ಕೆಜಿಎಫ್ 2..:  ರಾಕಿಭಾಯ್‌ ಸಾಮ್ರಾಜ್ಯದ ರಕ್ತ ಚರಿತೆಯಿದು


Team Udayavani, Apr 15, 2022, 9:37 AM IST

ಕೆಜಿಎಫ್ 2..:  ರಾಕಿಭಾಯ್‌ ಸಾಮ್ರಾಜ್ಯದ ರಕ್ತ ಚರಿತೆಯಿದು

ತಾಯಿಗೆ ಕೊಟ್ಟ ಭಾಷೆಯನ್ನು ಉಳಿಸುವ ಹಠಕ್ಕೆ ಬಿದ್ದ ಆತ, ಒಂದು ಸಾಮ್ರಾಜ್ಯವನ್ನೇ ಕಟ್ಟಲು ನಿರ್ಧರಿಸುತ್ತಾನೆ. ಆ ಸಾಮ್ರಾಜ್ಯಕ್ಕೆ ಅಡಿಪಾಯವಾಗಿ ಅದೆಷ್ಟೋ ಹೆಣಗಳು ಉರುಳುತ್ತವೆ. ಹಾಗಂತ ಆತನ ಹಾದಿ ಸುಗಮವಾಗಿರುವುದಿಲ್ಲ. ದುರ್ಗಮ ಹಾದಿಯಲ್ಲಿ ಆತ ಜಯಿಸುತ್ತಾನಾ ಅಥವಾ ಮಂಡಿಯೂರುತ್ತಾನಾ… ಈ ಕುತೂಹಲವನ್ನಿಟ್ಟುಕೊಂಡು ನೀವು “ಕೆಜಿಎಫ್-2′ ನೋಡಲು ಹೋದರೆ ಅಲ್ಲಿ ನಿಮಗೊಂದು ಹೊಸ ಲೋಕವೇ ತೆರೆದುಕೊಳ್ಳುತ್ತದೆ. ಆ ಲೋಕದೊಳಗೆ ನಿಮಗೆ ಭಿನ್ನ-ವಿಭಿನ್ನ ಪಾತ್ರಗಳು, ಸನ್ನಿವೇಶಗಳು ಎದುರಾಗುತ್ತವೆ.

ನೀವು “ಕೆಜಿಎಫ್’ ಮೊದಲ ಭಾಗ ನೋಡಿದ್ದರೆ ನಿಮಗೆ “ಕೆಜಿಎಫ್-2′ ಲಿಂಕ್‌ ಬೇಗನೇ ಸಿಗುತ್ತದೆ. ಮೊದಲ ಭಾಗದಲ್ಲಿ ಮುಂಬೈನಿಂದ ಬಂದಿದ್ದ ರಾಕಿ, ಗರುಡನನ್ನು ಸಾಯಿಸಿ ಬಿಡುತ್ತಾನೆ. ಹಾಗಾದರೆ, ಮುಂದೆ ನರಾಚಿ ಸಾಮಾಜ್ರéವನ್ನು ಆಳುವವರು ಯಾರು ಎಂಬ ಕುತೂಹಲದೊಂದಿಗೆ ಸಿನಿಮಾ ನಿಂತಿತ್ತು. ಈಗ ಮುಂದುವರೆದ ಭಾಗ ಅಲ್ಲಿಂದಲೇ ಶುರುವಾಗಿದೆ.

ಮುಖ್ಯವಾಗಿ ಇಲ್ಲಿ ರಾಕಿಭಾಯ್‌ ಖದರ್‌, ಬುದ್ಧಿವಂತಿಕೆ ಹಾಗೂ ಜಿದ್ದನ್ನು ಇಟ್ಟುಕೊಂಡು ಇಡೀ ಸಿನಿಮಾ ಕಟ್ಟಿಕೊಟ್ಟಿದ್ದಾರೆ. ಯಶ್‌ ಅಭಿಮಾನಿಗಳಿಗೆ ಈ ಸಿನಿಮಾ ಹಬ್ಬ. ಆರಂಭದಿಂದ ಕೊನೆಯವರೆಗೂ ಯಶ್‌ ಸಖತ್‌ ಸ್ಟೈಲಿಶ್‌ ಆಗಿಯೇ ಕಾಣಿಸಿಕೊಂಡಿದ್ದಾರೆ.

