ಚುಚ್ಚಿದಾಗ ನರ ಕಟ್ ಆಗಿ ಚಂದ್ರು ಸತ್ತಿದ್ದಾನೆ : ಜಮೀರ್ ಅಹ್ಮದ್ ಖಾನ್ ವಿವಾದ
Team Udayavani, Apr 11, 2022, 2:27 PM IST
ಬೆಂಗಳೂರು : ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಂದ್ರು ಕೊಲೆ ಪ್ರಕರಣ ಸಂಬಂಧ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ‘ಚುಚ್ಚಿದಾಗ ನರ ಕಟ್ ಆಗಿ ಸತ್ತು ಹೋಗಿದ್ದಾನೆ’ ಎಂದು ಜಮೀರ್ ವ್ಯಾಖ್ಯಾನಿಸಿದ್ದಾರೆ.
”ಅವನು ಕೊಲೆ ಮಾಡಬೇಕು ಎಂಬ ಉದ್ದೇಶ ಹೊಂದಿರಲಿಲ್ಲ. ಚುಚ್ಚಿದಾಗ ನರ ಕಟ್ಟಾಗಿ ಸತ್ತು ಹೋದನಂತೆ. ಅವನಿಗೆ ಕೊಲೆ ಮಾಡಬೇಕು ಅಂತ ಇರಲಿಲ್ಲ.ಆದರೆ ಅವನು ಮಾಡಿದ್ದು ತಪ್ಪು ಅವನಿಗೆ ಶಿಕ್ಷೆ ಆಗಲೇಬೇಕು,”ಎಂದು ಚಾಮರಾಜ ಪೇಟೆಯಲ್ಲಿ ಶಾಸಕ ಜಮೀರ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
”ತೊಡೆಗೆ ಚಾಕು ಚುಚ್ಚಿದ್ದಾಗ ಬ್ಲೀಡಿಂಗ್ ನಿಂತಿಲ್ಲ. ಯಾವುದೋ ನರ ಕಟ್ಟಾಗಿ ಬಿಟ್ಟಿದೆ. ಬ್ಲೀಡಿಂಗ್ ನಿಂತಿಲ್ಲ. ನಿಂತಿದ್ದರೆ ಸಾಯುತ್ತಾ ಇರಲಿಲ್ಲ.ವಿಕ್ಟೋರಿಯ ಆಸ್ಪತ್ರೆಗೆ ಕರದುಕೊಂಡು ಹೋಗಿದ್ದಾರೆ ಬಳಿಕ ಸತ್ತು ಹೋಗಿದ್ದಾನೆ” ಎಂದು ಹೇಳಿದ್ದು, ಈ ಹೇಳಿಕೆ ಈಗ ವಿವಾದದ ಸ್ವರೂಪ ಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