ಶಿಕ್ಷಕರ ರಜಾ ನೆಮ್ಮದಿಗೆ ತರಬೇತಿ ಭಂಗ!


Team Udayavani, Apr 15, 2022, 10:53 AM IST

3

ದಾವಣಗೆರೆ: ಶಿಕ್ಷಣ ಇಲಾಖೆ ಮುಂದಿನ ಶೈಕ್ಷಣಿಕ ಸಾಲಿನಿಂದ “ಕಲಿಕಾ ಚೇತರಿಕೆ’ ಕಾರ್ಯಕ್ರಮ ಅನುಷ್ಠಾನಗೊಳಿಸಲು ಭರದ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಇದರಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಈ ಬಾರಿ “ಬೇಸಿಗೆ ರಜೆಯ ನೆಮ್ಮದಿ’ ಇಲ್ಲದಂತಾಗಿದೆ.

ಕೊರೊನಾ ಕಾರಣದಿಂದ ಕಳೆದೆರಡು ವರ್ಷ ಬೇಸಿಗೆ ರಜಾ ಅವಧಿಯಲ್ಲಿ ಎಲ್ಲಿಯೂ ಯಾರಿಗೂ ಮುಕ್ತವಾಗಿ ಪ್ರವಾಸ ಕೈಗೊಳ್ಳಲಾಗಿಲ್ಲ. ಇದಕ್ಕೆ ಶಿಕ್ಷಕ ವರ್ಗವೂ ಹೊರತಾಗಿಲ್ಲ. ಈ ಸಲದ ರಜೆಯಲ್ಲಾದರೂ ಮಕ್ಕಳು, ಕುಟುಂಬಸ್ಥರು, ಬಂಧು, ಸ್ನೇಹಿತರೊಂದಿಗೆ ಪ್ರವಾಸ ಕೈಗೊಳ್ಳಬೇಕೆಂದುಕೊಂಡ ಶಿಕ್ಷಕರ ಯೋಜನೆಗೆ “ಕಲಿಕಾ ಚೇತರಿಕೆ’ ತರಬೇತಿ ತಣ್ಣೀರೆರಚಿದಂತಾಗಿದೆ.

ಶಿಕ್ಷಣ ಇಲಾಖೆ ಹಮ್ಮಿಕೊಂಡ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕಾಗಿ ಇಲಾಖೆ ಈ ವರ್ಷ 15 ದಿನ ಮೊದಲೇ ಶೈಕ್ಷಣಿಕ ವರ್ಷ ಆರಂಭಿಸಲು ನಿರ್ಧರಿಸಿದೆ. ಶಾಲಾ ರಜೆಗೂ ಮುನ್ನವೇ ರಾಜ್ಯ ಮಟ್ಟದಲ್ಲಿ ಉಪನಿರ್ದೇಶಕರು (ಅಭಿವೃದ್ಧಿ ಮತ್ತು ಆಡಳಿತ), ಡಯಟ್‌ನ ಕಲಿಕಾ ಚೇತರಿಕೆ ನೋಡಲ್‌ ಅಧಿಕಾರಿಗಳಿಗೆ, ಶಾಲಾ ಶಿಕ್ಷಕರ ಸಂಘಗಳ ರಾಜ್ಯ ಪದಾಧಿಕಾರಿಗಳು ಹಾಗೂ ಜಿಲ್ಲಾ ಪದಾಧಿಕಾರಿಗಳಿಗೆ, ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ ನೀಡಲಾಗಿದೆ. ಆದರೆ ಈಗಿನ ಶಾಲಾ ರಜೆ ಅವಧಿಯಲ್ಲಿ ಜಿಲ್ಲಾ ಹಂತ ಹಾಗೂ ಬ್ಲಾಕ್‌ ಹಂತದ ತರಬೇತಿ ನಡೆಸಲು ಮುಂದಾಗಿರುವುದು ರಜೆಯ ಮೂಡ್‌ನ‌ಲ್ಲಿದ್ದ ಶಿಕ್ಷಕರಿಗೆ ನಿರಾಸೆ ಮೂಡಿಸಿದೆ.

ರಾಜ್ಯದ ಪತ್ರಿಯೊಂದು ಜಿಲ್ಲೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರಿಗೆ ಮೇ 10ರೊಳಗೆ ತರಬೇತಿ ನೀಡಲು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಯೋಜನೆ ಹಾಕಿಕೊಂಡಿದೆ. 40 ಶಿಕ್ಷಕರನ್ನು ಒಂದು ತಂಡ ಮಾಡಿ ಸಂಪನ್ಮೂಲ ವ್ಯಕ್ತಿಗಳ ಮೂಲಕ ಎರಡು ದಿನಗಳ ತರಬೇತಿ ನೀಡಲು ಇಲಾಖೆ ಏ.13ರಂದು ಸ್ಪಷ್ಟ ಮಾರ್ಗದರ್ಶಿ ನಿರ್ದೇಶನವನ್ನೂ ನೀಡಿದೆ. ತರಬೇತಿ ಕೇವಲ ಎರಡೇ ದಿನಗಳದ್ದಾದರೂ ಯಾವ ಶಿಕ್ಷಕರಿಗೆ ಯಾವ ದಿನ ತರಬೇತಿ ಬರುತ್ತದೆ ಎಂಬುದು ಇನ್ನಷ್ಟೇ ತರಬೇತಿ ದಿನಾಂಕ ಪಟ್ಟಿ ಸಿದ್ಧವಾಗಬೇಕಿದೆ. ಆದ್ದರಿಂದ ಶಿಕ್ಷಕರು ರಜೆಯ ನೆಮ್ಮದಿ ಇಲ್ಲದೇ ತರಬೇತಿಯ ದಿನಾಂಕದ ನಿರೀಕ್ಷೆಯಲ್ಲೇ ದಿನ ಕಳೆಯುವಂತಾಗಿದೆ.

ತರಬೇತಿ ದಿನಾಂಕವಾದರೂ ತಕ್ಷಣ ನಿಗದಿಪಡಿಸಿದರೆ ಆ ದಿನಾಂಕ ಬಿಟ್ಟು ತಮ್ಮ ರಜೆಯ ವೇಳಾಪಟ್ಟಿ ಹಾಕಿಕೊಳ್ಳಬಹುದು ಎಂದು ಕೆಲ ಶಿಕ್ಷಕರು ಅಪೇಕ್ಷಿಸಿದರೆ, ಇನ್ನು ಕೆಲವು ಶಿಕ್ಷಕರು ಶಾಲಾ ವೇಳೆಯಲ್ಲೇ ಮಾಡಿದರೆ ಒಳಿತು ಎನ್ನುವ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಮತ್ತೆ ಕೆಲವರು ಶಾಲಾ ಪುನಾರಂಭದ ಕೊನೆಯ ಎರಡು ದಿನ ತರಬೇತಿ ದಿನಾಂಕ ನಿಗದಿಪಡಿಸಿದರೆ ಅಲ್ಲಿವರೆಗಾದರೂ ನೆಮ್ಮದಿಯಿಂದ ರಜೆ ಕಳೆಯಬಹುದು ಎನ್ನುತ್ತಿದ್ದಾರೆ.

ಕಲಿಕಾ ಚೇತರಿಕೆ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಶಿಕ್ಷಕರಿಗೆ ಅಗತ್ಯ ತರಬೇತಿಯನ್ನು ಶಾಲಾ ಅವಧಿಯಲ್ಲೇ ನೀಡಬೇಕಿತ್ತು. ರಜಾ ದಿನದ ತರಬೇತಿಯಲ್ಲಿ ಶಿಕ್ಷಕರು ದೈಹಿಕವಾಗಿ ಭಾಗವಹಿಸಿದರೂ ಮಾನಸಿಕವಾಗಿ ಖುಷಿಯಾಗಿ ಭಾಗವಹಿಸುವುದಿಲ್ಲ. ಈ ವರ್ಷ 15 ದಿನ ಮೊದಲೇ ಶಾಲೆ ಪುನಾರಂಭ ಮಾಡುವ ಜತೆಗೆ ರಜೆಯಲ್ಲಿಯೇ ತರಬೇತಿಯನ್ನೂ ಹಮ್ಮಿಕೊಂಡಿರುವುದು ಸರಿಯಲ್ಲ. ಇದರಿಂದ ಶಿಕ್ಷಕರಿಗೆ ರಜೆ ಇದ್ದೂ ಇಲ್ಲದಂತಾಗುತ್ತದೆ. ● ಹೆಸರು ಹೇಳಲಿಚ್ಛಿಸದ ಶಿಕ್ಷಕ

ಇದು ಇಡೀ ರಾಜ್ಯದಲ್ಲಿರುವ ಎಲ್ಲ ಶಿಕ್ಷಕರ ಸಮಸ್ಯೆ. ಮೇ 10ರೊಳಗೆ ಎಲ್ಲ ಶಿಕ್ಷಕರಿಗೆ ತರಬೇತಿ ನೀಡಲು ಡಯಟ್‌ನವರು ಯೋಜನೆ ಹಾಕಿಕೊಂಡಿದ್ದಾರೆ. ಇದರಿಂದ ತಮ್ಮ ಊರಿಗೆ, ಪ್ರವಾಸಕ್ಕೆ ತೆರಳಿರುವ ಶಿಕ್ಷಕರಿಗೆ, ತೆರಳಲು ಯೋಜನೆ ಹಾಕಿಕೊಂಡಿರುವ ಶಿಕ್ಷಕರಿಗೆ ತೊಂದರೆಯಾಗುತ್ತದೆ. ● ರವಿ ಗೋಣೆಪ್ಪನವರ, ಜಿಲ್ಲಾ ಕಾರ್ಯದರ್ಶಿ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಹಾವೇರಿ

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.