ಕುರಿ ಮಾಲಿಕನ ಹತ್ಯೆಕೋರರ ಬಂಧಿಸಿ

ನಾಲ್ಕು ದಿನಗಳಲ್ಲಿ ಆರೋಪಿಗಳ ಬಂಧಿಸದಿದ್ದರೆ ನ್ಯಾಯಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಬಂದ್‌: ಪಾಟೀಲ

Team Udayavani, Apr 7, 2022, 2:39 PM IST

20

ರಾಣಿಬೆನ್ನೂರ: ತಾಲೂಕಿನ ಗಂಗಾಪುರ ಗ್ರಾಮದ ವೆಂಕಟೇಶ್‌ ರಂಗಪ್ಪ ಮತ್ತೂರು (50) ಅವರನ್ನು ತಮ್ಮ ಜಮೀನಿನಲ್ಲಿರುವ ಕುರಿ ದೊಡ್ಡಿಯಲ್ಲಿ ಬುಧವಾರ ಕಟ್ಟಿ ಹಾಕಿ ಹತ್ಯೆ ಮಾಡಿ, 40 ಕುರಿಗಳನ್ನು ಕಳ್ಳತನ ಮಾಡಿದ ಹಿನ್ನೆಲೆಯಲ್ಲಿ, ನಾಲ್ಕು ದಿನಗಳಲ್ಲಿ ಕೊಲೆ ಆರೋಪಿಗಳನ್ನು ಬಂಧಿಸದಿದ್ದರೆ ನ್ಯಾಯಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಗುವುದೆಂದು ರೈತ ಸಂಘದ ರಾಜ್ಯ ಸಂಚಾಲಕ ರವೀಂದ್ರಗೌಡ ಪಾಟೀಲ ಎಚ್ಚರಿಕೆ ನೀಡಿದರು.

ತಾಲೂಕಿನ ಗಂಗಾಪುರದಲ್ಲಿ ಬುಧವಾರ ಗಂಗಾಪುರ ಕುರಿ ಮಾಲಿಕ ವೆಂಕಟೇಶ ಹತ್ಯೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯಿಂದ ಕುರಿಗಾಹಿಗಳಿಗೆ ಅಷ್ಟೇ ಅಲ್ಲ ರೈತರಿಗೂ ಆತಂಕ ಉಂಟಾಗಿದೆ. ಪೊಲೀಸರು ಕೂಡಲೇ ಕೊಲೆ ಆರೋಪಿಗಳನ್ನು ಬಂಧಿಸಬೇಕು. ಮೃತ ವೆಂಕಟೇಶ ಮತ್ತೂರು ಕುಟುಂಬಕ್ಕೆ ಸೂಕ್ತ ಪರಿಹಾರ ಘೋಷಣೆ ಮಾಡಬೇಕು. ಕಳ್ಳತನವಾದ ಪ್ರತಿ ಕುರಿಗೆ 20 ಸಾವಿರ ರೂ.ಪರಿಹಾರವನ್ನು ತಕ್ಷಣವೇ ನೀಡಬೇಕೆಂದು ಮನವಿ ಮಾಡಿದರು.

ಕಳೆದ ಒಂದು ವಾರದ ಹಿಂದೆ ತಾಲೂಕಿನ ಕಾಕೋಳ ತಾಂಡಾದ ಕುರಿಗಾಹಿ ಭೀಮಪ್ಪ ತಾರೆಪ್ಪ ಲಮಾಣಿ ಎಂಬುವರನ್ನು ಬೆದರಿಸಿ, 30 ಕುರಿಗಳು ಹಾಗೂ ಏ.3 ರಂದು ಸುಣಕಲ್‌ಬಿದರಿ ಗ್ರಾಮದ ಗಂಗಮ್ಮ ಶಿದ್ಲಿಂಗಪ್ಪ ಕೋಲಕಾರ ಅವರಿಗೆ ಸೇರಿದ 32 ಕುರಿಗಳನ್ನು ಇದೇ ಮಾದರಿಯಲ್ಲಿ ಕದ್ದೊಯ್ದುದ್ದಾರೆ. ಪ್ರಕರಣ ದಾಖಲಾದರೂ ಕಳ್ಳರು ಇಂದಿಗೂ ಪತ್ತೆಯಾಗಿಲ್ಲ. ಯಾವುದೇ ಪರಿಹಾರ ಕೂಡ ಸಿಕ್ಕಿಲ್ಲ. 3 ತಿಂಗಳ ಹಿಂದೆ ತಾಲೂಕಿನ ಕುದರಿಹಾಳ ಗ್ರಾಮದ ಶಿವಪುತ್ರಪ್ಪ ಹಲವಾಗಲ ಮತ್ತು 8 ದಿನಗಳ ಹಿಂದೆ ಅಂಕಸಾಪುರದ ಹನುಮಂತಪ್ಪ ಹರಿಜನ ಅವರ ಕುರಿಗಳು ಕಳ್ಳತನವಾಗಿವೆ ಎಂದು ದೂರಿದರು.

