ಅಲ್ಡೇಲ್‌ ರಾಷ್ಟ್ರಾಭಿಮಾನದ ಸಂಸ್ಥೆಯಾಗಿ ಬೆಳೆಯುತ್ತಿದೆ: ಆಲ್ಬರ್ಟ್‌ ಡಿ’ಸೋಜಾ


Team Udayavani, Apr 12, 2022, 11:27 AM IST

ಅಲ್ಡೇಲ್‌ ರಾಷ್ಟ್ರಾಭಿಮಾನದ ಸಂಸ್ಥೆಯಾಗಿ ಬೆಳೆಯುತ್ತಿದೆ: ಆಲ್ಬರ್ಟ್‌ ಡಿ’ಸೋಜಾ

ಮುಂಬಯಿ: ಉಪನಗರ ಪಾಲ‍್ಘರ್‌ ಜಿಲ್ಲೆಯಲ್ಲಿ ಉಡುಪಿ ಮೂಲದ ಆಲ್ಬರ್ಟ್‌ ಡಬ್ಲ್ಯು. ಡಿ’ಸೋಜಾ (ಪಾಂಗಳ) ಆಡಳಿತ್ವದ ಅಲ್ಡೇಲ್‌ ಎಜುಕೇಶನ್‌ ಟ್ರಸ್ಟ್‌ನ ಸಮೂಹದ ಸೈಂಟ್‌ ಜಾನ್‌ ಟೆಕ್ನಿಕಲ್‌ ಆ್ಯಂಡ್‌ ಎಜುಕೇಶನಲ್‌ ವಿದ್ಯಾಲಯದ ದಶ ವಾರ್ಷಿಕ ಘಟಿಕೋತ್ಸವವು ಎ. 9ರಂದು ಕಾಲೇಜು ಕ್ಯಾಂಪಸ್‌ನ ಸೈಂಟ್‌ ಜಾನ್‌ ಮಹಾವಿದ್ಯಾಲಯದ ಸಭಾಗೃಹದಲ್ಲಿ ಜರಗಿತು.

ಎರಡು ಭಾಗಗಳಲ್ಲಿ ನಡೆಸಲ್ಪಟ್ಟ ಸಮಾರಂಭದಲ್ಲಿ ಪೂರ್ವಾಹ್ನ ಸೈಂಟ್‌ ಜಾನ್‌ ಇನ್‌ಸ್ಟಿಟ್ಯೂಟ್‌ ಆಫ್‌  ಹ್ಯೂಮ್ಯಾನಿಟಿಸ್‌ ಆ್ಯಂಡ್‌ ಸೈನ್ಸ್‌  ಹಾಗೂ ಸೈಂಟ್‌ ಜಾನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ ಆ್ಯಂಡ್‌ ರಿಸರ್ಚ್‌ ವಿಭಾಗದ ಘಟಿಕೋತ್ಸವ ನೆರವೇರಿಸಲಾಗಿದ್ದು, ಮೌಂಟ್‌ ಕಾರ್ಮೆಲ್‌ ಚರ್ಚ್‌ ಬಾಂದ್ರಾ ಇದರ ಧರ್ಮಗುರು ರೆ| ಫಾ| ರೂಬೆನ್‌ ಟೆಲ್ಲಿಸ್‌ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಪದವಿ ಪ್ರದಾನಗೈದು ಶುಭ ಹಾರೈಸಿದರು. ಅಪರಾಹ್ನ ಸೈಂಟ್‌ ಜಾನ್‌ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಆ್ಯಂಡ್‌ ಮ್ಯಾನೇಜ್‌ಮೆಂಟ್‌ ಮತ್ತು ಸೈಂಟ್‌ ಜಾನ್‌ ಕಾಲೇಜ್‌ ಆಫ್‌ ಫಾರ್ಮಸಿ ಆ್ಯಂಡ್‌ ರಿಸರ್ಚ್‌ (ಎಸ್‌ಜೆಸಿಎಫ್‌ಆರ್‌) ವಿದ್ಯಾರ್ಥಿಗಳ ವಾರ್ಷಿಕ ಪದವಿ ಪ್ರದಾನ ಸಮಾರಂಭದಲ್ಲಿ ವಿಶ್ವವಿದ್ಯಾನಿಲಯ ಮುಂಬಯಿ ಇದರ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಮುಖ್ಯಸ್ಥೆ ಡಾ| ಅನುರಾಧಾ ಮಜುಂದಾರ್‌ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಶುಭ ಹಾರೈಸಿದರು.

