ಕ್ರೀಡಾಂಗಣ ನಿರ್ಮಾಣ ನಿರೀಕ್ಷೆ ಹುಸಿ


Team Udayavani, Apr 10, 2022, 1:11 PM IST

Untitled-1

ಚನ್ನಪಟ್ಟಣ: ತಾಲೂಕಿನ ಬಹುವರ್ಷಗಳ ಬೇಡಿಕೆ ಯಾಗಿರುವ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕೆ ಬಡಿದಿರುವ ಗ್ರಹಣ ಬಿಡುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ತಾಲೂಕು, ಜಿಲ್ಲಾ ಮಟ್ಟದ ಪ್ರತಿ ಕ್ರೀಡಾಕೂಟಕ್ಕೂ ಬಾಲಕರ ಕಾಲೇಜು ಮೈದಾನವೇ ಖಾಯಂ ಕ್ರೀಡಾಂಗಣವಾಗಿದ್ದು, ಅತ್ತ ಕ್ರೀಡಾಪಟುಗಳ ಅಭ್ಯಾಸಕ್ಕೆ ಸಮಸ್ಯೆ ಎದುರಾಗಿದೆ.

ಪಟ್ಟಣದ ತಟ್ಟೆಕರೆ ಬಳಿಯ 14 ಎಕರೆ ಜಮೀನನ್ನು ಕ್ರೀಡಾಂಗಣ ನಿರ್ಮಾಣಕ್ಕಾಗಿ ಈ ಹಿಂದೆ ಕಂದಾಯ ಇಲಾಖೆ ಮಂಜೂರು ಮಾಡಿತ್ತಾದರೂ, ಆ ಜಾಗದ ವಿವಾದ ಇದುವರೆಗೂ ಬಗೆಹರಿಯದ ಕಾರಣ ಕ್ರೀಡಾಂಗಣ ನಿರ್ಮಾಣದ ಕನಸು ಕಂಡಿದ್ದ ಸಾವಿರಾರು ಕ್ರೀಡಾಪಟುಗಳ ನಿರೀಕ್ಷೆ ಹುಸಿಯಾಗಿದೆ.

ಪಟ್ಟಣದ ತಟ್ಟೆಕರೆ ಬಳಿಯ 78, 79 ಹಾಗೂ 100 ಸರ್ವೆ ನಂಬರಿನ ಒಟ್ಟು 14 ಎಕರೆ ಜಮೀನನ್ನು ಈ ಹಿಂದೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಿ.ಪಿ.ಯೋಗೇಶ್ವರ್‌ ಅವರ ಉಲ್ಲೇಖದ ಮೇರೆಗೆ ಜಿಲ್ಲಾಧಿಕಾರಿಗಳು ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಗೆ ಮಂಜೂರು ಮಾಡಿದ್ದರು. ಈ ಹಿಂದೆ ಅದೇ ಸ್ಥಳವನ್ನು ಖಾಸಗಿ ಸಂಸ್ಥೆಗಳಿಗೆ ಹಂಚಿಕೆ ಮಾಡಲಾಗಿತ್ತಾದರೂ, ಆ ಎಲ್ಲಾ ಆದೇಶವನ್ನು ರದ್ದುಗೊಳಿಸಿ ಮಂಜೂರು ಮಾಡಲಾಗಿತ್ತು.

ಮುಗಿಯದ ಸಮಸ್ಯೆ: ಸರ್ವೆ ನಂ. 78ರ 10 ಎಕರೆ ಜಮೀನನ್ನು ಕೆಂಗಲ್‌ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ, ಸರ್ವೆ ನಂ. 79ರ 1.18 ಎಕರೆ ಜಮೀನನ್ನು ಅಗ್ನಿ ಶಾಮಕ ಇಲಾಖೆಗೆ, ಸರ್ವೆ ನಂ. 100ರ 10 ಗುಂಟೆ ಜಮೀನನ್ನು ಸಂಸ್ಥೆಯೊಂದಕ್ಕೆ ನೀಡಲಾಗಿತ್ತು. ಕ್ರೀಡಾಂಗಣ ನಿರ್ಮಾಣದ ಉದ್ದೇಶಕ್ಕಾಗಿ ಈ ಎಲ್ಲರಿಗೂ ಮಂಜೂರಾಗಿದ್ದ ಆದೇಶವನ್ನು ರದ್ದು ಪಡಿಸಿತ್ತಾದರೂ, 5 ಎಕರೆ ಜಮೀನು ತಮಗೆ ಸೇರಬೇಕೆಂದು ಖಾಸಗಿ ವ್ಯಕ್ತಿಯೊಬ್ಬರು ನ್ಯಾಯಾಲ ಯದ ಮೊರೆಹೋಗಿದ್ದರು. ಹಾಗೆಯೇ 10 ಗುಂಟೆ ಜಾಗ ಕ್ಕೂ ಖಾಸಗಿ ಸಂಸ್ಥೆ ನ್ಯಾಯಾ ಲಯ ಮೊರೆಹೋಗಿದೆ. ಉಳಿಕೆ 9 ಎಕರೆ ಜಮೀನಿನಲ್ಲಿಯೂ ತಮಗೆ ಜಾಗ ಸೇರಬೇಕೆಂದು ಕೆಲವರು ಒತ್ತುವರಿ ಮಾಡಿ ಕೊಂಡಿದ್ದು, ಒತ್ತುವರಿ ತೆರವಾಗದಿರುವುದರಿಂದ ಕ್ರೀಡಾಂಗಣ ನಿರ್ಮಾಣ ಬಿಕ್ಕಟ್ಟು ಬಗೆಹರಿಯುತ್ತಿಲ್ಲ.

