ರಾಜಸ್ಥಾನ್‌ ರಾಯಲ್ಸ್‌ -ಗುಜರಾತ್‌ ಟೈಟಾನ್ಸ್‌ ಸಮಬಲರ ಸೆಣಸಾಟ


Team Udayavani, Apr 14, 2022, 8:10 AM IST

ರಾಜಸ್ಥಾನ್‌ ರಾಯಲ್ಸ್‌ -ಗುಜರಾತ್‌ ಟೈಟಾನ್ಸ್‌ ಸಮಬಲರ ಸೆಣಸಾಟ

ನವೀ ಮುಂಬಯಿ: ಸಮಬಲ ತಂಡಗಳಾದ ರಾಜಸ್ಥಾನ್‌ ರಾಯಲ್ಸ್‌ ಮತ್ತು ಗುಜರಾತ್‌ ಟೈಟಾನ್ಸ್‌ ಗುರುವಾರದ ಐಪಿಎಲ್‌ ಸ್ಪರ್ಧೆಯಲ್ಲಿ ಮುಖಾಮುಖಿ ಆಗಲಿವೆ. ಸಂಜು ಸ್ಯಾಮ್ಸನ್‌ ಮತ್ತು ಹಾರ್ದಿಕ್‌ ಪಾಂಡ್ಯ ನಾಯಕತ್ವದ ಮೇಲಾಟದಲ್ಲಿ ಯಾರು ಜಯ ಸಾಧಿಸಿಯಾರು ಎಂಬ ಕುತೂಹಲ ಕ್ರಿಕೆಟ್‌ ಅಭಿಮಾನಿಗಳದ್ದು.

ಎರಡೂ ತಂಡಗಳು 4 ಪಂದ್ಯಗಳನ್ನಾಡಿದ್ದು, ಮೂರರಲ್ಲಿ ಜಯ ಸಾಧಿಸಿವೆ. ಆದರೆ ರನ್‌ರೇಟ್‌ ಆಧಾರದಲ್ಲಿ ರಾಜಸ್ಥಾನ್‌ ಅಗ್ರಸ್ಥಾನ ಅಲಂಕರಿಸಿದೆ. ಗುಜರಾತ್‌ 4ನೇ ಸ್ಥಾನದಲ್ಲಿದೆ.

ಹಾರ್ದಿಕ್‌ ಪಾಂಡ್ಯ ನೇತೃತ್ವದ ಗುಜರಾತ್‌ ಹ್ಯಾಟ್ರಿಕ್‌ ಗೆಲುವಿನ ಬಳಿಕ ಕಳೆದ ಪಂದ್ಯದಲ್ಲಿ ಮೊದಲ ಸೋಲನುಭವಿಸಿತ್ತು. ಸನ್‌ರೈಸರ್ ಹೈದರಾಬಾದ್‌ ಬ್ಯಾಟಿಂಗ್‌, ಬೌಲಿಂಗ್‌ ವಿಭಾಗಗಳೆರಡರಲ್ಲೂ ನಿಚ್ಚಳ ಮೇಲುಗೈ ಸಾಧಿಸಿ ಗುಜರಾತ್‌ಗೆ 8 ವಿಕೆಟ್‌ಗಳಿಂದ ಆಘಾತವಿಕ್ಕಿತ್ತು. ಇದು ಪಾಂಡ್ಯ ಪಡೆಗೆ ಹಿನ್ನಡೆಯಾಗುವ ಸಾಧ್ಯತೆ ಇದೆ.

ಈ ಪಂದ್ಯದಲ್ಲಿ ಹಾರ್ದಿಕ್‌ ಪಾಂಡ್ಯ ಮತ್ತು ಅಭಿನವ್‌ ಮನೋಹರ್‌ ಹೊರತುಪಡಿಸಿ ಬೇರೆ ಯಾರೂ ಬ್ಯಾಟಿಂಗ್‌ನಲ್ಲಿ ಕ್ಲಿಕ್‌ ಆಗಿರಲಿಲ್ಲ. ಮ್ಯಾಥ್ಯೂ ವೇಡ್‌, ಶುಭಮನ್‌ ಗಿಲ್‌, ಸಾಯಿಸುದರ್ಶನ್‌, ಡೇವಿಡ್‌ ಮಿಲ್ಲರ್‌ ವೈಫ‌ಲ್ಯ ತಂಡಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿತ್ತು. ಬಲಿಷ್ಠ ರಾಜಸ್ಥಾನ್‌ ವಿರುದ್ಧ ಮೇಲುಗೈ ಸಾಧಿಸಬೇಕಾದರೆ ಇವರೆಲ್ಲರ ಬ್ಯಾಟ್‌ಗಳೂ ಮಾತಾಡಬೇಕಿವೆ. ಬಿಗ್‌ ಹಿಟ್ಟರ್‌ ರಾಹುಲ್‌ ತೆವಾಟಿಯ ಅವರಿಗೆ ಬ್ಯಾಟಿಂಗ್‌ ಕ್ರಮಾಂಕದಲ್ಲಿ ಭಡ್ತಿ ನೀಡುವ ಬಗ್ಗೆಯೂ ಆಲೋಚಿಸಬೇಕಿದೆ.