ಅಲ್ಡೇಲ್‌ ಎಜುಕೇಶನ್‌ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಆಲ್ಬರ್ಟ್‌ ಡಬ್ಲ್ಯು. ಡಿ’ಸೋಜಾ ಮಾತನಾಡಿ, ಯಾವುದೇ ಉನ್ನತ ಶಿಕ್ಷಣ ಸಂಸ್ಥೆಗಳ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಪದವಿ ಪಡೆಯುವುದು ಗೌರವದ ಸಂಕೇತವಾಗಿದೆ. ಪಾಲಕರು, ಶಿಕ್ಷಕರು ಮತ್ತು ಗೆಳೆಯರೊಂದಿಗೆ ವಿಶೇಷ ಅತಿಥಿಗಳ ಒಗ್ಗೂ ಡುವಿಕೆಯೊಂದಿಗೆ ಈ ಜೀವನ ಸಾಧನೆಯನ್ನು ವಿಶೇಷ ಕಾರ್ಯಕ್ರಮದೊಂದಿಗೆ ಆಚರಿಸುವುದು ಸ್ಮರಣೀಯವನ್ನಾಗಿಸುತ್ತದೆ. ಇಂಡಸ್ಟ್ರೀ ಇನ್‌ಪುಟ್‌ಗಳನ್ನು ಲಿಂಕ್‌ ಮಾಡಲು ಮತ್ತು ಜೀವಮಾನದ ಕಲಿಕೆಯ ಫಲಿತಾಂಶಗಳನ್ನು ಸೃಷ್ಟಿಸಲು ಈ ಅಗತ್ಯವನ್ನು ಅರ್ಥಮಾಡಿಕೊಂಡು, ಸೈಂಟ್‌ ಜಾನ್‌ ಟೆಕ್ನಿಕಲ್‌ ಕ್ಯಾಂಪಸ್‌ 2012ರಿಂದ ವಾರ್ಷಿಕ ಪದವಿ ದಿನವನ್ನು ಆಯೋಜಿಸುತ್ತಿದೆ. ಎರಡು ವರ್ಷಗಳ  ಲಾಕ್‌ಡೌನ್‌ ಜೀವನದ ಪ್ರತಿಯೊಂದು ಕ್ಷೇತ್ರದ ಮೇಲೆ ಪರಿಣಾಮ ಬೀರಿದ್ದು, ಶೇ. 90ರಷ್ಟು ಕಾರ್ಯವು ಆನ್‌ಲೈನ್‌ನಲ್ಲಿ ನಡೆಯುವುದರೊಂದಿಗೆ ಶಿಕ್ಷಣ ಕ್ಷೇತ್ರ ಬಿಕ್ಕಟ್ಟನ್ನು ಅನುಭವಿಸಿತು. 2020-2021ರ

ಪದವೀಧರ ಬ್ಯಾಚ್‌ಗಳು ಅಮೂಲ್ಯವಾದ ಪೀರ್‌ ಕಲಿಕೆ ಮತ್ತು ಮುಖಾಮುಖೀ ಸಂವಹನವನ್ನು ಕಳೆದುಕೊಂಡಿದ್ದಾರೆ. ಅದನ್ನು ಎಂದಿಗೂ ಬದಲಾಯಿ ಸಲು ಸಾಧ್ಯವಿಲ್ಲ. ಆದ್ದರಿಂದ 2021ರಲ್ಲಿ 1,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅದರ ಆತಿಥೇಯ ಸಂಸ್ಥೆಗಳಿಂದ ಪದವಿ ಪಡೆದಿದ್ದಾರೆ ಎಂಬುವುದು ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.

ಅಲ್ಡೇಲ್‌ ಎಜುಕೇಶನ್‌ ಟ್ರಸ್ಟ್‌ನ  ಕಾರ್ಯದರ್ಶಿ ಎಲ್ವಿನಾ ಎ. ಡಿ’ಸೋಜಾ, ಕೋಶಾಧಿಕಾರಿ ಎಲೈನ್‌ ಆರ್‌. ಬುಥೆಲ್ಲೋ, ಸದಸ್ಯ ಆಲ್ಡಿ’ಜ್‌ ಎ. ಡಿ’ಸೋಜಾ, ಕ್ಯಾಂಪಸ್‌ ನಿರ್ದೇಶಕ ಡಾ| ಡಿ. ಹೆನ್ರಿ ಬಾಬು, ಉಪ ಕ್ಯಾಂಪಸ್‌ ನಿರ್ದೇಶಕಿ ಮತ್ತು ಎಸ್‌ಜೆಸಿಎಫ್‌ಆರ್‌ ಪ್ರಾಂಶುಪಾಲೆ ಸವಿತಾ ತೌರೊ, ಎಸ್‌ಜೆಸಿಇಎಂ ಪ್ರಾಂಶುಪಾಲ ಡಾ| ಜಿ.ವಿ ಮುಳಗುಂದ, ಸೈಂಟ್‌ ಜಾನ್‌ ಇನ್‌ಸ್ಟಿಟ್ಯೂಟ್‌ ಆಫ್‌  ಹ್ಯೂಮ್ಯಾನಿಟಿಸ್‌ ಆ್ಯಂಡ್‌ ಸೈನ್ಸ್‌ ಮುಖ್ಯಸ್ಥ ಡಾ| ಬೃಜಬಂಧು ದಾಸ್‌, ಎಚ್‌ಆರ್‌ಡಿ ಮುಖ್ಯಸ್ಥ ವಿದ್ಯಾಧರ ಪಾಟೀಲ್‌ ಮತ್ತು ಎಚ್‌ಆರ್‌ಡಿ ವ್ಯವಸ್ಥಾಪಕ ಸುಧೀರ್‌ ಬಾಬು ಉಪಸ್ಥಿತರಿದ್ದರು.

ಸೈಂಟ್‌ ಜಾನ್‌ ಇಂಟರ್‌ನ್ಯಾಶನಲ್‌ ಸಿಬಿಎಸ್‌ಇ ಶಾಲಾ ವಿದ್ಯಾರ್ಥಿಗಳ ಸ್ಕೂಲ್‌ ಬ್ರ್ಯಾಂಡ್ ನ‌ ನಿನಾದ ದೊಂದಿಗೆ ಪದವೀಧರ ವಿದ್ಯಾರ್ಥಿಗಳು ಮತ್ತು ಗಣ್ಯರನ್ನು ಸಭಾಂಗಣಕ್ಕೆ ಕರೆತರಲಾಯಿತು. ಬಳಿಕ ಜಾಗತಿಕ ಶಾಂತಿ ನೆಮ್ಮದಿಯ ಬಾಳಿಗಾಗಿ ಸಾರ್ವತ್ರಿಕವಾಗಿ ಪ್ರಾರ್ಥಿಸಲಾಯಿತು. ಸರಸ್ವತಿ ವಂದನೆಯೊಂದಿಗೆ ದೀಪ ಬೆಳಗಿಸಿ ಸಮಾರಂಭವನ್ನು ಉದ್ಘಾಟಿಸಲಾಯಿತು. ಆಲ್ಬರ್ಟ್‌ ಡಬ್ಲ್ಯು. ಡಿ’ಸೋಜಾ ಸ್ವಾಗತಿಸಿ, ಪ್ರಸ್ತಾವನೆಗೈದರು.

