ಈ ಬಾರಿ ಮಳೆಗಾಲಕ್ಕೆ ಚಿತ್ರಾಪುರ ಸುರಕ್ಷಿತ

ಕಡಲ್ಕೊರೆತ ನಿಯಂತ್ರಣಕ್ಕೆ ತಡೆಗೋಡೆ ಕಾಮಗಾರಿ ಬಹುತೇಕ ಪೂರ್ಣ

Team Udayavani, Apr 8, 2022, 11:41 AM IST

sea

ಸುರತ್ಕಲ್‌: ಮಂಗಳೂರು ಹೊರವಲಯದ ಚಿತ್ರಾಪುರದಲ್ಲಿ ಸಮುದ್ರ ಕೊರೆತ ತಡೆಗೆ ಕಲ್ಲಿನ ತಡೆಗೋಡೆ ನಿರ್ಮಿಸುವ ಕಾಮಗಾರಿ ಹಗಲು ರಾತ್ರಿ ನಡೆಯುತ್ತಿದ್ದು, ಈ ಬಾರಿಯೂ ಸಮುದ್ರ ಕೊರೆತ ಆತಂಕ ಎದುರಿಸುತ್ತಿದ್ದ ಸ್ಥಳೀಯರು ನಿಟ್ಟುಸಿರು ಬಿಡುವಂತಾಗಿದೆ. ಎರಡು ಜೆಸಿಬಿಗಳನ್ನು ಬಳಸಿ ಕಾಮಗಾರಿ ನಡೆಯುತ್ತಿದ್ದು, ಒಂದೆರಡು ವಾರದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.

ಜ. 18ರಂದು ಶಾಸಕ ಡಾ| ಭರತ್‌ ಶೆಟ್ಟಿ ವೈ. ಚಾಲನೆ ನೀಡಿದ ಬಳಿಕ ಕಾಮಗಾರಿ ಅಡೆತಡೆಯಿಲ್ಲದೆ ಸಾಗಿದೆ. ಮರಳಿನಲ್ಲಿ ಆಳಕ್ಕೆ ಗುಂಡಿ ತೆಗೆದು ನೂತನ ತಂತ್ರಜ್ಞಾನದ ಮೂಲಕ ಯಾವುದೇ ದೊಡ್ಡ ತೆರೆಗಳಿಗೂ ಅಲುಗಾಡದಂತೆ ಕಲ್ಲಿನ ತಡೆಗೋಡೆ ನಿರ್ಮಾಣವಾಗುತ್ತಿದೆ.

5.60 ಕೋ.ರೂ.ಅನುದಾನ ಬಿಡುಗಡೆಯಾಗಿ ಒಟ್ಟು 460 ಮೀ. ತಡೆಗೋಡೆ ಕಾಮಗಾರಿ ಈ ಭಾಗದಲ್ಲಿ ಹಾಗೂ ಮೀನಕಳಿಯದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಉಳಿದ ಭಾಗದಲ್ಲಿ ಮುಂದುವರಿಸಲು ಅನುದಾನ ಮೀಸಲಿ ಡಬೇಕಾಗಿದೆ. ಪಣಂಬೂರು ಮೊಗವೀರ ಮಹಾ ಸಭಾ ವ್ಯಾಪ್ತಿಯ ರಂಗ ಮಂದಿರದ ಕಡೆಯಿಂದ ಚಿತ್ರಾಪುರ ಬೀಚ್‌ವರೆಗೆ ಕಾಮಗಾರಿ ನಡೆಯಲಿದೆ. ಮಳೆಗಾಲಕ್ಕೆ ಇನ್ನೇನು ಒಂದೆರಡು ತಿಂಗಳು ಮಾತ್ರವಿದ್ದು, ಕಾಮಗಾರಿ ಪೂರ್ಣಕ್ಕೆ ಆದ್ಯತೆ ನೀಡಲಾಗಿದೆ.

