ಎಸ್‌.ರಫೀಕ್‌ ಅಹಮದ್‌ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್‌ ರಾಂ ಅವರ 115ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಇಡೀ ದೇಶವನ್ನು ಕಾಂಗ್ರೆಸ್‌ ಸಾಮಾಜಿಕ ನೆಲೆಗಟ್ಟಿನ ಮೇಲೆ ಅಭಿವೃದ್ಧಿಪಡಿಸಿತ್ತು. ಆದರೆ ಇಂದು ದೇಶದಲ್ಲಿ ಅಭಿವೃದ್ಧಿ ಗಿಂತ ಅರಾಜಕತೆ ತೀವ್ರವಾಗಿದೆ ಎಂದು ಆರೋಪಿಸಿದರು.

ನಾವೆಲ್ಲರೂ ಒಗ್ಗೂಡಬೇಕಿದೆ: ಅಭಿವೃದ್ಧಿ ವಿಚಾರ ವಾಗಿ ಅಂದು ಸ್ಥಾಪನೆಯಾದ ಸಾರ್ವಜನಿಕ ಉದ್ಯಮ ಗಳನ್ನು ಇಂದಿನ ಮೋದಿ ಸರ್ಕಾರ ಮಾರಾಟ ಮಾಡಿ, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುವಂತೆ ಮಾಡಿದೆ. ಇದರ ವಿರುದ್ಧ ನಾವೆಲ್ಲರೂ ಒಗ್ಗೂಡ ಬೇಕಿದೆ ಎಂದರು.

ಸ್ವಾವಲಂಬನೆ ರೂವಾರಿ: ಕೌಶಲ್ಯಾಭಿವೃದ್ಧಿ ಮಂಡ ಳಿಯ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ಮಾತ ನಾಡಿ, ದೇಶ ಇಂದು ಆಹಾರ ವಿಚಾರದಲ್ಲಿ ಸ್ವಾವ ಲಂಬನೆ ಸಾಧಿಸಿದ್ದರೆ, ಅದಕ್ಕೆ ಬಾಬೂಜಿ ಅವರ ಕೊಡುಗೆ ಅಪಾರ. ಕೃಷಿ ಸಚಿವರಾಗಿ, ನೀರಾವರಿ ಸಚಿವ ರಾಗಿ ಹೈಬ್ರಿಡ್‌ ತಳಿಗಳು, ನೀರಾವರಿಗಾಗಿ ಡ್ಯಾಂಗಳ ನಿರ್ಮಾಣ ಮಾಡಿ, ದೇಶದ ಬಡ ಜನತೆ ಹಸಿವಿನಿಂದ ನರಳುವುದನ್ನು ತಪ್ಪಿಸಿದರು ಎಂದು ತಿಳಿಸಿದರು.

ಪಂಚವಾರ್ಷಿಕ ಯೋಜನೆಗಳ ಜೊತೆಗೆ, ಇಂದಿರಾ ಗಾಂಧಿ ಅವರ 20 ಅಂಶಗಳ ಕಾರ್ಯಕ್ರಮದ ಮೂಲಕ ದೇಶದಿಂದ ಬಡತನವನ್ನು ಕಿತ್ತೂಗೆಯಲು ಹಗಲಿರುಳು ಶ್ರಮಿಸಿದವರು ಬಾಬು ಜಗಜೀವನ್‌ ರಾಂ. ಅವರ ಅಡಳಿತ ಎಲ್ಲರಿಗೂ ಮಾದರಿ ಎಂದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ರಾಮಕೃಷ್ಣ ಮಾತ ನಾಡಿ, ಚಿಕ್ಕ ವಯಸ್ಸಿನಲ್ಲಿಯೇ ರಾಜಕೀಯ ಪ್ರವೇಶಿಸಿ ನೆಹರು ಸಂಪುಟದಲ್ಲಿ ಕಿರಿಯ ವಯಸ್ಸಿನಲ್ಲಿಯೇ ಸಚಿವರಾಗಿ ಮಹತ್ವದ ಖಾತೆಗಳನ್ನು ನಿಭಾಯಿಸಿದ ಬಾಬು ಜಗಜೀವನ್‌ ರಾಂ, ನೀರಾವರಿ, ಆಹಾರ ಭದ್ರತೆಗೆ ಒತ್ತು ಕೊಟ್ಟವರು. ಅನ್ಯ ಕಾರಣಕ್ಕೆ ಕಾಂಗ್ರೆಸ್‌ ತೊರೆದು ಬೇರೆ ಪಕ್ಷ ಕಟ್ಟಿ, ಕೊನೆಗೆ ಕಾಂಗ್ರೆಸ್‌ಗೆ ಮರಳಿದ ಬಾಬೂಜಿ, ಕಾಂಗ್ರೆಸ್‌ನಿಂದ ಮಾತ್ರ ದಲಿತರಿಗೆ ರಕ್ಷಣೆ ಎಂಬುದನ್ನು ಅಂದೇ ಮನ ಗಂಡಿದ್ದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು ಗಳಾದ ವಿಜಯಕುಮಾರ್‌, ಆಟೋ ರಾಜು, ಕೆಂಪಣ್ಣ, ಮುಖಂಡರಾದ ಸಿದ್ದಲಿಂಗೇಗೌಡ, ನ್ಯಾತೇಗೌಡ, ಸುಜಾತ, ನಾಗವೇಣಿ, ಮಂಜುನಾಥ್‌, ಚಂದ್ರಶೇಖರ್‌ ಗೌಡ, ಸಂಜೀವ್‌ ಕುಮಾರ್‌, ಶಿವಾಜಿ, ನಟರಾಜು, ಶೆಟ್ಟಾಳಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾಂಗ್ರೆಸ್‌ ದ್ವಂದ್ವ ನಿಲುವು ಸರಿಯಲ್ಲ:  ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಕೆಂಚಮಾರಯ್ಯ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷ ಅಲ್ಪಸಂಖ್ಯಾತರ ಹೆಗಲ ಮೇಲೆ ಬಂದೂಕು ಇಟ್ಟು, ದಲಿತರನ್ನು ಹೊಡೆಯಲು ಹೊರಟಿದೆ. ಈ ಬಗ್ಗೆ ಎಲ್ಲಾ ಪಕ್ಷದಲ್ಲಿರುವ ದಲಿತ ರಾಜಕಾರಣಿ ಗಳು ಆತ್ಮಾವಲೋಕನ ಮಾಡಿಕೊಳ್ಳ ಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಕೋಮುಭಾವನೆ ಕೆರಳಿಸುವ ಕೆಲಸವನ್ನು ವ್ಯವಸ್ಥಿತವಾಗಿ ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳು ಮಾಡುತ್ತಿದ್ದರೂ, ಕಾಂಗ್ರೆಸ್‌ ಮೌನಕ್ಕೆ ಶರಣಾಗಿರುವುದು ಸರಿಯಲ್ಲ. ಈ ರೀತಿಯ ದ್ವಂದ್ವ ನಿಲುವನ್ನು ತಕ್ಷಣವೇ ಕೈಬಿಟ್ಟು, ಅಲ್ಪಸಂಖ್ಯಾತರ ಮೇಲಿನ ದಾಳಿಯನ್ನು ತಡೆಯಬೇಕೆಂದು ಆಗ್ರಹಿಸಿದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.