6 ಬಸ್‌ ಬೇ ಖಾಸಗಿ ಹೆಗಲಿಗೆ!

ಸ್ಟೇಟ್‌ಬ್ಯಾಂಕ್‌ ಸರ್ವಿಸ್‌ ಬಸ್‌ನಿಲ್ದಾಣ

Team Udayavani, Apr 14, 2022, 10:09 AM IST

state-bank

ಸ್ಟೇಟ್‌ಬ್ಯಾಂಕ್‌: ಸ್ಟೇಟ್‌ಬ್ಯಾಂಕ್‌ ಸರ್ವಿಸ್‌ ಬಸ್‌ ನಿಲ್ದಾಣವನ್ನು ಪ್ರಯಾಣಿಕ ಸ್ನೇಹಿಯಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ ವೇಗ ಪಡೆದಿದ್ದು, ಇಲ್ಲಿ ಹೊಸತಾಗಿ 6 ಬಸ್‌ಬೇ ನಿರ್ಮಾಣಕ್ಕಾಗಿ ಖಾಸಗಿ ಸಹಭಾಗಿತ್ವವನ್ನು ಮಂಗಳೂರು ಪಾಲಿಕೆ ನಿರೀಕ್ಷಿಸಿದೆ.

ಬಸ್‌ನಿಲ್ದಾಣಕ್ಕೆ ಕಾಂಕ್ರೀಟ್‌ ಸಹಿತ ಮೂಲ ಸೌಲಭ್ಯ ವ್ಯವಸ್ಥೆ ಕಲ್ಪಿಸುವ ಕಾಮಗಾರಿಯನ್ನು ಮಂಗಳೂರು ಪಾಲಿಕೆ, ಮುಡಾ ಹಾಗೂ ಸ್ಮಾರ್ಟ್‌ ಸಿಟಿ ಯೋಜನೆಯಿಂದ ಕೈಗೊಳ್ಳಲಾಗಿದೆ. ಇಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವ ನೆಲೆಯಲ್ಲಿ ಬಸ್‌ಬೇಗಳನ್ನು ಸುಸಜ್ಜಿತ ಸ್ವರೂಪದಲ್ಲಿ ಮಾಡಲು ಪಾಲಿಕೆ ನಿರ್ಧರಿಸಿದೆ.ಇದಕ್ಕಾಗಿ ಖಾಸಗಿ ಸಹಭಾಗಿ ತ್ವಕ್ಕೆ ಒತ್ತು ನೀಡಲು ನಿರ್ಧರಿಸಿದೆ.

ನಗರ ವ್ಯಾಪ್ತಿಯಲ್ಲಿ ಖಾಸಗಿ ಭೂಮಿಯಲ್ಲಿ ಅಪೇಕ್ಷಿತ ಏಜಿನ್ಸಿಯವರು ಜಾಹೀರಾತು ಬೋರ್ಡ್‌ ಹಾಕುವುದಾದರೆ ಯಾವ ನಿಯಮ ಪಾಲಿಸಲಾಗುತ್ತದೆಯೇ ಅದೇ ನಿಯಮಾ ವಳಿಯಂತೆ ಬಸ್‌ ಬೇ ನಿರ್ಮಿಸಲು ನಿರ್ಧರಿಸಲಾಗಿದೆ. ಜಾಹೀರಾತು ಬೊರ್ಡ್‌ ಹಾಕುವ ವೇಳೆ ಖಾಸಗಿ ಭೂಮಿಯವರಿಗೆ ನೆಲ ಬಾಡಿಗೆಯನ್ನು ನೀಡಲಾಗುತ್ತದೆ. ಪಾಲಿಕೆಗೆ ಜಾಹೀರಾತು ತೆರಿಗೆ ಪಾವತಿಸಲಾಗುತ್ತದೆ. ಇದೇ ಮಾದರಿ ನಿಯಮವನ್ನು ಸ್ಟೇಟ್‌ಬ್ಯಾಂಕ್‌ ಸರ್ವಿಸ್‌ ಬಸ್‌ ನಿಲ್ದಾಣದ ಬಸ್‌ ಬೇ ನಿರ್ಮಾಣಕ್ಕೂ ಅನುಷ್ಠಾನಿಸಲಾಗುತ್ತದೆ.

