ಸೆಲ್ಫಿ ತೆಗೆಯಲು ರೈಲು ಇಂಜಿನ್ ಏರಿದ ಬಾಲಕ ವಿದ್ಯುತ್ ಶಾಕ್ ಗೆ ಬಲಿ
Team Udayavani, Apr 8, 2022, 2:34 PM IST
ಛತ್ರಾಪುರ: ರೈಲು ಇಂಜಿನ್ ನ ಮೇಲೆ ಏರಿ ಸೆಲ್ಫಿ ತೆಗೆಯಲು ಹೋದ 16 ವರ್ಷದ ಬಾಲಕನೋರ್ವ ಹೈಟೆನ್ಶನ್ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಛತ್ರಾಪುರದಲ್ಲಿ ನಡೆದಿದೆ. ಗುರುವಾರ ಈ ಘಟನೆ ನಡೆದಿದೆ.
ಮೃತ ಬಾಲಕನನ್ನು 16 ವರ್ಷದ ಸುಹೈಲ್ ಮನ್ಸೂರಿ ಎಂದು ಗುರುತಿಸಲಾಗಿದೆ. ಈತ ನಿಂತಿದ್ದ ರೈಲಿನ ಇಂಜಿನ್ ಮೇಲೆ ಹತ್ತಿ ಸೆಲ್ಫಿ ತೆಗೆಯಲು ಪ್ರಯತ್ನಿಸಿದ್ದ ಎಂದು ಛತ್ರಾಪುರ ಸ್ಟೇಶನ್ ಮಾಸ್ಟರ್ ಶುಭಾಂಕ್ ಪಟೇಲ್ ಹೇಳಿದ್ದಾರೆ.
“ನಾವು ಬೆಳಗ್ಗೆ ರೈಲ್ವೇ ನಿಲ್ದಾಣಕ್ಕೆ ತೆರಳಿದ್ದೆವು. ಆಗ ಸುಹೈಲ್ ಮನ್ಸೂರಿ ನನ್ನ ಮೊಬೈಲ್ ಕಿತ್ತುಕೊಂಡು ಸೆಲ್ಫಿ ತೆಗೆಯಲು ಹೋದ” ಎಂದು ಸುಹೈಲ್ ಸ್ನೇಹಿತ ಅಶ್ರಫ್ ತಿಳಿಸಿದ್ದಾನೆ.
ಇದನ್ನೂ ಓದಿ:ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?
ಬಾಲಕನು ರೈಲಿನ ಮೇಲಿನ ಹೈಟೆನ್ಶನ್ ತಂತಿಯನ್ನು ಹಿಡಿಯಲು ಹೋದ. ಸೆಲ್ಫಿ ತೆಗೆಯಲು ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಆರ್ ಪಿಎಫ್ ಇನ್ಸ್ ಸ್ಪೆಕ್ಟರ್ ಜಿತೇಂದ್ರ ಕುಮಾರ್ ಹೇಳಿದರು.
ಘಟನೆಯಿಂದ ಕುಪಿತಗೊಂಡ ಕೆಲ ಯುವಕರು ಸ್ಟೇಶನ್ ಮಾಸ್ಟರ್ ಕಚೇರಿಯ ಬಾಗಿಲಿಗೆ ಕಲ್ಲು ತೂರಿ ಹಾನಿ ಮಾಡಿದ್ದಾರೆ. ಅವರು ಸ್ಟೇಶನ್ ಮಾಸ್ಟರ್ನ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ಅವರ ಬ್ಯಾಗ್ ಮತ್ತು ವಾಚ್ ಅನ್ನು ಕಸಿದುಕೊಂಡಿದ್ದಾರೆ ಎಂದು ಆರ್ಪಿಎಫ್ ಅಧಿಕಾರಿ ತಿಳಿಸಿದ್ದಾರೆ.
“ ಪೊಲೀಸರು ಸ್ಥಳದಲ್ಲಿ ಶಾಂತಿ ಸ್ಥಾಪನೆ ಮಾಡಿದ್ದಾರೆ. ಬಾಲಕನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಆರ್ ಪಿಎಫ್ ಇನ್ಸ್ಪೆಕ್ಟರ್ ಜಿತೇಂದ್ರ ಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