ಹಲವು ಯೋಜನೆ: ಜಮೀನು ತನ್ನ ವಶಕ್ಕೆ ಬರುವ ಮುಂಚೆಯೇ, ಕ್ರೀಡಾಂಗಣ ನಿರ್ಮಾಣ ಮಾಡಲು ಮುಂದಾಗಿದ್ದ ಕ್ರೀಡಾ ಇಲಾಖೆ, ಉದ್ದೇಶಿತ ಜಾಗದಲ್ಲಿ ಹೊರಾಂಗಣ ಹಾಗೂ ಒಳಾಂಗಣ ಕ್ರೀಡಾಂಗಣ ರೂಪಿಸಲು ಯೋಜಿಸಿತ್ತು. 400 ಮೀಟರ್‌ ಉದ್ದದ ಸಿಂಥೆಟಿಕ್‌ ಟ್ರ್ಯಾಕ್‌, ಕಬಡ್ಡಿ, ಷೆಟಲ್‌ ಕಾಕ್‌, ಖೋಖೋ, ಅಥ್ಲೆಟಿಕ್ಸ್‌ ಕ್ರೀಡಾಂಗಣವನ್ನು ನಿರ್ಮಾಣ ಮಾಡಲು ಇಲಾಖೆ ಆಸಕ್ತಿ ತೋರಿತ್ತು. ಇದರ ಜತೆಗೆ ಹೊರಾಂಗಣದಲ್ಲಿ ಫ‌ುಟ್ಬಾಲ್‌ ಹಾಗೂ ಹಾಕಿ ಆಟಕ್ಕೆ ಅಂಕಣ ಮಾಡಲು ಮುಂದಾಗಿತ್ತು. ಆದರೆ ಆರಂಭದಲ್ಲಿ ತೋರಿದ ಶೂರತ್ವ ನಂತರದ ದಿನಗಳಲ್ಲಿ ಮರೆಯಾದ್ದರಿಂದ ಇಡೀ ಪ್ರಸ್ತಾಪ ನೆನೆಗುದಿಗೆ ಬಿದ್ದಿದೆ. ಕ್ರೀಡಾಂಗಣ ನಿರ್ಮಾಣಕ್ಕೆ ಮಂಜೂರಾಗಿರುವ ಜಮೀನಿನಲ್ಲಿನ ತೊಡಕು ನಿವಾರಣೆ ಮಾಡಲು ಸಾಕಷ್ಟು ಪ್ರಯತ್ನ ಪಟ್ಟರೂ ಇದುವರೆಗೂ ಅದು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಜಮೀನು ಸಿಕ್ಕಿತೆಂಬ ಖುಷಿಯಲ್ಲಿ ತಯಾರಿ ನಡೆಸಿದ್ದ ಕ್ರೀಡಾ ಇಲಾಖೆ ಏನೂ ಮಾಡಲಾಗದೆ ಸುಮ್ಮನಾಗಿದೆ.

ಕ್ರೀಡಾಂಗಣ ನಿರ್ಮಾಣ ಕನಸು ಹೊತ್ತು ಕಾಯುತ್ತಿ ರುವ ತಾಲೂಕಿನ ನೂರಾರು ಮಂದಿ ಕ್ರೀಡಾಪಟುಗಳ ಬವಣೆ ತಪ್ಪಿಸಲು ಈಗಲಾದರೂ ಸಾಧ್ಯವಾಯಿತಲ್ಲ ಎಂದು ನಿಟ್ಟುಸಿರು ಬಿಡುವಷ್ಟರಲ್ಲೇ ಮೂಲ ಉದ್ದೇಶವೇ ತಣ್ಣಗಾದದ್ದು ಕ್ರೀಡಾಪಟುಗಳ ನಿರಾಸೆಗೆ ಕಾರಣವಾಗಿದೆ.

ಈ ಬಗ್ಗೆ ಸಂಬಂಧಿಸಿದ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ಕ್ರೀಡಾ ಇಲಾಖೆ ಗಮನಹರಿಸಿ, ಸಮಸ್ಯೆಗಳನ್ನು ಸರಿಪಡಿಸಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡಲು ಮುಂದಾಗಬೇಕಿದೆ.