12 ವರ್ಷಕ್ಕೆ ಗುತ್ತಿಗೆ

ಸರ್ವಿಸ್‌ ಬಸ್‌ನಿಲ್ದಾಣದಲ್ಲಿ ಕಾಂಕ್ರೀಟ್‌ ಹಾಕಿ ಸೂಕ್ತ ವ್ಯವಸ್ಥೆಯನ್ನು ಮಾಡಿಕೊಡಲಾಗುತ್ತದೆ. ಪಾಲಿಕೆಯೇ ಈ ಕಾಮಗಾರಿ, ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಬಸ್‌ ಬೇಗಾಗಿ ಮುಂದೆ ಬರುವ ಏಜೆನ್ಸಿಯವರಿಗೆ ನೆಲ ಬಾಡಿಗೆ ರಿಯಾಯಿತಿ ಇರಲಿದೆ. ಆದರೆ ಜಾಹೀರಾತು ತೆರಿಗೆಯನ್ನು ಸಂಸ್ಥೆಯು ಪಾಲಿಕೆಗೆ ಪಾವತಿಸಬೇಕಾಗಿದೆ. ಗುತ್ತಿಗೆ ಪಡೆಯುವ ಸಂಸ್ಥೆಯವರು ಬಸ್‌ ಬೇಗಳನ್ನು ಸ್ವಂತ ಖರ್ಚಿನಿಂದ ನಿರ್ಮಿಸಬೇಕು. ನಿರ್ವಹಣೆ ಯನ್ನೂ ಅದೇ ಸಂಸ್ಥೆ ನಡೆಸಬೇಕಿದೆ. ಇದಕ್ಕೆ ಪೂರಕವಾಗಿ ಜಾಹೀರಾತು ಪ್ರಾಯೋಜಕತ್ವ ಪಡೆಯಲು ಸಂಬಂಧಿಸಿದ ಸಂಸ್ಥೆಗೆ ಅವಕಾಶವಿದೆ. 12 ವರ್ಷ ಗಳ ಅವಧಿಗೆ ಗುತ್ತಿಗೆ ಹಕ್ಕು ಇರಲಿದೆ. ಆ ಬಳಿಕ ಇದರ ಪೂರ್ಣ ಹಕ್ಕು ಪಾಲಿಕೆಗೆ ಆಗಿರುತ್ತದೆ.

‘ಬಿಒಟಿ’ ಮಾದರಿ ನಿರ್ಮಾಣ

ಸ್ಟೇಟ್‌ಬ್ಯಾಂಕ್‌ ಸರ್ವಿಸ್‌ ಬಸ್‌ನಿಲ್ದಾಣದಲ್ಲಿ 6 ಹೊಸ ಬಸ್‌ ಬೇ ನಿರ್ಮಾಣವನ್ನು ಬಿಒಟಿ ಮಾದರಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಇಲ್ಲಿ ಕಾಂಕ್ರೀಟ್‌ ಕಾಮಗಾರಿಯನ್ನು ಪಾಲಿಕೆ ನಡೆಸಿದೆ. ಮೇಲ್ಛಾವಣಿಯನ್ನು ಮಾತ್ರ ಖಾಸಗಿಯವರು ನಡೆಸಬೇಕಿದೆ. ಅಂದರೆ, ಟೆಂಡರ್‌ ಪಡೆದುಕೊಳ್ಳುವವರು ಬಸ್‌ ಬೇ ನಿರ್ಮಿಸಿ, ಅವರೇ ನಿರ್ವಹಣೆ ಮಾಡಬೇಕು. ಅವರು ಜಾಹೀರಾತು ಹಾಕಿದರೆ ಅದರ ತೆರಿಗೆಯನ್ನು ಪಾಲಿಕೆಗೆ ಪಾವತಿಸಬೇಕು. -ಪ್ರೇಮಾನಂದ ಶೆಟ್ಟಿ, ಮೇಯರ್‌, ಮಹಾನಗರ ಪಾಲಿಕೆ

ಟಾಪ್ ನ್ಯೂಸ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.