ಜೋಯಿಡಾ : ಕಾಳಿ ನದಿಯಲ್ಲಿ ರ‍್ಯಾಫ್ಟಿಂಗ್ ವೇಳೆ ತಪ್ಪಿದ ಭಾರೀ ಅನಾಹುತ

ಉಳಿದ ರ‍್ಯಾಫ್ಟ್ ತಂಡಗಳ ಸಮಯೋಚಿತ ಸ್ಪಂದನೆ

Team Udayavani, Apr 15, 2022, 3:26 PM IST

1-dfsfsf

ಜೋಯಿಡಾ : ಪ್ರವಾಸೋದ್ಯಮಕ್ಕೆ ಮೂಲ ಶಕ್ತಿಯಾದ ಕಾಳಿ ನದಿಯ ಇಳವಾ ಎಂಬಲ್ಲಿ ಪ್ರವಾಸಿಗರನ್ನು ಹೊತ್ತುಕೊಂಡು ಹೋಗುತ್ತಿದ್ದ ರ‍್ಯಾಫ್ಟ್ ಒಂದು ನೀರು ರಭಸವಾಗಿ ದುಮ್ಮುಕ್ಕುವಲ್ಲಿ ಕಲ್ಲಿಗೆ ತಾಗಿ ಸಿಕ್ಕಿಹಾಕಿಕೊಂಡ ಸಂದರ್ಭದಲ್ಲಿ ಪಕ್ಕದಲ್ಲೆ ಇದ್ದ ರ‍್ಯಾಫ್ಟ್ ತಂಡದವರ ಸಮಯೋಚಿತ ಸ್ಪಂದನೆಯಿಂದ ಆಗಬಹುದಾದ ಅನಾಹುತವೊಂದು ತಪ್ಪಿದ ಘಟನೆ ಜೋಯಿಡಾ ತಾಲೂಕಿನ ಗಣೇಶಗುಡಿಯ ಇಳವಾ ಎಂಬಲ್ಲಿ ಗುರುವಾರ ನಡೆದಿದೆ. ಹಲವು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಳವಾದಲ್ಲಿ ಮಿಕ್ಕುಳಿದ ರ‍್ಯಾಫ್ಟ್ ಗಳು ಇಲ್ಲದೇ ಇರುತ್ತಿದ್ದಲ್ಲಿ ದೊಡ್ಡ ಅನಾಹುತವಾಗುತ್ತಿತ್ತು. ಇಳಿಜಾರಿನಲ್ಲಿ ಕಲ್ಲಿಗೆ ರ‍್ಯಾಫ್ಟ್ ಸಿಕ್ಕಿ ಹಾಕಿಕೊಂಡಿದೆ. 8 ಜನರು ಇರಬೇಕಾದ ರ‍್ಯಾಫ್ಟ್ ನಲ್ಲಿ ನಿಗದಿಗಿಂತ ಹೆಚ್ಚು ಜನರನ್ನು ಕರೆದುಕೊಂಡು ಹೋಗಿದ್ದು, ಇನ್ನೂ ಸುರಕ್ಷಾ ಪರಿಕರವಾದ ಹೆಲ್ಮೆಟ್ ಧರಿಸದೇ ಇರುವುದು ಸಹ ದೊಡ್ಡ ತಪ್ಪೆ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇಳವಾದಲ್ಲಿ ಸಾಕಷ್ಟು ಜಲಸಾಹಸ ಕ್ರೀಡೆ, ಬೋಟಿಂಗ್ ಉದ್ಯಮಗಳ ಚಟುವಟಿಕೆಯಿದೆ. ಆದರೆ ಇಲ್ಲಿ ಗಮನಿಸಬೇಕಾದ ಅಂಶವೆಂದರೇ, ಗಣೇಶಗುಡಿಯಿಂದ ಮೌಳಂಗಿಯವರೆಗೆ ರ‍್ಯಾಫ್ಟಿಂಗ್ ನಡೆಸಲು ಜಂಗಲ್ ಲಾಡ್ಜಸ್ ನವರು ಟೆಂಡರ್ ಕರೆಯುತ್ತಾರೆ. ಜಂಗಲ್ ಲಾಡ್ಜಸ್ ಅಧೀನದಲ್ಲಿ ರ‍್ಯಾಫ್ಟಿಂಗ್ ನಡೆಯುತ್ತದೆ. ಆದರೆ ಗಣೇಶಗುಡಿ, ಇಳವಾ ನದಿ ಹತ್ತಿರದ ಪ್ರದೇಶದಲ್ಲಿ ಜಲಸಾಹಸ ಕ್ರೀಡೆ, ಬೋಟಿಂಗ್ ಮಾಡಲು ಪ್ರವಾಸೋದ್ಯಮ ಇಲಾಖೆ ಕೆಲವೊಂದು ಷರತ್ತುಗಳನ್ನು ವಿಧಿಸಿ ಒಂದೊಂದು ಬೋಟಿಗೂ ಒಂದೊಂದು ಪರವಾನಿಗೆ ನೀಡುತ್ತದೆ. ಆದರೆ ಅದು ರ‍್ಯಾಫ್ಟಿಂಗ್ ಗೆ ಅಲ್ಲ ಎನ್ನುವುದನ್ನು ಇಲ್ಲಿ ಗಮನಿಸಬೇಕು. ಪ್ರವಾಸೋದ್ಯಮ ಇಲಾಖೆಯಿಂದ ಜಲಸಾಹಸ ಕ್ರೀಡೆ, ಬೋಟಿಂಗ್ ಗಷ್ಟೆ ಪರವಾನಿಗೆ ಪಡೆದು, ಅದೇ ಪರವಾನಿಗೆಯನ್ನು ಮುಂದಿಟ್ಟುಕೊಂಡು ರ‍್ಯಾಫ್ಟಿಂಗ್ ಮಾಡಲಾಗುತ್ತಿರುವುದು ಇಷ್ಟೆಲ್ಲಾ ರಾದ್ದಾಂತಗಳಿಗೆ ಕಾರಣವಾಗಿದೆ.

