ಸಮಾಜದ ಶಾಂತಿ ಕದಡಿದರೆ ಕ್ರಮ: ಎಎಸ್ಪಿ


Team Udayavani, Apr 10, 2022, 1:08 PM IST

9-action

ವಾಡಿ: ವೈಯಕ್ತಿಕ ದ್ವೇಷ ಸಮಾಜದ ಅಶಾಂತಿಗೆ ಕಾರಣವಾದರೆ, ಅಂತಹ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಪ್ರಸನ್ನಕುಮಾರ ದೇಸಾಯಿ ಎಚ್ಚರಿಕೆ ನೀಡಿದರು.

ಲಾಡ್ಲಾಪುರ ಗ್ರಾಮದಲ್ಲಿ ವಾಡಿ ಪೊಲೀಸ್‌ ಠಾಣೆ ವತಿಯಿಂದ ಏರ್ಪಡಿಸಲಾಗಿದ್ದ “ಮನೆ ಬಾಗಿಲಿಗೆ ಪೊಲೀಸ್‌’ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲ ಧರ್ಮಿಯ ಜನರು ಕೋಮು ಸೌಹಾರ್ದತೆಯಿಂದ ಬದುಕಿದರೆ ಊರೊಂದು ಶಾಂತಿ ತೋಟವಾಗುತ್ತದೆ. ಸಣ್ಣಪುಟ್ಟ ಗಲಾಟೆಗಳು ಗ್ರಾಮಸ್ಥರ ಸೌಹಾರ್ದತೆಗೆ ಧಕ್ಕೆ ಉಂಟಾಗಬಾರದು. ಕ್ಷುಲ್ಲಕವಾದ ಜಗಳಗಳು ಹಿರಿಯರ ಸಂಧಾನದಲ್ಲೇ ಕೊನೆಗಾಣಬೇಕು. ಇದನ್ನು ಮೀರಿದರೆ ಠಾಣೆಗೆ ದೂರು ನೀಡುವ ಮೂಲಕ ಕಾನೂನು ಪಾಲಿಸಬೇಕು. ಯಾವುದೇ ಕಾರಣಕ್ಕೂ ಭಾವೋದ್ವೇಗಕ್ಕೊಳಗಾಗಿ ಕಾನೂನು ಕೈಗೆತ್ತಿಕೊಳ್ಳಬಾರದು. ಪ್ರತಿಯೊಂದು ಸಮಸ್ಯೆಗೂ ಕಾನೂನಿನಲ್ಲಿ ಪರಿಹಾರವಿದೆ. ಸಹೋದರತ್ವ ಭಾವದಿಂದ ಬಾಳುವ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ಹೇಳಿದರು.

ಊರಿನಲ್ಲಿ ಯಾರಾದರೂ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು ಕಂಡು ಬಂದರೆ ಅಥವಾ ಅಮಾಯಕರ ಮೇಲೆ ದೌರ್ಜನ್ಯ ಎಸಗುತ್ತಿದ್ದರೆ, ಸಾಮಾಜಿಕ ವಾತಾವರಣ ಹದಗೆಡಿಸುತ್ತಿದ್ದರೆ ತಕ್ಷಣ ಪೊಲೀಸ್‌ ಠಾಣೆಗೆ ದೂರು ಕೊಡಿ. ದೂರು ಕೊಟ್ಟವರ ಹೆಸರನ್ನು ನಾವು ಯಾವುದೇ ಕಾರಣಕ್ಕೂ ಬಹಿರಂಗಪಡಿಸುವುದಿಲ್ಲ. ಸಾರ್ವಜನಿಕರ ಸಹಕಾರವಿದ್ದರೆ ಮಾತ್ರ ಪೊಲೀಸರು ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಸಾಧ್ಯವಾಗುತ್ತದೆ. ಸಮಾಜಘಾತುಕರನ್ನು ಜನರ ಮಧ್ಯೆ ಇರಲು ಬಿಟ್ಟರೆ ಆಪತ್ತು ತಂದಿಡುತ್ತಾರೆ. ಅಂಥಹವರಿಗೆ ಕಾನೂನು ಪಾಠ ಕಲಿಸುತ್ತದೆ ಎಂದು ಹೇಳಿದರು.

ಅಪಘಾತ, ಬಾಲ್ಯ ವಿವಾಹ, ವಾಹನ ಚಾಲಕರ ಮದ್ಯ ಸೇವನೆ, ಪುಂಡಾಟಿಕೆ, ಹಣಕಾಸು ವ್ಯವಹಾರ, ಮಟಕಾ, ಗಾಂಜಾ ಮಾರಾಟದಂತ ಕಾನೂನುಬಾಹೀರ ಚಟುವಟಿಕೆಗಳ ಕುರಿತು ತಿಳಿ ಹೇಳಿದರು.

ಸಿಪಿಐ ಚಂದ್ರಕಾಂತ ಯಾತನೂರ, ಪಿಎಸ್‌ಐ ಮಹಾಂತೇಶ ಜಿ.ಪಾಟೀಲ, ಗ್ರಾಪಂ ಅಧ್ಯಕ್ಷೆ ಸೋನಿಬಾಯಿ ರಾಠೊಡ, ಉಪಾಧ್ಯಕ್ಷ ಬಸವರಾಜಗೌಡ ಮಾಲಿಪಾಟೀಲ, ಮುಖಂಡರಾದ ನಾಗೇಂದ್ರಪ್ಪ ಮುಕ್ತೇದಾರ, ವೀರೇಶ ಕೊಂಚೂರು, ಗೋವಿಂದಪ್ಪ, ಸಾಬಣ್ಣ ಆನೇಮಿ, ವಿಶ್ವನಾಥ ಗಂದಿ, ಶ್ಯಾಮಸುಂದರ ರೆಡ್‌ಸನ್‌, ಗುಂಡುಗೌಡ ಪಾಟೀಲ, ಈರಣ್ಣ ಮಲಕಂಡಿ, ದೊಡ್ಡಪ್ಪಗೌಡ ಪೊಲೀಸ್‌ ಪಾಟೀಲ, ಸಾಬಣ್ಣ ಗೊಡಗ, ನಾಗಣ್ಣ ಹೂಗಾರ, ಚಂದಪ್ಪ ಲಕಬಾ, ತಳಜಾರಾಮ ರಾಠೊಡ, ಸುಬ್ಬಣ್ಣ ಭೋವಿ ಹಾಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು. ಪಿಡಿಒ ಕಲ್ಯಾಣಿ ಕೊಳ್ಳದ್‌ ಸ್ವಾಗತಿಸಿದರು, ಶಾಂತಕುಮಾರ ಎಣ್ಣಿ ನಿರೂಪಿಸಿದರು, ಮಲ್ಲಮ್ಮ ಕುಂಬಾರ ವಂದಿಸಿದರು.

ಟಾಪ್ ನ್ಯೂಸ್

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.