ಲೂಪ್‌ ರಸ್ತೆ ಪೂರ್ಣಗೊಂಡ ಬಳಿಕ ಕ್ಲಾಕ್‌ಟವರ್‌ ಉದ್ಘಾಟನೆ

ಸ್ಮಾರ್ಟ್‌ಸಿಟಿಯಿಂದ ಮೂಲ ಸೌಕರ್ಯಗಳ ಅಭಿವೃದ್ಧಿ

Team Udayavani, Apr 13, 2022, 10:36 AM IST

tower

ಹಂಪನಕಟ್ಟೆ: ಸ್ಮಾರ್ಟ್‌ ಸಿಟಿಯಿಂದ ದುಬಾರಿ ವೆಚ್ಚದಲ್ಲಿ ನಿರ್ಮಾಣಗೊಂಡ ಕ್ಲಾಕ್‌ ಟವರ್‌ ಕಾಮಗಾರಿ ಪೂರ್ಣಗೊಂಡು ವರ್ಷ ಕಳೆದರೂ ಇನ್ನೂ ಉದ್ಘಾಟನೆಗೊಂಡಿಲ್ಲ. ಕ್ಲಾಕ್‌ಟವರ್‌ ಪ್ರದೇಶದ ಸುತ್ತ ಲೂಪ್‌ ರಸ್ತೆಯಾಗಿ ಬದಲಾಗುತ್ತಿದ್ದು, ಈ ಕಾಮಗಾರಿ ಮುಗಿದ ಬಳಿಕವಷ್ಟೇ ಅಧಿಕೃತ ಉದ್ಘಾಟನೆ ನಡೆಯಲಿದೆ.

ಕ್ಲಾಕ್‌ಟವರ್‌-ಎ.ಬಿ. ಶೆಟ್ಟಿ ವೃತ್ತ, ಹ್ಯಾಮಿಲ್ಟನ್‌ ವೃತ್ತ, ರಾವ್‌ ಆ್ಯಂಡ್‌ ರಾವ್‌ ವೃತ್ತದಿಂದ ಮತ್ತೆ ಕ್ಲಾಕ್‌ಟವರ್‌ಗೆ ಸುತ್ತಲೂ ಏಕಮುಖ ಸಂಚಾರ ಕಲ್ಪಿಸಲಾಗಿದ್ದು, ಈ ರಸ್ತೆಯಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಪುರಭವನ ಬಳಿ ಅಂಡರ್‌ಪಾಸ್‌ ಕಾಮಗಾರಿಯೂ ಕೊನೆಯ ಹಂತದಲ್ಲಿದೆ. ಸ್ಟೇಟ್‌ಬ್ಯಾಂಕ್‌, ಹಂಪನಕಟ್ಟೆ ಸುತ್ತಲಿನ ಪರಿಸರಲ್ಲಿ ಫುಟ್‌ಪಾತ್‌ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಈ ಎಲ್ಲ ಅಭಿವೃದ್ಧಿ ಕೆಲಸಗಳು ಪೂರ್ಣಗೊಳ್ಳಲು ಕೆಲವು ವಾರಗಳು ಬೇಕು. ಬಳಿಕ ಈ ಎಲ್ಲ ಅಭಿವೃದ್ಧಿ ಕಾಮಗಾರಿಗಳು ಒಟ್ಟುಗೂಡಿಸಿ ಉದ್ಘಾಟಿಸಲು ತೀರ್ಮಾನಿಸಲಾಗಿದೆ.

ಸದ್ಯ ಕ್ಲಾಕ್‌ಟವರ್‌ನ ನಾಲ್ಕೂ ದಿಕ್ಕಿಗೂ ಗಡಿಯಾರವನ್ನು ಅಳವಡಿಸಲಾಗಿದೆ. ಗೋಪುರದ ಸುತ್ತಲೂ ಕಟ್ಟೆ ನಿರ್ಮಾಣ ಮಾಡಲಾಗಿದ್ದು, ಗಾರ್ಡನ್‌ ವ್ಯವಸ್ಥೆ ಇದೆ. ರಾತ್ರಿ ವೇಳೆ ಆಕರ್ಷಣೀಯವಾಗಿ ಕಾಣಲೆಂದು ಗೋಪುರದಲ್ಲಿ ಲೈಟ್‌ ವ್ಯವಸ್ಥೆ ಮಾಡಲಾಗಿದೆ. ನಗರದಲ್ಲಿ ಸಮಯ ಸೂಚಕವಾಗಿ ಹಲವು ವರ್ಷಗಳ ಹಿಂದೆ ಹಂಪನಕಟ್ಟೆಯಲ್ಲಿ ಕ್ಲಾಕ್‌ ಟವರ್‌ ನಿರ್ಮಾಣ ಮಾಡಲಾಗಿತ್ತು.