ನೆರವೇರದ ಉದ್ದೇಶ : ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ ಸಿ.ಪಿ. ಯೋಗೇಶ್ವರ್‌ ಅವರು ಉಸ್ತುವಾರಿ ಸಚಿವರಾಗಿದ್ದ ಸಮಯದಲ್ಲಿ ವಿವಾದಗಳನ್ನು ಶೀಘ್ರವಾಗಿ ಬಗೆಹರಿಸಿ ಕ್ರೀಡಾಂಗಣ ನಿರ್ಮಾಣ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್‌ ಅವರಿಗೆ ಆದೇಶಿಸಿದ್ದರಾದರೂ, ನಂತರದ ದಿನಗಳಲ್ಲಿ ಈ ಬಗ್ಗೆ ಪ್ರಸ್ತಾಪವಾಗದಿರುವುದು ಸಮಸ್ಯೆ ಜಟಿಲವಾಗಲು ಕಾರಣವಾಯಿತು ಎಂದು ಹೇಳಲಾಗುತ್ತಿದೆ. ಕಂದಾಯ ಇಲಾಖೆಯ ಉನ್ನತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳೇ ಜಾಗವನ್ನು ಮಂಜೂರು ಮಾಡಿದ್ದರೂ, ಇದುವರೆಗೂ ಉದ್ದೇಶ ನೆರವೇರುತ್ತಿಲ್ಲ.

ಜನಪ್ರತಿನಿಧಿ ಗಳ ಇಚ್ಛಾಶಕ್ತಿಯ ಕೊರತೆಯಿಂದಾಗಿ ಕ್ರೀಡಾಂಗಣಕ್ಕೆ ನಿಗದಿಪಡಿಸಿರುವ ಜಮೀನು ಸ್ವಾಧೀನ ಪಡಿಸಿಕೊಳ್ಳಲು ಇದುವರೆಗೂ ಆಗಿಲ್ಲ. ಮಾಜಿ ಮುಖ್ಯಮಂತ್ರಿಗಳು, ಕ್ಷೇತ್ರದ ಶಾಸಕರಾಗಿರುವ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ಪ್ರಭಾವಿ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌, ಮುಖಂಡ ಪುಟ್ಟಣ್ಣ, ಉಸ್ತುವಾರಿ ಸಚಿವ ಡಾ. ಅಶ್ವತ್ಥನಾರಾಯಣ ಅವರಿಗೆ ನಿಜಕ್ಕೂ ಕ್ರೀಡಾಕ್ಷೇತ್ರದ ಬಗ್ಗೆ ಆಸಕ್ತಿಯಿದ್ದರೆ ಕೂಡಲೇ ಒತ್ತುವರಿಗಳನ್ನು ತೆರವುಗೊಳಿಸಿ, ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಬೇಕು. ಖಾಸಗಿ ವ್ಯಕ್ತಿ ತಮ್ಮದೆನ್ನುವ ಜಾಗವನ್ನು ಸ್ವಾಧೀನಪಡಿಸಿಕೊಳ್ಳಬೇಕು. -ಪಿ.ಜೆ.ಗೋವಿಂದರಾಜು, ಅಥ್ಲೆಟಿಕ್ಸ್‌ ಕ್ರೀಡಾಪಟು.

ಕ್ರೀಡಾಂಗಣ ನಿರ್ಮಾಣಕ್ಕಾಗಿ ಸದ್ಯ9 ಎಕರೆ ಇಲಾಖೆ ಸುಪರ್ದಿಗೆ ಬಂದಿದ್ದು, ಒತ್ತುವರಿ ಮಾಡಿಕೊಂಡಿರುವ ಜಮೀನನ್ನು ತೆರವು ಗೊಳಿಸಿ ಕೊಡುವಂತೆ ಉಪವಿಭಾಗಾ ಕಾರಿಗಳು, ತಹಶೀಲ್ದಾ ರರಿಗೆ ಮನವಿ ಸಲ್ಲಿಸಿದ್ದೇವೆ. ಒತ್ತುವರಿ ತೆರವಾದರೆ ಶೀಘ್ರ ಹಿಂದಿನ ಯೋಜನೆಯಂತೆ ಕ್ರೀಡಾಂಗಣ ನಿರ್ಮಾಣ ಮಾಡಲು ಇಲಾಖೆ ಮುಂದಾಗಲಿದೆ. -ಯುವ ಜನಸೇವಾ ಮತ್ತು ಕ್ರೀಡಾ ಇಲಾಖೆ ಅಧಿಕಾರಿ.

 

-ಎಂ.ಶಿವಮಾದು

ಟಾಪ್ ನ್ಯೂಸ್

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

Amit Shah

NDAಗೆ ಈಗಾಗಲೇ 270 ಕ್ಷೇತ್ರಗಳಲ್ಲಿ ಜಯ ಸಿಕ್ಕಿದೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.