ಹೊಸದಿಲ್ಲಿ: ವಿಮಾನದಲ್ಲಿ ಹೊತ್ತಿ ಉರಿದ ಪ್ರಯಾಣಿಕನ ಮೊಬೈಲ್ ಫೋನು!
Team Udayavani, Apr 15, 2022, 1:30 PM IST
ಹೊಸದಿಲ್ಲಿ: ದಿಬ್ರುಗಢ-ದೆಹಲಿ ನಡುವೆ ಸಾಗುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್ ಫೋನ್ಗೆ ಬೆಂಕಿ ಹತ್ತಿಕೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಕ್ಯಾಬಿನ್ ಸಿಬ್ಬಂದಿ ಕೂಡಲೇ ಅಗ್ನಿಶಾಮಕ ಸಾಧನದ ಸಹಾಯದಿಂದ ಬೆಂಕಿ ನಂದಿಸಿದ್ದಾರೆ ಎಂದು ವಾಯುಯಾನ ನಿಯಂತ್ರಕ ಡಿಜಿಸಿಎ ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯಿಂದಾಗಿ ಯಾವುದೇ ಪ್ರಯಾಣಿಕರಿಗೆ ಅಥವಾ ಕ್ಯಾಬಿನ್ ಸಿಬ್ಬಂದಿಗೆ ಯಾವುದೇ ಗಾಯವಾಗಿಲ್ಲ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅಧಿಕಾರಿಗಳು ತಿಳಿಸಿದ್ದಾರೆ.
6ಇ 2037 ವಿಮಾನ ಅಸ್ಸಾಂನ ದಿಬ್ರುಗಢ್ನಿಂದ ದೆಹಲಿಗೆ ತೆರಳುತ್ತಿದ್ದಾಗ ಕ್ಯಾಬಿನ್ ಸಿಬ್ಬಂದಿಯೊಬ್ಬರು ಪ್ರಯಾಣಿಕರೊಬ್ಬರ ಫೋನ್ ನಿಂದ ಬೆಂಕಿ ಕಿಡಿ ಮತ್ತು ಹೊಗೆ ಹೊರಬರುವುದನ್ನು ಕಂಡಿದ್ದಾರೆ. ನಂತರ ಕ್ಯಾಬಿನ್ ಸಿಬ್ಬಂದಿ ಅಗ್ನಿಶಾಮಕ ಸಾಧನವನ್ನು ಬಳಸಿ ಬೆಂಕಿಯನ್ನು ನಂದಿಸಿದರು ಎಂದು ಅಧಿಕಾರಿಗಳು ಹೇಳಿದರು.
ವಿಮಾನವು ಗುರುವಾರ ಮಧ್ಯಾಹ್ನ 12.45 ರ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಪಕ್ಷಕ್ಕೆ ಮುಜುಗರ ಆಗಬಾರದೆಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತಿದ್ದೇನೆ: ಈಶ್ವರಪ್ಪ
“ದಿಬ್ರುಗಢ್ನಿಂದ ದೆಹಲಿಗೆ ಬರುತ್ತಿದ್ದ 6ಇ 2037 ವಿಮಾನದಲ್ಲಿ ಮೊಬೈಲ್ ಸಾಧನದ ಬ್ಯಾಟರಿ ಅಸಹಜವಾಗಿ ಬಿಸಿಯಾದ ಕಾರಣದಿಂದ ಈ ಘಟನೆ ಸಂಭವಿಸಿದೆ. ಎಲ್ಲಾ ಅಪಾಯಕಾರಿ ಘಟನೆಗಳನ್ನು ನಿರ್ವಹಿಸಲು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಮತ್ತು ಅವರು ಪರಿಸ್ಥಿತಿಯನ್ನು ತ್ವರಿತವಾಗಿ ನಿರ್ವಹಿಸಿದ್ದಾರೆ. ಯಾವುದೇ ಹಾನಿ ಸಂಭವಿಸಿಲ್ಲ” ಎಂದು ಇಂಡಿಗೋ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು