ರಾಜೀನಾಮೆ ನಮಗೆ ಮುಖ್ಯವಲ್ಲ, ಮೊದಲು ಈಶ್ವರಪ್ಪ ಬಂಧನವಾಗಬೇಕು: ಕಾಂಗ್ರೆಸ್
ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅನ್ವಯ ಪ್ರಕರಣ ದಾಖಲಿಸಿ
Team Udayavani, Apr 14, 2022, 6:46 PM IST
ಬೆಂಗಳೂರು : ಸುಳ್ಳು ಕಂಪನಿ ಚೇರ್ ಮೆನ್ ಈಶ್ವರಪ್ಪ. ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅನ್ವಯ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.
ಈಶ್ವರಪ್ಪ ರಾಜೀನಾಮೆ ಹಿನ್ನೆಲೆಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜೀನಾಮೆ ನಮಗೆ ಮುಖ್ಯವಲ್ಲ. ಮೊದಲು ಅವರ ಬಂಧನವಾಗಬೇಕು ಎಂದು ಆಗ್ರಹಿಸಿದರು.
ಇದು ನನ್ನ ಜಯವಲ್ಲ, ಸಿದ್ದರಾಮಯ್ಯ ಅವರ ಜಯವಲ್ಲ. ಇದು ರಾಜ್ಯದ ಸ್ವಾಭಿಮಾನಿ ಜನತೆಯ ಗೆಲುವು. ಪ್ರಕೃತಿ ಯ ನಿಯಮ ಇದೆ. ಅದರಂತೆ ನಡೆಯಬೇಕಾಗುತ್ತದೆ. ತುಂಬಾ ದಿನಗಳ ಕಾಲ ಸುಳ್ಳು ಹೇಳಿಕೊಂಡು ಓಡಾಡುವುದಕ್ಕೆ ಸಾಧ್ಯವಿಲ್ಲ. ಈ ಪ್ರಕರಣದ ಬಗ್ಗೆ ಹೈಕೋರ್ಟ್ ಜಡ್ಜ್ ನೇತೃತ್ವದಲ್ಲಿ ತನಿಖೆ ನಡೆಸಲೇಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಕೊನೆಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ ಈಶ್ವರಪ್ಪ
ತಪ್ಪು ಈಗ ಅರಿವಾಗಿದೆ : ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಈಶ್ಚರಪ್ಪ ಇಲ್ಲಿಯವರೆಗೆ ಸುಳ್ಳು ಹೇಳಿಕೊಂಡಿದ್ದರು. ನಮ್ಮ ಹೋರಾಟ ಚುರುಕಾದ ಮೇಲೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಅದರ ಅರ್ಥ 40% ಲಂಚದ ಆರೋಪ ನಿಜವಾದಂತಾಯ್ತು. ತಪ್ಪು ಅರಿವಾಗಿ ಈಶ್ವರಪ್ಪ ರಾಜೀನಾಮೆ ಕೊಟ್ಟಿದ್ದಾರೆ. ಸಂತೋಷ್ ಯಾರು ಎಂದು ಗೊತ್ತಿಲ್ಲದೇ ಮಾನನಷ್ಟ ಮೊಕದ್ದಮೆ ಹಾಕಿದ್ದರಾ ? ಎಂದು ಪ್ರಶ್ನಿಸಿದರು.
ಭ್ರಷ್ಟಾಚಾರ ಸೆಕ್ಷನ್ 13 ರ ಅಡಿ ಈಶ್ವರಪ್ಪ ಮೇಲೆ ಎಫ್ ಐ ಆರ್ ಹಾಕಬೇಕು. ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಕಾನೂನು ಎಲ್ಲರಿಗೂ ಒಂದೇ ಅಲ್ಲವೇ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