ಅನುದಾನ ಒದಗಿಸಲು ಕೇಂದ್ರಕ್ಕೆ ಪ್ರಸ್ತಾವನೆ

ಕಳೆದ ಬಾರಿ ಈ ಭಾಗದಲ್ಲಿ ಮೀನುಗಾರಿಕೆ ರಸ್ತೆ, ಕಡಲ ಕಿನಾರೆಯ ಭೂಮಿ, ಹಲವಾರು ತೆಂಗಿನ ಮರಗಳು ಸಮುದ್ರ ಪಾಲಾಗಿದ್ದು, ಹಲವು ಮನೆಗಳು ಅಪಾಯಕ್ಕೆ ಸಿಲುಕಿದ್ದವು. ತತ್‌ಕ್ಷಣ ತಾತ್ಕಾಲಿಕ ಕಾಮಗಾರಿ ನಡೆಸಿ ಮನೆಗೆ ಹಾನಿಯಾಗದಂತೆ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಈಗಾಗಲೇ ಕೇಂದ್ರದ ಕ್ರಿಯಾ ಸಮಿತಿಗೆ ರಾಜ್ಯ ಯಾವ ಭಾಗದಲ್ಲಿ ಕಡಲ್ಕೊರೆತ ಹೆಚ್ಚಿದೆ ಎಂಬುದರ ಬಗ್ಗೆ ಮಾಹಿತಿ ನೀಡಿ, ಅನುದಾನಕ್ಕೆ ಮನವಿ ಮಾಡಿತ್ತು. ಅದರಂತೆ ರಾಜ್ಯಕ್ಕೆ ಒಟ್ಟು 100 ಕೋಟಿ ರೂ.ಗಳ ಅಗತ್ಯವಿದೆ ಎಂಬ ಬಗ್ಗೆ ರಾಜ್ಯದ ಅಧಿಕಾರಿಗಳು ಅಂದಾಜು ಪಟ್ಟಿ ತಯಾರಿಸಿ ಕೇಂದ್ರದ 15ನೇ ಹಣಕಾಸು ಯೋಜನೆಯಲ್ಲಿ ಅನುದಾನ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಯೋಜನೆ ಜಾರಿಯಾದಲ್ಲಿ ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರದ ಮೀನಕಳಿಯ, ಮುಕ್ಕ, ಸುರತ್ಕಲ್‌ ಲೈಟ್‌ಹೌಸ್‌, ತಣ್ಣೀರುಬಾವಿ, ಚಿತ್ರಾಪುರದ ಉಳಿದ ಭಾಗದಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣ ಸಾಧ್ಯವಾಗಲಿದೆ.

ಭರವಸೆ ಈಡೇರಿದೆ

ಈ ಬಾರಿ ಸಮುದ್ರ ಕೊರೆತ ತಡೆಗೆ ತಡೆಗೋಡೆ ನಿರ್ಮಾಣ ಪೂರ್ಣಗೊಳ್ಳುತ್ತಿದ್ದು, ಪಣಂಬೂರು ಮೊಗವೀರ ಮಹಾಸಭಾ ವ್ಯಾಪ್ತಿಯಲ್ಲಿ ನಮಗೆ ಸುರಕ್ಷೆ ಸಿಕ್ಕಿದೆ. ಶಾಸಕರು ನೀಡಿದ ಭರವಸೆ ಈಡೇರಿದೆ. ಕಳೆದ ಬಾರಿ ಕಡಲ್ಕೊರೆತಕ್ಕೆ ರಂಗ ಮಂದಿರದ ದರೆ ಸಮುದ್ರಪಾಲಾಗಿತ್ತು. ಕಳೆದ ಮಳೆಗಾಲಕ್ಕೆ ಮಹಾ ಸಭಾದ ವತಿಯಿಂದ 10 ಲ.ರೂ. ಖರ್ಚು ಮಾಡಿ ತಾತ್ಕಾಲಿಕ ಮರಳು ಚೀಲ ಇಟ್ಟು ಭೂಮಿ ರಕ್ಷಣೆಗೆ ಕ್ರಮ ಕೈಗೊಂಡಿದ್ದೆವು. ಶಾಸಕರು ಈ ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ ಎಂದು ಮಹಾಸಭಾ ಅಧ್ಯಕ್ಷ ಮಾಧವ ಸುವರ್ಣ ತಿಳಿಸಿದ್ದಾರೆ.

ಬಹುದಿನಗಳ ಬೇಡಿಕೆ

ರಾಜ್ಯದ ಬಂದರು ಇಲಾಖೆಯಿಂದ ಈ ಬಾರಿ ಚಿತ್ರಾಪುರದಲ್ಲಿ ಕಡಲ್ಕೊರೆತ ತಡೆಗೆ ಕಾಮಗಾರಿ ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗುತ್ತಿದೆ. ಸ್ಥಳೀಯರ ಬಹುದಿನಗಳ ಬೇಡಿಕೆ ಈಡೇರಿಸಲಾಗಿದೆ. ಉತ್ತರ ಕ್ಷೇತ್ರದ 5 ಕಡೆಗಳಲ್ಲಿ ಶಾಶ್ವತ ತಡೆಗೋಡೆ ರಚೆನೆ ಕೇಂದ್ರದ ಎನ್‌ಡಿಆರ್‌ ಎಂಎಫ್‌ ಯೋಜನೆಯಲ್ಲಿ ಅನುದಾನ ಒದಗಿದಲ್ಲಿ ಮತ್ತಷ್ಟು ಕಾಮಗಾರಿ ಕೈಗೊಂಡು ಆಸ್ತಿ, ಮನೆಗಳ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು. ಡಾ| ಭರತ್‌ ಶೆಟ್ಟಿ ವೈ.,ಶಾಸಕರು, ಮಂಗಳೂರು ನಗರ ಉತ್ತರ.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.