ರೈತ ಮುಖಂಡ ಹನುಮಂತಪ್ಪ ಕಬ್ಟಾರ ಮಾತನಾಡಿ, ತಾಲೂಕಿನಲ್ಲಿ ಒಂದೇ ತಿಂಗಳಲ್ಲಿ 6 ಪ್ರಕರಣಗಳು ನಡೆದಿದೆ. ಪೊಲೀಸ್‌ ಇಲಾಖೆ ಈ ಪ್ರಕರಣ ಬೇಧಿಸದೇ ಇದ್ದದ್ದು ಕೂಡ ಈ ಕೊಲೆಗೆ ಪುಷ್ಠಿ ನೀಡಿದಂತಾಗಿದೆ. ಹೀಗಾಗಿ, ಕುರಿಗಾರರು ತೀವ್ರ ಭಯಭೀತರಾಗಿದ್ದಾರೆ. ಕಳ್ಳರನ್ನು ಬಂ ಧಿಸಿ ಭಯದ ವಾತಾವರಣ ತಿಳಿಸಗೊಳಿಸಬೇಕೆಂದರು.

ಎಸ್ಪಿ ಹನುಮಂತರಾಯ ಅವರು ಮಾತನಾಡಿ, 4 ದಿನಗಳ ಕಾಲಾವಕಾಶ ಕೊಡಿ. ಕೊಲೆಗಾರರನ್ನು, ಕುರಿ ಕಳ್ಳರ ತಂಡವನ್ನು ಬಂ ಧಿಸಿಯೇ ತೀರುತ್ತೇವೆ ಎಂದು ಭರವಸೆ ನೀಡಿದರು.

ಶಾಸಕ ಅರುಣಕುಮಾರ ಪೂಜಾರ, ಗಂಗಾಪುರ ಸಿದ್ಧಾರೂಢ ಮಠದ ಮರುಳಶಂಕರ ಸ್ವಾಮೀಜಿ, ಕಾಂಗ್ರೆಸ್‌ ಮುಖಂಡ ಕೆ.ಬಿ. ಕೋಳಿವಾಡ, ಜಿಪಂ ಮಾಜಿ ಅಧ್ಯಕ್ಷ ಏಕನಾಥ ಭಾನುವಳ್ಳಿ, ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತನ ಪತ್ನಿ ನಾಗರತ್ನಾ ಅವರಿಗೆ ಸಾಂತ್ವನ ಹೇಳಿದರು.

ತಹಶೀಲ್ದಾರ್‌ ಶಂಕರ್‌ ಜಿ.ಎಸ್‌., ಪುಟ್ಟಪ್ಪ, ಶ್ರೀಧರ, ಗಂಗಾಧರ ಗಂಗಣ್ಣನವರ, ಧರ್ಮರಾಜ ಕುಪ್ಪೇಲೂರು, ಗ್ರಾಪಂ ಸದಸ್ಯ ಸೋಮಜ್ಜ ಚಿಕ್ಕಳವರ, ದಿಳ್ಳೆಪ್ಪ ಸತ್ಯಪ್ಪನವರ, ಹರಿಹರಗೌಡ ಪಾಟೀಲ, ಇಕ್ಬಾಲ್‌ಸಾಬ್‌ ರಾಣಿಬೆನ್ನೂರು, ಮಲ್ಲೇಶಪ್ಪ ಧೂಳೇಹೊಳೆ, ಬಸವರಾಜ ಕೊಂಗಿ, ಎಸ್‌.ಡಿ. ಹಿರೇಮಠ ಸೇರಿದಂತೆ ಗ್ರಾಮಸ್ಥರು ಇದ್ದರು.

ಸಿಪಿಐಗಳಾದ ಶ್ರೀಶೈಲ ಚೌಗಲಾ, ಎಂ.ವೈ. ಗೌಡಪ್ಪಗೌಡ, ಭಾಗ್ಯವತಿ ಗಂತಿ, ಪಿಎಸ್‌ಐ ವಸಂತ, ಹಲಗೇರಿ ಪಿಎಸ್‌ಐ ಮೇಘರಾಜ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು.

ಟಾಪ್ ನ್ಯೂಸ್

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.