WTO ಒಪ್ಪಿದ್ರೆ ಭಾರತ ಜಗತ್ತಿಗೆ ಆಹಾರ ದಾಸ್ತಾನು ಸರಬರಾಜು ಮಾಡಲು ಸಿದ್ಧ:ಪ್ರಧಾನಿ ಮೋದಿ ಅಭಯ
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಪರಿಣಾಮ ಜಗತ್ತಿನ ವಿವಿಧ ದೇಶಗಳಲ್ಲಿ ಆಹಾರ ದಾಸ್ತಾನು ಕೊರತೆ ಕಾಣಿಸಿಕೊಂಡಿದೆ.
Team Udayavani, Apr 12, 2022, 4:49 PM IST
ಗಾಂಧಿನಗರ್(ಗುಜರಾತ್): ಜಾಗತಿಕ ಆಹಾರ ಕೊರತೆಯ ಸಮಸ್ಯೆ ಕುರಿತಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಜತೆ ಚರ್ಚಿಸಿರುವುದಾಗಿ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ ಅನುಮತಿ ನೀಡಿದರೆ ವಿಶ್ವಕ್ಕೆ ಆಹಾರ ದಾಸ್ತಾನು ಸರಬರಾಜು ಮಾಡಲು ಭಾರತ ಸಿದ್ಧವಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ:ಗುಜರಾತ್: ಹಿಮ್ಮತ್ ನಗರದಲ್ಲಿ ಮತ್ತೆ ಕೋಮು ಘರ್ಷಣೆ, ಪೆಟ್ರೋಲ್ ಬಾಂಬ್ ದಾಳಿ
ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ ಅನುಮತಿ ನೀಡಿದರೆ ಭಾರತ ವಿಶ್ವಕ್ಕೆ ಆಹಾರ ಸರಬರಾಜು ಮಾಡಲು ಸಿದ್ಧ ಎಂದು ಮಂಗಳವಾರ (ಏ.12) ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಸ್ಟೆಲ್ ಮತ್ತು ಶ್ರೀ ಅನ್ನಪೂರ್ಣ ಧಾಮ್ ಶಿಕ್ಷಣ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ವೇಳೆ ಈ ವಿಚಾರ ಪ್ರಸ್ತಾಪಿಸಿರುವುದಾಗಿ ವರದಿ ತಿಳಿಸಿದೆ.
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಪರಿಣಾಮ ಜಗತ್ತಿನ ವಿವಿಧ ದೇಶಗಳಲ್ಲಿ ಆಹಾರ ದಾಸ್ತಾನು ಕೊರತೆ ಕಾಣಿಸಿಕೊಂಡಿದೆ. ಇದೀಗ ಜಗತ್ತು ಹೊಸ ಸಮಸ್ಯೆಯನ್ನು ಎದುರಿಸುವಂತಾಗಿದೆ. ಜಾಗತಿಕವಾಗಿ ಆಹಾರ ದಾಸ್ತಾನು ಖಾಲಿಯಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕೂಡಾ ಈ ವಿಚಾರದ ಬಗ್ಗೆ ಪ್ರಸ್ತಾಪಿಸಿದ್ದರು. ಅದಕ್ಕೆ ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿ) ಅನುಮತಿ ನೀಡಿದರೆ ಭಾರತ ನಾಳೆಯಿಂದಲೇ ಆಹಾರ ದಾಸ್ತಾನು ಸರಬರಾಜು ಮಾಡಲು ಸಿದ್ಧವಿರುವುದಾಗಿ ಸಲಹೆ ನೀಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಭಾರತವು ಈಗಾಗಲೇ ದೇಶದ ಜನರಿಗೆ ಸಾಕಾಗುವಷ್ಟು ಆಹಾರ ದಾಸ್ತಾನು ಹೊಂದಿದೆ. ಆದರೆ ನಮ್ಮ ರೈತರು ಜಗತ್ತಿಗೆ ಆಹಾರ ನೀಡುವ ವ್ಯವಸ್ಥೆಯನ್ನು ಮಾಡಿದ್ದಾರೆ. ಆ ನಿಟ್ಟಿನಲ್ಲಿ ನಾವು ಜಗತ್ತಿನ ಕಾನೂನು ಪ್ರಕಾರ ಕಾರ್ಯನಿರ್ವಹಿಸಬೇಕಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