ಡೆಂಗ್ಯೂ ಜ್ವರದ ಬಗ್ಗೆ ಇರಲಿ ಎಚ್ಚರಿಕೆ


Team Udayavani, Apr 14, 2022, 6:00 AM IST

ಡೆಂಗ್ಯೂ ಜ್ವರದ ಬಗ್ಗೆ ಇರಲಿ ಎಚ್ಚರಿಕೆ

ಬೇಸಗೆ ನಡುವೆಯೂ ರಾಜ್ಯದಲ್ಲಿ ಆಗಾಗ್ಗೆ ಮಳೆಯಾಗುತ್ತಿದ್ದು, ಇದು ಡೆಂಗ್ಯೂ ಜ್ವರಕ್ಕೆ ಆಹ್ವಾನ ಕೊಟ್ಟಂತಿದೆ. ಅದೂ ಅಲ್ಲದೆ ಬೆಂಗಳೂರು ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳಲ್ಲಿ 241 ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಂಡಿದ್ದು, ಇದು ಆತಂಕಕ್ಕೂ ಕಾರಣವಾಗಿದೆ.

ಕಳೆದ ಎರಡು ವರ್ಷಗಳ ಕಾಲ, ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಅಷ್ಟಕ್ಕಷ್ಟೇ ಎಂಬಂತಿದ್ದವು. ಇದಕ್ಕೆ ಕಾರಣ ಕೊರೊನಾ ಸೋಂಕು. ಕೊರೊನಾದ ಬಗ್ಗೆ ಜನ ಹೆಚ್ಚಿನ ಆಸ್ಥೆ ವಹಿಸಿದ್ದರಿಂದ ಮತ್ತು ಜ್ವರ ಬಂದರೂ ಅದು ಕೊರೊನಾ ಅಥವಾ ಡೆಂಗ್ಯೂ ಎಂಬ ಗೊಂದಲಗಳು ಇದ್ದಿದ್ದರಿಂದ ಅಷ್ಟೇನೂ ಕಾಣಿಸಿರಲಿಲ್ಲ. ಕೊರೊನಾ ಕಾಣಿಸಿಕೊಂಡ ಮೊದಲ ವರ್ಷವಂತೂ ಜನ ತುಸು ಹೆಚ್ಚಿನ ಆಸ್ಥೆಯನ್ನೇ ವಹಿಸಿಕೊಂಡಿದ್ದರು. ಜತೆಗೆ ಕೊರೊನಾ ನಿಯಂತ್ರಣಕ್ಕಾಗಿ ರೋಗ ನಿರೋಧಕ ಔಷಧಗಳನ್ನೂ ಹೆಚ್ಚಾಗಿಯೇ ತೆಗೆದುಕೊಂಡಿದ್ದರು. ಇದರಿಂದಾಗಿ ಡೆಂಗ್ಯೂ ಸೇರಿದಂತೆ ಕೆಲವು ಸಾಂಕ್ರಾಮಿಕ ರೋಗಗಳ ನಿಯಂತ್ರಣವಾಗಿತ್ತು.

ಆದರೆ ಈ ವರ್ಷ ಕೊರೊನಾ ಸೋಂಕಿನ ಭಯ ಒಂದಷ್ಟು ಕಡಿಮೆಯಾಗಿದೆ. ಅಲ್ಲದೆ ಕೊರೊನಾ ಸೋಂಕು ಪ್ರಮಾಣವೂ 100ರ ಒಳಗೇ ಇದೆ. ಹೀಗಾಗಿ ಯಾವುದೇ ಜ್ವರ ಕಾಣಿಸಿಕೊಂಡರೂ ಅದು ಕೊರೊನಾ ಎಂಬ ಭಯದಲ್ಲಿ ಪರೀಕ್ಷೆಗೆ ಹೋಗುತ್ತಿಲ್ಲ. ಇದನ್ನು ಬಿಟ್ಟು, ಬೇರೆ ರೀತಿಯ ಜ್ವರಗಳಿರಬಹುದೇ ಎಂಬ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇದರಿಂದಾಗಿಯೂ ಡೆಂಗ್ಯೂ ಪ್ರಕರಣಗಳಲ್ಲಿ ಹೆಚ್ಚಾಗಿರಬಹುದು.

