ಕಮಿಷನ್ ಪಡೆಯುವ ಮೂಲಕ ಬೊಮ್ಮಾಯಿ ಸರ್ಕಾರ ಹೊಸ ಮೈಲಿಗಲ್ಲು ಸಾಧಿಸಿದೆ: ರಣದೀಪ್ ಸುರ್ಜೇವಾಲ
Team Udayavani, Apr 12, 2022, 1:23 PM IST
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ 40% ಕಮಿಷನ್ ಪಡೆಯುವ ಮೂಲಕ ಭ್ರಷ್ಟಾಚಾರದಲ್ಲಿ ಹೊಸ ಮೈಲುಗಲ್ಲು ಸಾಧಿಸಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಮು ಗಲಭೆಗಳ ಮೂಲಕ ಬೊಮ್ಮಾಯಿ ಅವರು ಅಡಗಿ ಕುಳಿತು ಕೊಳ್ಳುತ್ತಿರುವುದು ಯಾಕೆ? ಬೊಮ್ಮಾಯಿ ಅವರು ಹಾಗೂ ಬಿಜೆಪಿಯ ಗೂಂಡಾಗಳು ಅಲ್ಪಸಂಖ್ಯಾತರ ವಿರುದ್ಧ ನಿತ್ಯ ದಾಳಿ ಮಾಡುತ್ತಿದ್ದು, ಮುಖ್ಯಮಂತ್ರಿಯವರು, ಬಿಜೆಪಿ ಹಾಗೂ ಬಜರಂಗದಳದವರು, ಪಿಎಫ್ ಐ, ಸಿಎಫ್ ಐ ಹಾಗೂ ಎಸ್ ಡಿಪಿಐ ಜತೆ ಸೇರಿಕೊಂಡು ರಾಜ್ಯದಲ್ಲಿ ದಿನನಿತ್ಯ ಬಿಗುವಿನ ವಾತಾವರಣ ಸೃಷ್ಟಿಸುತ್ತಿದೆ. ಆದರೆ ಬೊಮ್ಮಾಯಿ ತಮ್ಮ ಸರ್ಕಾರದ ಮೇಲಿನ ಭ್ರಷ್ಟಾಚಾರದ ಆರೋಪದ ಬಗ್ಗೆ ಸ್ಪಷ್ಟ ಉತ್ತರ ನೀಡಿಲ್ಲ ಎಂದು ಆರೋಪಿಸಿದರು.
ಇದನ್ನೂ ಓದಿ:ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಉಡುಪಿಯಲ್ಲಿ ಆತ್ಮಹತ್ಯೆ!
ಈ ಸರ್ಕಾರದಲ್ಲಿ ಬಹುತೇಕ ಸಚಿವರು ಕಳಂಕಿತರು. ಕೆಲವರು ಜಾಮೀನಿನ ಮೇಲೆ ಹೊರಗಿದ್ದರೆ, ಮತ್ತೆ ಕೆಲವರು ಜಾಮೀನಿನ ನಿರೀಕ್ಷಣೆಯಲ್ಲಿದ್ದಾರೆ. ಅವರನ್ನು ವಜಾಗೊಳಿಸಬೇಕು. ಒಂದು ವೇಳೆ ವಜಾಗೊಳಿಸದಿದ್ದರೆ ಬೊಮ್ಮಾಯಿ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