ಕರ್ನಾಟಕದಲ್ಲಿ ಏನಾಗುತ್ತಿದೆ ಅಂತ ಅರ್ಥವಾಗುತ್ತಿಲ್ಲ : ವಾಟಾಳ್ ನಾಗರಾಜ್
ಆರಗ ಜ್ಞಾನೇಂದ್ರ ಉರ್ದು ಹೇಳಿಕೆ ವಿರುದ್ಧ ಕೆಂಡಾಮಂಡಲ
Team Udayavani, Apr 6, 2022, 5:35 PM IST
ಬೆಂಗಳೂರು: ಕರ್ನಾಟಕದಲ್ಲಿ ಏನಾಗುತ್ತಿದೆ ಅಂತ ಅರ್ಥವಾಗುತ್ತಿಲ್ಲ ಎಂದು ಕನ್ನಡ ಚಳವಳಿ ಹೋರಾಟಗಾರ, ಮಾಜಿ ಶಾಸಕ ವಾಟಾಳ್ ನಾಗರಾಜ್ ಬುಧವಾರ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವಜನಾಂಗದ ಶಾಂತಿಯ ತೋಟ ಎಂದು ರಾಷ್ಟ್ರ ಕವಿ ಕುವೆಂಪು ಸಾಹಿತ್ಯ ಬರೆದಿದ್ದಾರೆ. ಎಲ್ಲಾ ಸಭೆ ಸಮಾರಂಭಗಳಲ್ಲಿ ಈ ಹಾಡನ್ನ ಹೇಳುತ್ತಿದ್ದಾರೆ. ಹಿಂದೂ, ಕ್ರೈಸ್ತ, ಮುಸಲ್ಮಾನ ಅಂತ ಸಾಲು ಇದೆ, ಇದು ಯಾರಿಗೂ ಅರ್ಥ ಆಗುತ್ತಿಲ್ಲ. ನಾಡಿಗೆ ಅಪಚಾರ ಆಗಬಾರದು, ಭವ್ಯ ನಾಡಿದು ಎಂದು ತೀವ್ರ ಬೇಸರ ಹೊರ ಹಾಕಿದರು.
ನಾವು ರಾಜ್ಯವನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದ್ದೇವೆ ಎಂದು ಅಂದುಕೊಂಡಿದ್ದಾರೆ.ಒಂದಾದ ಮೇಲೆ ಒಂದು ನಡೆಯುತ್ತಿದೆ. ಹಿಜಾಬ್, ದೇವಸ್ಥಾನ, ಹಲಾಲ್ ಕಟ್, ಜಟಕಾ ಕಟ್ ಬಂತು.ಈಗ ಮಾವಿನ ಹಣ್ಣು ವಿಚಾರ ಬಂದಿದೆ. ನಾನು ನಮ್ಮ ತೋಟದಲ್ಲಿ ಮಾವಿನ ಹಣ್ಣನ್ನ ಮುಸ್ಲಿಮರಿಗೆ ಕೊಟ್ಟಿದ್ದೇನೆ ಎಂದರು.
ಒಬ್ಬ ಯುವಕನ ಹತ್ಯೆಯಾಗಿದೆ.ಅದರ ಹೇಳಿಕೆ ಬಗ್ಗೆ ಗೃಹ ಸಚಿವರು ಇಂಟಲಿಜೆನ್ಸ್ ರಿಪೋರ್ಟ್ ಪಡೆದಿಲ್ಲ.ಅವರು ವಿಫಲ ಆಗಿದ್ದಾರೆ. ಉರ್ದು ಮಾತಾಡದಿದ್ದುದಕ್ಕೆ ಚೂರಿ ಇರಿದಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಕನ್ನಡದವರು ಸುಮ್ಮನೆ ಕೂತಿದ್ದೀರಾ ಎಂದು ಹರಿದಾಡುತ್ತಿದೆ. ಆರಗ ಜ್ಞಾನೇಂದ್ರ ಅವರು ಹೇಳಿಕೆ ನೀಡಿ ಬಳಿಕ ತಪ್ಪಾಯ್ತು ಅಂತ ಹೇಳಿದ್ದಾರೆ. ನಿಮಗೆ ಗೃಹ ಸಚಿವ ಸ್ಥಾನ ಕೊಡಲಾಗಿದೆ,ಯಾಕೆ ಕೊಟ್ಟಿದ್ದಾರೆ ಅನ್ನುವ ಚರ್ಚೆ ಬೇಡ. ಕೂಡಲೇ ನಿಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರಡಿ.ರಾಜೀನಾಮೆ ಕೊಟ್ಟರೆ ನಿಮಗೂ ಘನತೆ. ಗೃಹಸಚಿವ ಸ್ಥಾನಕ್ಕೂ ಮಾನ ಉಳಿಯುತ್ತದೆ. ನೀವು ಸಣ್ಣ ಮಕ್ಕಳ ರೀತಿ ಹುಡುಗಾಟ ಆಡುತ್ತಿದ್ದೀರಾ? ಮುಖ್ಯಮಂತ್ರಿಗಳಿಗೆ ರಾಜೀನಾಮೆ ಕೊಟ್ಟು ಹೊರಡಿ ಎಂದು ಕಿಡಿ ಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