ಮೊಹಮ್ಮದ್‌ ಶಮಿ, ಲಾಕಿ ಫ‌ರ್ಗ್ಯುಸನ್‌, ರಶೀದ್‌ ಖಾನ್‌ ಅವರಂಥ ಅಂತಾರಾಷ್ಟ್ರೀಯ ಖ್ಯಾತಿಯ ಬೌಲರ್‌ಗಳಿದ್ದರೂ ಒಟ್ಟಾರೆಯಾಗಿ ಗುಜರಾತ್‌ ಬೌಲಿಂಗ್‌ ತೀರಾ ಸಾಮಾನ್ಯವಾಗಿ ಗೋಚರಿಸುತ್ತಿದೆ. ಬೇರೆ ಘಾತಕ ಬೌಲರ್‌ಗಳೂ ತಂಡದಲ್ಲಿ ಗೋಚರಿಸುತ್ತಿಲ್ಲ.

ಹೀಗಾಗಿ ರಾಜಸ್ಥಾನದ ಸಾಲು ಸಾಲು ಬಿಗ್‌ ಹಿಟ್ಟರ್‌ಗಳನ್ನು ತಡೆಯುವುದು ಗುಜರಾತ್‌ಗೆ ಭಾರೀ ಸವಾಲಾಗಿ ಪರಿಣಮಿಸಬಹುದು.

ರಾಯಲ್ಸ್‌ ರಾಜಸ್ಥಾನ್‌: ರಾಜಸ್ಥಾನ್‌ ಹೆಸರಿಗೆ ತಕ್ಕಂತೆ ರಾಯಲ್ಸ್‌ ತಂಡವೇ ಆಗಿದೆ. ಬ್ಯಾಟಿಂಗ್‌, ಬೌಲಿಂಗ್‌ ಎಲ್ಲವೂ ಡೇಂಜರಸ್‌. ಸಣ್ಣ ಉದಾಹರಣೆ ಕೊಡುವುದಾದರೆ, ಲಕ್ನೋ ಎದುರಿನ ಕಳೆದ ಪಂದ್ಯದಲ್ಲಿ ಟ್ರೆಂಟ್‌ ಬೌಲ್ಟ್ ಎಸೆದ ಫ‌ಸ್ಟ್‌ ಓವರ್‌. ಮೊದಲ ಎಸೆತದಲ್ಲೇ ಕೆ.ಎಲ್‌. ರಾಹುಲ್‌, ದ್ವಿತೀಯ ಎಸೆತದಲ್ಲಿ ಕೆ. ಗೌತಮ್‌ ವಿಕೆಟ್‌ ಉಡಾಯಿಸುವ ಮೂಲಕ ಎದುರಾಳಿಗೆ ಬಲವಾದ ಆಘಾತವಿಕ್ಕಿದರು. ಹೀಗಾಗಿ 165 ರನ್ನುಗಳ ಸಾಮಾನ್ಯ ಮೊತ್ತವನ್ನೂ ಉಳಿಸಿಕೊಳ್ಳಲು ರಾಜಸ್ಥಾನ್‌ಗೆ ಸಾಧ್ಯವಾಗಿತ್ತು.

 

ಪ್ರಸಿದ್ಧ್ ಕೃಷ್ಣ, ಆರ್‌. ಅಶ್ವಿ‌ನ್‌, ಚಹಲ್‌ ಜತೆಗೆ ನೂತನ ಬೌಲರ್‌ ಕುಲದೀಪ್‌ ಸೇನ್‌ ಕೂಡ ಪರಿಣಾಮಕಾರಿ ದಾಳಿ ಸಂಘಟಿಸಿದ್ದರು. ಗುಜರಾತ್‌ ಮೇಲುಗೈ ಸಾಧಿಸಬೇಕಾದರೆ ಈ ಘಾತಕ ದಾಳಿಯನ್ನು ಮೆಟ್ಟಿನಿಂತು ದೊಡ್ಡ ಮೊತ್ತ ಪೇರಿಸುವುದು ಅಗತ್ಯ.

ರಾಜಸ್ಥಾನ್‌ ಬ್ಯಾಟಿಂಗ್‌ ಲೈನಪ್‌ ಕೂಟದಲ್ಲೇ ಹೆಚ್ಚು ಬಲಿಷ್ಠ ಎಂಬುದನ್ನು ಒಪ್ಪಲೇಬೇಕು. ಬಟ್ಲರ್‌, ಪಡಿಕ್ಕಲ್‌, ಸ್ಯಾಮ್ಸನ್‌, ಡುಸೆನ್‌, ಹೆಟ್‌ಮೈರ್‌, ಜೈಸ್ವಾಲ್‌… ಹೀಗೆ ಸಾಲು ಸಾಲು ಬಿಗ್‌ ಹಿಟ್ಟರ್‌ಗಳನ್ನು ಒಳಗೊಂಡಿದೆ. ಗುಜರಾತ್‌ ಬೌಲಿಂಗ್‌ ಯೂನಿಟ್‌ ಕ್ಲಿಕ್‌ ಆದರಷ್ಟೇ ಇವರನ್ನೆಲ್ಲ ಒಂದು ಕೈ ನೋಡಿ ಕೊಳ್ಳ ಬಹುದು.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.