ರಾಜ್ಯಪಾಲ, ಗೌರವಾನ್ವಿತ ಕುಲಪತಿ ಭಗತ್‌ ಸಿಂಗ್‌ ಕೋಶ್ಯಾರಿ ಮತ್ತು ಮುಂಬಯಿ ವಿವಿ ಉಪ ಕುಲಪತಿ ಪ್ರೊ| ಸುಹಾಸ್‌ ಪಡ್ನೇಕರ್‌ ಅವರ ವೀಡಿಯೋ ಭಾಷಣವನ್ನು ಪ್ರದರ್ಶಿಸಲಾಯಿತು. ಎಸ್‌ಜೆಸಿ ಹ್ಯೂಮ್ಯಾನಿಟಿಸ್‌ ಆ್ಯಂಡ್‌ ಸೈನ್ಸ್‌ನ 233 ವಿದ್ಯಾರ್ಥಿಗಳು ಮತ್ತು ಎಸ್‌ಜೆಸಿಐಎಂಆರ್‌ನ 41 ವಿದ್ಯಾರ್ಥಿಗಳು ಹಾಗೂ ಎಸ್‌ಜೆಸಿಇಎಫ್‌ನ 584 ವಿದ್ಯಾರ್ಥಿಗಳು ಪದವಿ ಪ್ರಮಾಣಪತ್ರ ಸ್ವೀಕರಿಸಿದರು. ಆಯಾಯ ಕಾಲೇಜುಗಳ ಪ್ರಾಂಶುಪಾಲರು ವಂದಿಸಿದರು. ರಾಷ್ಟ್ರಗೀತೆಯೊಂದಿಗೆ ಘಟಿಕೋತ್ಸವ ಸಮಾಪನಗೊಂಡಿತು. ಕೊನೆಯಲ್ಲಿ ವಿಭಾಗವಾರು ಫೋಟೋ ಸೆಷನ್‌ ನಡೆಸಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ, ಸ್ಮರಣಿಗಳನ್ನಿತ್ತು ಗೌರವಿಸಲಾಯಿತು.

ಬಿಎ, ಬಿಕಾಂ, ಬಿಎಎಫ್‌, ಬಿಬಿಐ, ಬಿಎಫ್‌ಎಂ, ಬಿಎಂಎಸ್‌, ಬಿಎಸ್‌ಸಿ, ಬಿಎಸ್‌ಸಿ-ಸಿಎಸ್‌, ಬಿಎಸ್‌ಸಿ-ಐಟಿ, ಬಿಎಸ್‌ಸಿ ಹೊಟೇಲ್‌ ಮ್ಯಾನೇಜ್‌ಮೆಂಟ್‌, ಮ್ಯಾನೇಜ್‌ಮೆಂಟ್‌ ಸ್ಟಡೀಸ್‌, ಎಂಜಿನಿಯ ರಿಂಗ್‌ ಮತ್ತು ಫಾರ್ಮಸಿಯಲ್ಲಿ ಉನ್ನತ ಶಿಕ್ಷಣದಿಂದ ಹಿಡಿದು ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಸಸ್ಯಶಾಸ್ತ್ರ, ಹಾಸ್ಪಿಟಾಲಿಟಿ ಸ್ಟಡೀಸ್‌ ಮತ್ತು ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಸೈಕಲಾಜಿಯಂತಹ ಪದವಿ ವಿಭಾಗ ಹೊಂದಿದ್ದೇವೆ. ಎ ಸ್ಟೇಟ್‌ ಬೋರ್ಡ್‌ ಜೂನಿಯರ್‌ ಕಾಲೇಜ್‌,  ಸ್ಟೇಟ್‌ ಬೋರ್ಡ್‌ ಸ್ಕೂಲ್‌ ಮತ್ತು  ಸಿಬಿಎಸ್‌ಸಿ ಸ್ಕೂಲ್‌, ಸೈಂಟ್‌ ಜಾನ್‌ ಪಾಲ್ಘರ್‌ ಕ್ಯಾಂಪಸ್‌ ಮುಂದಿನ ಪೀಳಿಗೆಯನ್ನು ಸಶಕ್ತಗೊಳಿಸಲು ಸನ್ನದ್ಧ ವಾಗಿದೆ. -ಆಲ್ಬರ್ಟ್‌ ಡಬ್ಲ್ಯು. ಡಿ’ಸೋಜಾ ಕಾರ್ಯಾಧ್ಯಕ್ಷರು, ಅಲ್ಡೇಲ್‌ ಎಜುಕೇಶನ್‌ ಟ್ರಸ್ಟ್‌ ಸಮೂಹ ಸಂಸ್ಥೆ

 

-ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.