ನಿರ್ದೇಶಕ ಪ್ರಶಾಂತ್‌ ನೀಲ್‌ ಇಲ್ಲಿ ಕಥೆಗಿಂತ ಹೆಚ್ಚಾಗಿ ಸನ್ನಿವೇಶಗ ಳನ್ನಿಟ್ಟುಕೊಂಡು ಆ ಮೂಲಕ “ಕೆಜಿಎಫ್-2′ ಮುಂದುವರೆಸಿಕೊಂಡು ಹೋಗಿದ್ದಾರೆ. ಮೊದಲ ಭಾಗದಲ್ಲಿ ತಾಯಿ ಸೆಂಟಿಮೆಂಟ್‌ ಹೈಲೈಟ್‌ ಆಗಿತ್ತು. ಆದರೆ, “ಕೆಜಿಎಫ್-2’ನಲ್ಲಿ

ಆ್ಯಕ್ಷನ್‌ ಪ್ರಮುಖ ಆಕರ್ಷಣೆ. ಚಿತ್ರದುದ್ದಕ್ಕೂ ಸಾಗಿಬರುವ ಅದ್ಭುತವಾದ ಫೈಟ್ಸ್‌, ಅದರ ಹಿನ್ನೆಲೆ ಸಂಗೀತ, ಲೈಟಿಂಗ್‌, ಲೊಕೇಶನ್‌, ದೊಡ್ಡದಾದ ಬ್ಯಾಕ್‌ಡ್ರಾಪ್‌… ಹೀಗೆ ಒಂದೊಂದು ಫೈಟ್‌ ಅನ್ನು ಮೈ ಜುಮ್ಮೆನ್ನಿಸುವಂತೆ ಕಟ್ಟಿಕೊಡಲಾಗಿದೆ. ಮಾಸ್‌ ಪ್ರಿಯರ ಖುಷಿಯನ್ನು ಆ್ಯಕ್ಷನ್‌ ಎಪಿಸೋಡ್‌ಗಳು ಹೆಚ್ಚಿಸುವುದ ರಲ್ಲಿ ಎರಡು ಮಾತಿಲ್ಲ. ಇಷ್ಟೊಂದು ಆ್ಯಕ್ಷನ್‌ ಬೇಕಿತ್ತಾ ಎಂದು ನೀವು ಕೇಳಬಹುದು. ಈ ಆ್ಯಕ್ಷನ್‌ಗಳಿಗೆ ಪೂರಕವಾಗಿ ಚಿತ್ರದಲ್ಲೊಂದು ಸಂಭಾಷಣೆ ಇದೆ; “ರಕ್ತದಿಂದ ಬರೆದ ಕಥೆಯಿದು.. ಶಾಹಿಯಿಂದ ಮುಂದುವರೆಸೋಕೆ ಸಾಧ್ಯವಿಲ್ಲ… ರಕ್ತದಿಂದಲೇ ಮುಂದುವರೆಸಬೇಕು…’ ಈ ಸಂಭಾಷಣೆಗೆ ಪ್ರಶಾಂತ್‌ ನೀಲ್‌ ಎಷ್ಟು ನ್ಯಾಯ ಸಲ್ಲಿಸಲು ಸಾಧ್ಯವೋ ಅಷ್ಟು ಸಲ್ಲಿಸಿದ್ದಾರೆ. ಇಲ್ಲಿ ಹೊಡೆದಾಟ, ಬಡಿದಾಟ, ರಕ್ತಪಾತ… ಎಲ್ಲವೂ ಆಗುತ್ತದೆ. ಅದರಲ್ಲೂ ಅದೆಷ್ಟು ಬುಲೆಟ್‌ಗಳು ಯಾರ್ಯಾರ ಎದೆಯೊಳಗೆ ಎಷ್ಟು ನುಗ್ಗುತ್ತವೆಯೋ ಲೆಕ್ಕವಿಲ್ಲ. ಆ ಮಟ್ಟಿಗೆ ಚಿತ್ರದಲ್ಲಿ ಗನ್‌ ಫೈಟ್ಸ್‌ ಇದೆ.

ಮುಖ್ಯವಾಗಿ ಈ ಚಿತ್ರದಲ್ಲಿ ಪ್ರಶಾಂತ್‌ ನಾಯಕನನ್ನು ವಿಜೃಂಭಿಸಲು ಏನೇನೂ ಬೇಕೋ, ಅವೆಲ್ಲವನ್ನು ಮಾಡಿದ್ದಾರೆ. ಅವೆಲ್ಲವೂ ಪ್ರೇಕ್ಷಕರಿಗೆ ಮಜಾ ಕೊಡುವಲ್ಲಿ ಮೋಸ ಮಾಡಿಲ್ಲ. ಈ ಬಾರಿ ಚಿತ್ರಕ್ಕೆ ಹೊಸ ಪಾತ್ರಗಳು ಸೇರಿಕೊಂಡಿವೆ ಅಧೀರ, ರಮೀಕಾ ಸೇನ್‌, ಸಿಬಿಐ ಆಫೀಸರ್‌… ಹೀಗೆ ಹೊಸ ಹೊಸ ಪಾತ್ರಗಳು ಸೇರಿಕೊಂಡಿವೆ.

ಇದನ್ನೂ ಓದಿ:ನಿಧಾನಗತಿಯ ಓವರ್‌: ರೋಹಿತ್‌ಗೆ 24 ಲಕ್ಷ ರೂ. ದಂಡ

ಚಿತ್ರದ ಹೈಲೈಟ್‌ಗಳಲ್ಲಿ ಡೈಲಾಗ್ಸ್‌ ಕೂಡಾ ಒಂದು. ಅದರಲ್ಲೂ ಮೊದಲರ್ಧದಲ್ಲಿ ಬರುವ ಸಂಭಾಷಣೆ ಪ್ರೇಕ್ಷಕರಿಗೆ ಕಿಕ್ಕೇರಿಸುವಲ್ಲಿ ಹಿಂದೆ ಬಿದ್ದಿಲ್ಲ. ಅದರ ಜೊತೆಗೆ ಮೊದಲರ್ಧ ತುಂಬಾ ವೇಗವಾಗಿ ಸಾಗುತ್ತದೆ. ರಾಕಿಬಾಯ್‌ ಎಂಟ್ರಿ, ಆತನ ಬಿಝಿನೆಸ್‌ ಡೀಲಿಂಗ್ಸ್‌, ಚೇಸಿಂಗ್‌.. ಮೂಲಕ ಮಜಾ ಕೊಡುತ್ತದೆ. ಆದರೆ, ದ್ವಿತೀಯಾರ್ಧ ಸ್ವಲ್ಪ ನಿಧಾನವಾಯಿತೇನೋ ಎಂಬ ಭಾವನೆ ಬರುವಷ್ಟರಲ್ಲಿ ಅಧೀರ, ರಮೀಕಾ, ರಾಕಿಭಾಯ್‌ ಸೇರಿ ಮತ್ತೆ ಚಿತ್ರಕ್ಕೆ ವೇಗ ನೀಡುತ್ತಾರೆ. ಒಂದು ಕಮರ್ಷಿಯಲ್‌ ಸಿನಿಮಾದಲ್ಲಿ ಲಾಜಿಕ್‌ ಹುಡುಕಬಾರದು ಎಂಬ ಮಾತಿದೆ. ಅದನ್ನು ಗಮನದಲ್ಲಿಟ್ಟುಕೊಂಡು ನೀವು “ಕೆಜಿಎಫ್-2′ ನೋಡಿದರೆ ಸಿನಿಮಾದ ಈ ಮ್ಯಾಜಿಕ್‌ ನಿಮ್ಮನ್ನು ಸೆಳೆಯುವುದರಲ್ಲಿ ಎರಡು ಮಾತಿಲ್ಲ. ಮೊದಲೇ ಹೇಳಿದಂತೆ ಇಡೀ ಸಿನಿಮಾದ ಹೈಲೈಟ್‌ ಯಶ್‌. ರಾಕಿಭಾಯ್‌ ಆಗಿ ಇಡೀ ಸಿನಿಮಾವನ್ನು ಅವರು ಆವರಿಸಿಕೊಂಡಿದ್ದಾರೆ.

ರಕ್ತಪಾತದ ಜೊತೆಗೆ ತನ್ನ ನಂಬಿದ ಜನರಿಗೆ ಏನು ಬೇಕೋ ಅದನ್ನು ಮಾಡುವ ಪಾತ್ರದಲ್ಲಿ ಅವರು ಇಷ್ಟವಾಗುತ್ತಾರೆ. ನಾಯಕಿ ಶ್ರೀನಿಧಿಗೆ ಈ ಬಾರಿ ಸ್ವಲ್ಪ ದೊಡ್ಡ ಪಾತ್ರ ಸಿಕ್ಕಿದೆ. ಉಳಿದಂತೆ ಸಂಜಯ್‌ ದತ್‌ ಅಧೀರನಾಗಿ ಅಬ್ಬರಿಸಿದರೆ, ರಮೀಕಾ ಖಡಕ್‌ ಪಿ.ಎಂ, ಉಳಿದಂತೆ ಚಿತ್ರದಲ್ಲಿ ತುಂಬಾ ಪಾತ್ರಗಳಿದ್ದರೂ ಆಗಾಗ ಬರುವ ಒಂದೊಂದು ಡೈಲಾಗ್‌ಗಳಿಗಷ್ಟೇ ಸೀಮಿತ.

ಇನ್ನು, ಛಾಯಾಗ್ರಾಹಕ ಭುವನ್‌ ಕೆಲಸ ಇಡೀ ಸಿನಿಮಾದಲ್ಲಿ ಎದ್ದು ಕಾಣುತ್ತದೆ. ರವಿ ಬಸ್ರೂರು ಸಂಗೀತ, ಹಿನ್ನೆಲೆ ಸಂಗೀತ ಚಿತ್ರಕ್ಕೆ ಪೂರಕ.

 ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.