ಉಪವಿಭಾಗ ಬೈಲಹೊಂಗಲ ಜಿಲ್ಲಾ ಕೇಂದ್ರವಾಗಲಿ

ಇದನ್ನೆ ಜಿಲ್ಲಾ ಕೇಂದ್ರವನ್ನಾಗಿ ಮಾಡಿದರೆ ತುಂಬಾ ಅನುಕೂಲವಾಗುತ್ತದೆ.

Team Udayavani, Apr 13, 2022, 5:45 PM IST

ಉಪವಿಭಾಗ ಬೈಲಹೊಂಗಲ ಜಿಲ್ಲಾ ಕೇಂದ್ರವಾಗಲಿ

ಬೈಲಹೊಂಗಲ: ಬ್ರಿಟಿಷರ ಕಾಲದಿಂದಲೂ ಕಂದಾಯ ಉಪವಿಭಾಗವಾಗಿರುವ ಬೈಲಹೊಂಗಲವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂದು ಒತ್ತಾಯಿಸಿ, ಬೈಲಹೊಂಗಲ ಜಿಲ್ಲಾ ಹೋರಾಟ ಸಮಿತಿ ನೇತೃತ್ವದಲ್ಲಿ ಮೆರವಣಿಗೆ ಮೂಲಕ ತೆರಳಿ ಉಪವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಶಾಸಕ ಮಹಾಂತೇಶ ಕೌಜಲಗಿ, ಬೈಲಹೊಂಗಲ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಶಿವರಂಜನ ಬೋಳನ್ನವರ ಮಾತನಾಡಿ, ಬೆಳಗಾವಿ ಜಿಲ್ಲೆಯನ್ನು ಆಡಳಿತತ್ಮಾಕ ದೃಷ್ಟಿಯಿಂದ ವಿಭಜಿಸುವುದಾದರೆ ಉಪವಿಭಾಗ ಕೇಂದ್ರವಾದ ಬೈಲಹೊಂಗಲನ್ನು ಜಿಲ್ಲಾ ಕೇಂದ್ರವ°ನಾಗಿ ಮಾಡಬೇಕು. ಜಿಲ್ಲಾ ಕೇಂದ್ರವಾಗಲು ಎಲ್ಲ ಅರ್ಹತೆ ಹಾಗೂ ಸಾಮಾಜಿಕ, ಐತಿಹಾಸಿಕ, ವಾಣಿಜ್ಯ, ಕೃಷಿ, ಕಾನೂನು ಇತ್ಯಾದಿಗಳಿಂದ ಕೇಂದ್ರಿಕೃತವಾಗಿದ್ದು, ದೇಶದ ಸ್ವಾತ್ರಂತ್ರ್ಯಕ್ಕೋಸ್ಕರ ಹೋರಾಡಿದ ಈ ಗಂಡುಮೆಟ್ಟಿನ ನಾಡಿನಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಇನ್ನೂ ಅನೇಕ ವೀರರು ಸ್ವಾತಂತ್ರ್ಯಕ್ಕಾಗಿ ಹೋರಾಡಿ ತಮ್ಮ ಪ್ರಾಣವನ್ನೇ ಬಲಿದಾನಗೈದಿದ್ದಾರೆ. ಏಷ್ಯಾದಲ್ಲಿಯೇ ಪ್ರಸಿದ್ಧವಾದ ಹತ್ತಿ ಮಾರುಕಟ್ಟೆಗಳಲ್ಲಿ ಬೆ„ಲಹೊಂಗಲ ಎಪಿಎಂಸಿ ರಾಜ್ಯದಲ್ಲಿಯೇ ಮೊದಲನೆಯದು. ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳು ಎಲ್ಲ ಸವಲತ್ತು ಹೊಂದಿವೆ.

ಈಗಾಗಲೇ ಬೈಲಹೊಂಗಲ, ಸವದತ್ತಿ, ರಾಮದುರ್ಗ, ಖಾನಾಪುರ, ಕಿತ್ತೂರ ತಾಲುಕುಗಳಿಂದ ಕೂಡಿದ ಕಂದಾಯ ಉಪವಿಭಾಗ ಕೇಂದ್ರವಾಗಿದ್ದು,ಇದನ್ನೆ ಜಿಲ್ಲಾ ಕೇಂದ್ರವನ್ನಾಗಿ ಮಾಡಿದರೆ ತುಂಬಾ ಅನುಕೂಲವಾಗುತ್ತದೆ. ಸರ್ಕಾರ ಕೂಡಲೇ ನಮ್ಮ ಮನವಿಗೆ ಸ್ಪಂದಿಸಿ ಬೈಲಹೊಂಗಲ ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಮಾನಗಳಲ್ಲಿ ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಹೊಸೂರ ಗಂಗಾಧರ ಸ್ವಾಮೀಜಿ, ಮುನವಳ್ಳಿ ಮುರುಘರಾಜೇಂದ್ರ ಸ್ವಾಮೀಜಿ, ನಯಾನಗರ ಅಭಿನವ ಸಿದ್ದಲಿಂಗ ಸ್ವಾಮೀಜಿ, ಮೂರುಸಾವಿರಮಠದ ಪ್ರಭುನೀಲಕಂಠ ಸ್ವಾಮೀಜಿ, ಬುಡ್ರಕಟ್ಟಿ ಮೃತ್ಯುಂಜಯ ಸ್ವಾಮೀಜಿ, ಆರಾದ್ರಿಮಠದ ಮಹಾಂತೇಶ ಶಾಸ್ತ್ರೀ ಸಾನ್ನಿಧ್ಯ ವಹಿಸಿ ಮಾತನಾಡಿ, ಸರ್ಕಾರ ಆಡಳಿತ್ಮಾಕ ದೃಷ್ಟಿಯಿಂದ ಅಖಂಡ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವದಾದರೆ ಉಪವಿಭಾಗ ಕೇಂದ್ರವಾದ ಬೆ„ಲಹೊಂಗಲವನ್ನೇ ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಡಾ.ಸಿ.ಎಸ್‌.ಸಾಧುನವರ, ಮಹಾಂತೇಶ ತುರಮರಿ, ಬಾಬಾಸಾಹೇಬ ಪಾಟೀಲ, ರೋಹಿಣಿ ಪಾಟೀಲ, ರುದ್ರಪ್ಪ ಹೊಸಮನಿ, ಬಾಬುಸಾಬ ಸಂಗೊಳ್ಳಿ, ಈಶ್ವರ ಉಳ್ಳೆಗಡ್ಡಿ, ಬಿ.ಎಂ. ಚಿಕ್ಕನಗೌಡ್ರ, ಜಗದೀಶ ಬೂದಿಹಾಳ, ನಾರಾಯಣ ನಲವಡೆ, ಆರ್‌.ಎ.ಪಾಟೀಲ, ಸಂತೋಷ ಭಾಂವಿ, ಅಶೋಕ ಬಾಳೇಕುಂದರಗಿ ಮಾತನಾಡಿದರು.

ಪುರಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ, ಅಮಿತ ಪಾಟೀಲ, ಶಂಕರ ಮಾಡಲಗಿ, ಪ್ರಮೋದಕುಮಾರ ವಕ್ಕುಂದಮಠ, ಬಿ.ಬಿ.ಗಣಾಚಾರಿ, ಡಾ.ಚಿದಂಬರ ಕುಲಕರ್ಣಿ, ಡಾ. ಶರಣಕುಮಾರ ಅಂಗಡಿ, ಡಾ.ಮಂಜುನಾಥ ಮುದುಕನಗೌಡರ, ಡಾ.ಅಶೋಕ ದೊಡವಾಡ, ಕಿರಣ ಸಾಧುನವರ, ಬೊಮ್ಮನಾಯ್ಕ ಪಾಟೀಲ, ಕಾರ್ತಿಕ ಪಾಟೀಲ, ಮಂಜುನಾಥ ಸೋಮನ್ನವರ, ಬುಡ್ಡೇಸಾಬ ಶಿರಸಂಗಿ ದಾವಲಬಾಯಿ ಕೊಂಡಗೊಳಿ, ಕುಮಾರ ದೇಶನೂರ, ಮಹಾಂತೇಶ ಮತ್ತಿಕೊಪ್ಪ, ಮಡಿವಾಳಪ್ಪ ಹೋಟಿ, ಮಹೇಶ ಹರಕುಣಿ, ಶ್ರೀಶೈಲ ತೊಟಗಿ, ಬಸವರಾಜ ಉಪ್ಪಾರ, ವಿರುಪಾಕ್ಷ ವಾಲಿ, ಸುಭಾಸ ತುರಮರಿ, ಸೋಮನಾಥ ಸೊಪ್ಪಿಮಠ, ಶಿವಾನಂದ ಬಡ್ಡಿಮನಿ, ಅಬ್ದುಲರೆಹಮಾನ ಹುಬ್ಬಳ್ಳಿ, ಬಾಬುಸಾಬ ಸುತಗಟ್ಟಿ, ಸಂಗಮೇಶ ಸವದತ್ತಿಮಠ, ಉಮಾ ಬುಲಾಕೆ, ಪಿ.ಬಿ.ಬಡಿಗೇರ, ಎಮ.ಆರ್‌. ಮೆಳವಂಕಿ, ಜ್ಞಾನೇಶ್ವರ ಬೊಂಗಾಳೆ, ಎಂ.ಎಂ. ಸೋಪಿನ, ಶಿವಾನಂದ ಇಂಚಲ, ಸಂತೋಷ ಕೊಳವಿ, ಮಹೇಶ ಕೋಟಗಿ, ಸುನೀಲ ಮರಕುಂಬಿ, ಮನೋಜ ಕೆಳಗೇರಿ ಸಾವಿರಾರು ಜನರು ಇದ್ದರು.

ಕಲಾಪದಿಂದ ದೂರ: ಬೈಲಹೊಂಗಲ ಜಿಲ್ಲಾ ಕೇಂದ್ರವನ್ನಾಗಿ ಮಾಡುವಂತೆ ಒತ್ತಾಯಿಸಿ ಕರೆ ನೀಡಿದ್ದ ಪ್ರತಿಭಟನೆಗೆ ವಕೀಲರ ಸಂಘ ತಮ್ಮ ಕಲಾಪಗಳಿಂದ ದೂರವುಳಿದು ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು. ಡಿವೈಎಸ್‌ಪಿ ಶಿವಾನಂದ ಕಟಗಿ ಹಾಗೂ ಸಿಬ್ಬಂದಿ ಬೀಗಿ ಪೊಲೀಸ್‌ ಬಂದೋಬಸ್ತ್ ಮಾಡಿದ್ದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.