ಮುನ್ನೆಚ್ಚರಿಕೆ ಡೋಸ್‌ ಪಡೆಯಲು ಹಿಂದೇಟು ಸಲ್ಲದು


Team Udayavani, Apr 11, 2022, 6:00 AM IST

ಮುನ್ನೆಚ್ಚರಿಕೆ ಡೋಸ್‌ ಪಡೆಯಲು ಹಿಂದೇಟು ಸಲ್ಲದು

ಕೇಂದ್ರ ಆರೋಗ್ಯ ಇಲಾಖೆಯ ನಿರ್ದೇಶನದಂತೆ ಎಲ್ಲ ರಾಜ್ಯಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆಯ ಮುನ್ನೆಚ್ಚರಿಕೆ ಡೋಸ್‌ ನೀಡಿಕೆ ಆರಂಭವಾಗಿದೆ. ಸದ್ಯ ಈ ಮುನ್ನೆಚ್ಚರಿಕೆ ಡೋಸ್‌ಗಳನ್ನು ಖಾಸಗಿ ಲಸಿಕಾ ಕೇಂದ್ರಗಳಲ್ಲಿ ನೀಡುವ ವ್ಯವಸ್ಥೆ ಮಾಡಲಾಗಿದ್ದು, ಇದಕ್ಕಾಗಿ ಕಂಪನಿಗಳು ಲಸಿಕೆಗೆ ಕನಿಷ್ಠ ದರವನ್ನು ನಿಗದಿಪಡಿಸಿವೆ.

ಈಗಾಗಲೇ ದೇಶದಲ್ಲಿ ಕೊರೊನಾ ಸೋಂಕಿನ ಮೂರು ಅಲೆಗಳು ಕಾಣಿಸಿಕೊಂಡಿದ್ದು ಒಂದು ಮತ್ತು ಎರಡನೇ ಅಲೆಗಳು ಜನರ ಆರೋಗ್ಯದ ಮೇಲೆ ಭಾರೀ ಪರಿಣಾಮವನ್ನು ಬೀರಿದ್ದವು. ಮೊದಲ ಅಲೆಯ ವೇಳೆ ಜನರಲ್ಲಿನ ತಿಳಿವಳಿಕೆ ಕೊರತೆ, ನಿರ್ಲಕ್ಷ್ಯ ಮತ್ತಿತರ ಕಾರಣಗಳಿಂದಾಗಿ ಹಾನಿ ಸಂಭವಿಸಿತ್ತು. ಎರಡನೇ ಅಲೆ ದೇಶವನ್ನು ಸಂಪೂರ್ಣವಾಗಿ ಕಂಗೆಡುವಂತೆ ಮಾಡಿತ್ತಲ್ಲದೆ ಅಪಾರ ಸಾವು-ನೋವು ಸಂಭವಿಸಿತ್ತು. ಈ ಎರಡು ಅಲೆಗಳಿಂದ ಪಾಠ ಕಲಿತಿದ್ದ ಜನರು ಮತ್ತು ಸರಕಾರ ಸಾಕಷ್ಟು ಮುಂಜಾಗ್ರತೆ ವಹಿಸಿದ್ದರಿಂದಾಗಿ ಮೂರನೇ ಅಲೆ ಅಷ್ಟೇನೂ ಪರಿಣಾಮ ಬೀರಿರಲಿಲ್ಲ. ಅಲ್ಲದೆ ಈ ವೇಳೆಗೆ ದೇಶದ ಬಹುತೇಕ ವಯಸ್ಕರು ಕೊರೊನಾ ನಿರೋಧಕ ಲಸಿಕೆಗಳನ್ನು ಪಡೆದುಕೊಂಡಿದ್ದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಿತ್ತು. ಮಾತ್ರವಲ್ಲದೆ ಎರಡು ಅಲೆಗಳ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯ ಜನರನ್ನು ಸೋಂಕು ಬಾಧಿಸಿದ್ದರಿಂದಾಗಿ ಸಹಜವಾಗಿಯೇ ಅವರಲ್ಲಿ ಕೊರೊನಾ ನಿರೋಧಕ ಶಕ್ತಿ ವೃದ್ಧಿಯಾಗಿತ್ತು. ಹೀಗಾಗಿ ಅತ್ಯಂತ ತೀವ್ರಗತಿಯಲ್ಲಿ ಹರಡುತ್ತಿದ್ದ ಒಮಿಕ್ರಾನ್‌ ಸೋಂಕು ಅಷ್ಟೇನೂ ಪರಿಣಾಮ ಬೀರಲಿಲ್ಲ.

