ತಲೆಯೆತ್ತಿದೆ ಅತೀ ಎತ್ತರದ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹ


Team Udayavani, Apr 8, 2022, 8:00 AM IST

Untitled-1

ಕುಣಿಗಲ್‌: ಜಗತ್ತಿನಲ್ಲೇ ಅತೀ ಎತ್ತರದ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹವನ್ನು ಹೊಂದಿದ ಖ್ಯಾತಿಗೆ ಸದ್ಯದಲ್ಲೇ ಕರ್ನಾಟಕ ಪಾತ್ರವಾಗಲಿದೆ.

ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನ ಬಿದನಗೆರೆ ಬಸವೇಶ್ವರ ಮಠದಲ್ಲಿ ಈ ವಿಗ್ರಹ ನಿರ್ಮಾಣಗೊಂಡಿದ್ದು, ಎ. 10ರ ಶ್ರೀರಾಮ ನವಮಿಯಂದು ಪ್ರಧಾನಿ ಮೋದಿ ವಿಗ್ರಹವನ್ನು ವರ್ಚುವಲ್‌ ಆಗಿ ಲೋಕಾರ್ಪಣೆ ಮಾಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಶ್ರೀ ಕ್ಷೇತ್ರದ ಪೀಠಾಧಿಕಾರಿ ಡಾ| ಧನಂಜಯ ಗುರೂಜಿ ತಿಳಿಸಿದ್ದಾರೆ.

8 ವರ್ಷಗಳ ಕಾಮಗಾರಿ :

ವಿಗ್ರಹ ನಿರ್ಮಾಣ ಕಾಮಗಾರಿ ಆರಂಭವಾದದ್ದು 2014ರ ಅಕ್ಟೋಬರ್‌ನಲ್ಲಿ. ಸುಮಾರು 50 ಕಾರ್ಮಿಕರು, ಶಿಲ್ಪಿಗಳು ಶ್ರಮ ವಹಿಸಿ 8 ವರ್ಷಗಳಲ್ಲಿ ನಿರ್ಮಾಣ ಪೂರ್ಣಗೊಳಿಸಿದ್ದಾರೆ. ಕಾಮಗಾರಿಗೆ 85 ಸಾವಿರ ಚೀಲ ಸಿಮೆಂಟ್‌, 308 ಟನ್‌ ಕಬ್ಬಿಣ, 500 ಲೋಡ್‌ ಎಂ. ಸ್ಯಾಂಡ್‌ ಹಾಗೂ ಜಲ್ಲಿ ಬಳಸಲಾಗಿದೆ. 5,800 ಲೀ.ಗಳಷ್ಟು ಬಣ್ಣ ಬಳಸಲಾಗಿದ್ದು, ವಿಗ್ರಹದ ತಳಭಾಗದಿಂದ ಮೇಲಿನ ಭಾಗದ ವರೆಗೆ 4,800 ಕೆ.ಜಿ. ತಾಮ್ರ ಉಪಯೋಗಿಸಲಾಗಿದೆ. ಕಿರೀಟಕ್ಕೆ ಚಿನ್ನ, ಬೆಳ್ಳಿ, ತಾಮ್ರ ಹಾಗೂ ಕೆ.ಜಿ.ಗಟ್ಟಲೆ ಒಂದು ರೂ. ನಾಣ್ಯ ಬಳಸಲಾಗಿದೆ.

ಏನಿದರ ವೈಶಿಷ್ಟ್ಯ? :

01.ಇದು ವಿಶ್ವದಲ್ಲೇ ಅತೀ ಎತ್ತರದ್ದು, 161 ಅಡಿ ಎತ್ತರದ ಪಂಚಮುಖೀ ಆಂಜನೇಯ ಸ್ವಾಮಿ ವಿಗ್ರಹ.

  1. ದಕ್ಷಿಣಾಭಿಮುಖವಾಗಿ ನಿಂತಿರುವ ಪಂಚಮುಖೀ ಆಂಜನೇಯಸ್ವಾಮಿಯ ಪಾದದ ಕೆಳಗೆ ಸುಮಾರು 24 ಸ್ತಂಭಗಳಿವೆ.
  2. ಪ್ರತೀ ಕಂಬದಲ್ಲೂ ವಿವಿಧ ದೇವರು ಹಾಗೂ ಹಲವು ಪ್ರಾಣಿಗಳ ಚಿತ್ರವನ್ನು ಅದ್ಭುತವಾಗಿ ಕೆತ್ತನೆ ಮಾಡಲಾಗಿದೆ.
  3. ಮೂರ್ತಿಯ 5 ಮುಖಗಳು, ಗದೆ, ಬಾಲ, ಶಲ್ಯದ ಕೆತ್ತನೆಯು ಮನಸೂರೆಗೊಳ್ಳುವಂತಿದೆ.

 

ಕ್ಷೇತ್ರದ ಹಿನ್ನೆಲೆ : ತ್ಯ ಶನೇಶ್ವರ ಸ್ವಾಮಿ ದೇಗುಲವನ್ನು ಸ್ಥಾಪಿಸಿದರು. ಬಳಿಕ ಉದ್ಭವ ಬಸವಣ್ಣ, ಶನಿಶಿಂಗ್ನಾಪುರ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ್ದಾರೆ. ಶ್ರೀ ಕ್ಷೇತ್ರಕ್ಕೆ ದೇಶ ವಿದೇಶಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಕ್ಷೇತ್ರದಲ್ಲಿ ವೃದ್ಧಾಶ್ರಮ, ಅನಾಥಾಶ್ರಮ, ಉಚಿತ ಆರೋಗ್ಯ ಶಿಬಿರ, ಸರಳ ವಿವಾಹ, ಬಡವರಿಗೆ ಧನ ಸಹಾಯ, ವಸತಿ ಸೌಲಭ್ಯ, ದಾಸೋಹ ಸಹಿತ ವಿವಿಧ ಸಾಮಾಜಿಕ ಕಾರ್ಯಕ್ರಮಗಳು ನಡೆಯುತ್ತಿವೆ.

ಸ್ವಾಮೀಜಿ, ಗಣ್ಯರು ಭಾಗಿ :

ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿ ದ್ದಾರೆ. ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶ್ರೀ ನಿರ್ಮಲಾ ನಂದನಾಥ ಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ, ಹರಿಹರ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಮತ್ತಿತರ ಸ್ವಾಮೀಜಿಗಳು, ಕೇಂದ್ರ ಸಚಿವ ರಾದ ಪ್ರಹ್ಲಾದ ಜೋಶಿ, ನಾರಾಯಣಸ್ವಾಮಿ ಪಾಲ್ಗೊಳ್ಳಲಿದ್ದಾರೆ.

2014 : ಅಕ್ಟೋಬರ್‌ನಲ್ಲಿ ಕಾಮಗಾರಿ ಪ್ರಾರಂಭ

8 : ವರ್ಷ ಪೂರ್ಣಗೊಳ್ಳಲು ತಗಲಿದ ಅವಧಿ

50 : ವಿಗ್ರಹ  ನಿರ್ಮಾಣದಲ್ಲಿ ತೊಡಗಿದ್ದ ಶಿಲ್ಪಿಗಳು

161 : ಅಡಿ ವಿಗ್ರಹದ ಎತ್ತರ

5,800 : ವಿಗ್ರಹಕ್ಕೆ ಬಳಸಿದ ಬಣ್ಣ

4,800 : ಕೆ.ಜಿ. ಬಳಸಲಾದ ತಾಮ್ರ

ಟಾಪ್ ನ್ಯೂಸ್

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.