ನಗರದಲ್ಲಿ ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಉಂಟಾಗಬಾರದು ಎಂಬ ಉದ್ದೇಶದಿಂದ ಕೆಲವು ವರ್ಷಗಳ ಹಿಂದೆ ಟವರ್‌ ಅನ್ನು ಕೆಡಹಲಾಗಿತ್ತು. ಬಳಿಕ ಇದೇ ಜಾಗದಲ್ಲಿ ಹಿಂದಿನ ಕ್ಲಾಕ್‌ ಟವರ್‌ನ ನೆನಪಿಗಾಗಿ ಹೊಸದಾಗಿ ನಿರ್ಮಿಸಲು ಪಾಲಿಕೆ ಮೇಯರ್‌ ಆಗಿದ್ದ ಕವಿತಾ ಸನಿಲ್‌ ನಿರ್ಧರಿಸಿ 2018ರಲ್ಲಿ ಕಾಮಗಾರಿ ಆರಂಭಿಸಲಾಗಿತ್ತು. ಬಳಿಕ ಈ ಯೋಜನೆಯನ್ನು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಕಾಮಗಾರಿ ಮುಂದುವರಿಸಲಾಗಿತ್ತು. ಕಳೆದ ಒಂದೂವರೆ ವರ್ಷಗಳ ಹಿಂದೆಯೇ ಕಾಮಗಾರಿ ಪೂರ್ಣಗೊಂಡಿದ್ದರೂ, ಕ್ಲಾಕ್‌ಟವರ್‌ಗೆ ಇನ್ನೂ ಉದ್ಘಾಟನೆ ಭಾಗ್ಯ ದೊರಕಿಲ್ಲ.

ಗೋಪುರಕ್ಕೆ ಇಟಲಿ ಮೂಲದ ಯಂತ್ರ

ಸುಮಾರು 88 ಅಡಿ ಸುತ್ತಳತೆ ಹೊಂದಿರುವ ಈ ಕ್ಲಾಕ್‌ಟವರ್‌ನಲ್ಲಿ ಬಳಕೆಯಾಗುವ ಗಡಿಯಾರಕ್ಕೆ ಯಂತ್ರೋಪಕರಣಗಳು ಇಟಲಿ ದೇಶದಿಂದ ಆಮದು ಮಾಡಿಕೊಳ್ಳಲಾಗಿದೆ. 8 ಬಗೆಯ ಬೆಲ್‌ ಮಾಡುವ ಸಾಮರ್ಥ್ಯ ಇರುವ ಮೈಕ್ರೋ ಪ್ರೊಸೆಸರ್‌ ಕೂಡ ಇದರಲ್ಲಿದೆ. ಈ ಕ್ಲಾಕ್‌ಗೆ ಅಕ್ರೇಲಿಕ್‌ ಶೀಟ್‌, ಸ್ಟೈನ್‌ಲೆಸ್‌ ಸ್ಟೀಲ್‌, ಎಸಿಪಿ ಶೀಟ್‌ಗಳನ್ನು ಬಳಸಿಕೊಂಡು ಸಿದ್ಧಪಡಿಸಿಕೊಂಡಿದ್ದು, ಈಗಾಗಲೇ ಗೋಪುರದ ನಾಲ್ಕು ಬದಿಗಳಿಗೆ ನಾಲ್ಕು ಕ್ಲಾಕ್‌ನ ಮಾದರಿಗಳಿಗೆ ನಾಲ್ಕು ಯಂತ್ರಗಳನ್ನು ಅಳವಡಿಸಲಾಗಿದೆ.

ಅಭಿವೃದ್ದಿ ಕಾಮಗಾರಿ

ಹಂಪನಕಟ್ಟೆ ಪರಿಸರದಲ್ಲಿ ಸದ್ಯ ವಿವಿಧ ಅಭಿವೃದಿ ಕಾಮಗಾರಿಗಳು ನಡೆಯುತ್ತಿದೆ. ಇಲ್ಲಿನ ಹಂಪನಕಟ್ಟೆ-ಎ.ಬಿ. ಶೆಟ್ಟಿ ವೃತ್ತ, ಹ್ಯಾಮಿಲ್ಟನ್‌ ವೃತ್ತ-ರಾವ್‌ ಆ್ಯಂಡ್‌ ರಾವ್‌ ವೃತ್ತ ಸಹಿತ ಮತ್ತೆ ಹಂಪನಕಟ್ಟೆವರೆಗೆ ಲೂಪ್‌ ರಸ್ತೆಯಾಗಿ ಅಭಿವೃದ್ಧಿಯಾಗುತ್ತಿದೆ. ಮತ್ತೊಂದೆಡೆ ಟೌನ್‌ಹಾಲ್‌ ಬಳಿ ಅಂಡರ್‌ಪಾಸ್‌ ಕಾಮಗಾರಿ ನಡೆಯುತ್ತಿದೆ. ಇಲ್ಲಿನ ಕ್ಲಾಕ್‌ಟವರ್‌ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಲೂಪ್‌ ರಸ್ತೆ ಪೂರ್ಣಗೊಂಡ ಬಳಿಕ ಕ್ಲಾಕ್‌ಟವರ್‌ ಉದ್ಘಾಟನೆಗೊಳಿಸಲಾಗುವುದು.  ಡಿ. ವೇದವ್ಯಾಸ ಕಾಮತ್‌, ಶಾಸಕರು

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.