ರಭಸವಾಗಿ ನೀರು ಹರಿಯುವಲ್ಲಿ ಮತ್ತು ಏರು ತಗ್ಗುಗಳಿರುವಲ್ಲಿ ಪ್ರವಾಸೋದ್ಯಮ ಇಲಾಖೆಯವರಿಂದ ರ‍್ಯಾಫ್ಟಿಂಗ್ ಗೆ ಪರವಾನಿಗೆ ಇಲ್ಲದಿದ್ದರೂ, ಬೋಟಿಂಗ್, ಜಲಸಾಹಸ ಕ್ರೀಡೆಯ ಪರವಾನಿಗೆಯಲ್ಲಿಯೇ ಕಾನೂನುಬಾಹಿರವಾಗಿ ರ‍್ಯಾಫ್ಟಿಂಗ್ ಮಾಡಲಾಗುತ್ತಿದೆ. ಇದನ್ನು ನಿಯಂತ್ರಿಸಬೇಕಾದ ಪ್ರವಾಸೋದ್ಯಮ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಗಣೇಶಗುಡಿಯಿಂದ ಮೌಳಂಗಿಯವರೆಗೆ ರ‍್ಯಾಫ್ಟಿಂಗ್ ನಡೆಸಲು ಟೆಂಡರ್ ಕರೆಯುವ ಜಂಗಲ್ ಲಾಡ್ಜಸ್ ಹಾಗೂ ಅರಣ್ಯ ಇಲಾಖೆಯವರು ಗೊತ್ತಿದ್ದೂ, ಗೊತ್ತಿಲ್ಲದಂತೆ ನಾಟಕವಾಡುತ್ತಿರುವ ಹಿಂದಿನ ಮರ್ಮವೇನು ಎಂಬ ಪ್ರಶ್ನೆ ಎದುರಾಗಿದೆ.

ಒಮ್ಮೆಲೇ  ಹಣ ಮಾಡಬೇಕೆಂಬ ಹಪಾಹಪಿತನದಿಂದ ಇದ್ದ ಬಿದ್ದವರೆಲ್ಲ ಪ್ರವಾಸೋದ್ಯಮ ಇಲಾಖೆಯಿಂದ ಪರವಾನಿಗೆ ಪಡೆದರೆ ಏನಾಗಬಹುದು ಎನ್ನುವುದಕ್ಕೆ ಇಳವಾದಲ್ಲಿ ನಡೆದ ಈ ಘಟನೆಯೆ ಸಾಕ್ಷಿ. ಇಂತಹ ಘಟನೆಗಳು ನಡೆಯುವಂತಾಗಲೂ ಪ್ರಮುಖ ಕಾರಣ ಜಂಗಲ್ ಲಾಡ್ಜಸ್ ಮತ್ತು ಅರಣ್ಯ ಇಲಾಖೆಯ ದಿವ್ಯ ನಿರ್ಲಕ್ಷ್ಯ ಹಾಗೂ ಪರವಾನಿಗೆ ನೀಡಿ ಕೈ ತೊಳೆದುಕೊಳ್ಳುತ್ತಿರುವ ಪ್ರವಾಸೋದ್ಯಮ ಇಲಾಖೆ ಎಂದೇ ಹೇಳಲಾಗುತ್ತಿದ್ದು, ಇವೆಲ್ಲವುಗಳ ಹಿಂದೆ ಝಣ ಝಣ ಕಾಂಚಣದ ಲೆಕ್ಕಾಚಾರವೂ ಅಡಗಿದೆ ಎಂಬ ಮಾತು ಚರ್ಚೆಯಲ್ಲಿದ್ದು, ಈ ಇಲಾಖೆಗಳ ದಿವ್ಯ ನಿರ್ಲಕ್ಷ್ಯಕ್ಕೆ ಪ್ರವಾಸೋದ್ಯಮ ಅಪಾಯವನ್ನು ಅಹ್ವಾನಿಸುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ವರದಿ : ಸಂದೇಶ್.ಎಸ್.ಜೈನ್

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.