ವಯಸ್ಕರಿಗೆ ಕೊರೊನಾ ನಿರೋಧಕ ಲಸಿಕೆ ನೀಡಿಕೆ ಪ್ರಕ್ರಿಯೆ ಮುಕ್ತಾಯದ ಹಂತ ತಲುಪುತ್ತಿದ್ದಂತೆಯೇ ಸರಕಾರ ಎರಡು ಹಂತಗಳಲ್ಲಿ 12ರಿಂದ 18 ವರ್ಷದೊಳಗಿನವರಿಗೆ ಲಸಿಕೆ ನೀಡಿಕೆ ಕೈಗೆತ್ತಿಕೊಂಡಿದೆ. ಇದರ ನಡುವೆಯೇ ಹಂತಹಂತವಾಗಿ ಜನತೆಗೆ ಮೂರನೆಯ ಅಥವಾ ಮುನ್ನೆಚ್ಚರಿಕೆ ಡೋಸ್‌ ಅನ್ನು ನೀಡಲು ಆರಂಭಿಸಿದೆ. ರವಿವಾರದಿಂದ 18 ವರ್ಷ ಮೇಲ್ಪಟ್ಟವರಿಗೆಲ್ಲ ಈ ಹೆಚ್ಚುವರಿ ಡೋಸ್‌ ನೀಡಲಾಗುತ್ತಿದೆ. ಲಸಿಕೆಯ ದರವನ್ನು ಲಸಿಕೆ ತಯಾರಿಕ ಕಂಪೆನಿಗಳು ಗಣನೀಯವಾಗಿ ಇಳಿಕೆ ಮಾಡಿವೆ. ಸದ್ಯ ದೇಶದಲ್ಲಿ ನೀಡಲಾಗುತ್ತಿರುವ ಪ್ರಮುಖ ಎರಡು ಲಸಿಕೆಗಳಾದ ಕೊವಿಶೀಲ್ಡ್‌ ಮತ್ತು ಕೊವ್ಯಾಕ್ಸಿನ್‌ ಲಸಿಕೆಗೆ 225 ರೂ. ದರ ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ವಿತರಣ ಶುಲ್ಕವಾಗಿ 150 ರೂ. ವಿಧಿಸಲು ಸರಕಾರ ಅವಕಾಶ ಮಾಡಿಕೊಟ್ಟಿದೆ. 18 ವರ್ಷ ಮೇಲ್ಪಟ್ಟವರು ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್‌ ಪಡೆಯಬಹುದಾಗಿದೆ.

ದೇಶಾದ್ಯಂತ ಕೊರೊನಾದ ತೀವ್ರತೆ ಕಡಿಮೆಯಾಗಿರುವಾಗ ಈ ಮುನ್ನೆಚ್ಚರಿಕೆ ಡೋಸ್‌ನ ಆವಶ್ಯಕತೆ ಏನು ಎಂಬ ಪ್ರಶ್ನೆ ಸದ್ಯ ಬಹುತೇಕ ಜನರನ್ನು ಕಾಡುತ್ತಿದೆ. ಕಳೆದ ಅಲೆಯ ವೇಳೆ ಒಮಿಕ್ರಾನ್‌ ಸೋಂಕು ಅಷ್ಟೇನೂ ಪರಿಣಾಮ ಬೀರಿಲ್ಲ. ಮಾತ್ರವಲ್ಲದೆ ಕೊರೊನಾ ಸಾಂಕ್ರಾಮಿಕ ಈಗ ಇತರ ಸಾಂಕ್ರಾಮಿಕಗಳಂತೆ ಸಾಮಾನ್ಯ ಕಾಯಿಲೆಯಾಗಿ ಮಾರ್ಪಟ್ಟಿದ್ದು, ಇದನ್ನು ಎದುರಿಸಲು ನಮ್ಮ ದೇಹ ಸಶಕ್ತವಾಗಿದೆ ಎಂಬ ವಾದವನ್ನು ಮುಂದಿಡತೊಡಗಿದ್ದಾರೆ. ಆದರೆ ಕೊರೊನಾ ನಿರೋಧಕ ಲಸಿಕೆಯ ಪರಿಣಾಮ ಸೀಮಿತ ಅವಧಿಯದ್ದಾಗಿರುವುದರಿಂದ ಮುನ್ನೆಚ್ಚರಿಕೆಯಾಗಿ ಮೂರನೇ ಡೋಸ್‌ ಪಡೆಯುವುದು ನಮ್ಮೆಲ್ಲರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಸೂಕ್ತ. ಇಷ್ಟು ಮಾತ್ರವಲ್ಲದೆ ದೇಶದ ಕೆಲವೆಡೆ ಕೊರೊನಾ ವೈರಸ್‌ನ ಹೊಸ ರೂಪಾಂತರಿ ಎಕ್ಸ್‌ಇ ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವುದರಿಂದ ಈ ಹೊತ್ತಿನಲ್ಲಿ ಮೈಮರೆಯುವುದಾಗಲೀ ಉಡಾಫೆ ವರ್ತನೆಯಾಗಲೀ ಸಲ್ಲದು.

ಟಾಪ್ ನ್ಯೂಸ್

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.