ಏನೇ ಆಗಲಿ ಡೆಂಗ್ಯೂ ಜ್ವರದ ಬಗ್ಗೆ ಯಾವುದೇ ಕಾರಣಕ್ಕೂ ಉದಾಸೀನ ಸಲ್ಲದು. ಈಗ ಆಗಾಗ್ಗೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮನೆಯ ಸುತ್ತಮುತ್ತ ಇರುವ ಗುಂಡಿಗಳಲ್ಲಿ, ಮನೆ ಬಳಿ ಇರುವ ಪಾತ್ರೆಗಳಲ್ಲಿ ನೀರು ಸಂಗ್ರಹವಾಗುತ್ತದೆ. ಅದರಲ್ಲೂ ಮಹಡಿ

ಮನೆಗಳಾಗಿದ್ದರೆ, ಮೇಲೆ ಕೆಲವೊಂದು ಉಪಯೋಗಕ್ಕೆ ಬಾರದ ಮತ್ತು ನೀರು ತುಂಬುವಂಥ ವಸ್ತುಗಳನ್ನು ಇಡುವುದು ಮಾಮೂಲಿ. ಇಂಥವುಗಳಲ್ಲಿ ನೀರು ತುಂಬಿಕೊಂಡು ಡೆಂಗ್ಯೂಗೆ ಕಾರಣವಾಗುವ ಸೊಳ್ಳೆ ಉತ್ಪತ್ತಿಯಾಗುತ್ತವೆ. ಇಂಥ ವಸ್ತುಗಳ ಬಗ್ಗೆ ಎಚ್ಚರದಿಂದ ಇರುವುದು ಒಳಿತು. ಜತೆಗೆ ಆಗಾಗ್ಗೆ ಪರಿಶೀಲಿಸಿಕೊಂಡು, ನೀರು ತುಂಬಿರುವ ಪಾತ್ರೆಗಳನ್ನು ಖಾಲಿ ಮಾಡಬೇಕು.

ಅಲ್ಲದೆ ಡೆಂಗ್ಯೂನಂಥ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತಲಿನ ವಾತಾವರಣವನ್ನು ಸ್ವತ್ಛಗೊಳಿಸಬೇಕು. ಯಾವುದೇ ಜ್ವರವಿರಲಿ ಮೊದಲು ಕಡ್ಡಾಯವಾಗಿ ರಕ್ತ ಪರೀಕ್ಷೆ ಮಾಡಿಸಬೇಕು. ನೀರು ಸಂಗ್ರಹ ಸಾಮಗ್ರಿಗಳನ್ನು ಮುಚ್ಚಿಡಬೇಕು. ತೊಟ್ಟಿಯಂಥವುಗಳನ್ನು ವಾರಕ್ಕೊಮ್ಮೆ ತೊಳೆಯುವ

ಅಭ್ಯಾಸ ಮಾಡಿಕೊಳ್ಳಬೇಕು. ಟೈರ್‌, ಎಳನೀರಿನ ಚಿಪ್ಪು, ಡಬ್ಬ, ಪ್ಲಾಸ್ಟಿಕ್‌ ಕವರ್‌ಗಳನ್ನು ವಿಲೇವಾರಿ ಮಾಡಿ ಸೊಳ್ಳೆಗೆ ಆಶ್ರಯವಾಗುವುದನ್ನು ತಪ್ಪಿಸಬೇಕು.

ಡೆಂಗ್ಯೂನಿಂದ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಅಪಾಯ ಹೆಚ್ಚು. ಅಂದರೆ ಗರ್ಭಿಣಿಯರು, ಮಕ್ಕಳು, ವೃದ್ಧರು, ರೋಗಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಮನೆ ಸುತ್ತ ಸೊಳ್ಳೆ ಕಾಟ ಹೆಚ್ಚಿದ್ದರೆ ದೇಹ ಪೂರ್ತಿ ಮುಚ್ಚುವಂಥ ಬಟ್ಟೆ ಧರಿಸಿಕೊಳ್ಳಬೇಕು. ಇದೆಲ್ಲದರ ಜತೆಗೆ ನಾವು ಹುಶಾರಾಗಿರಬೇಕು. ಯಾವುದೇ ರೀತಿಯ ಜ್ವರ ಕಂಡರೂ ಉದಾಸೀನ ಮಾಡದೇ ವೈದ್ಯರಲ್ಲಿಗೆ ಹೋಗಿ ತೋರಿಸಿಕೊಳ್ಳಬೇಕು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.