ಮಂಗಳೂರು : ಎಬಿವಿಪಿ ಕಾನೂನು ವಿದ್ಯಾರ್ಥಿಗಳ ರಾಜ್ಯ ಸಮ್ಮೇಳನ

ಕಾನೂನು ವಿದ್ಯಾರ್ಥಿ ರಾಷ್ಟ್ರದ ಸಮಸ್ಯೆಗಳಿಗೆ ಮಿಡಿಯಬೇಕು : ನಿವೃತ್ತ ನ್ಯಾಯಮೂರ್ತಿ ಸುಭಾಷ್ ಆಡಿ

Team Udayavani, Apr 15, 2022, 8:33 PM IST

1-yy

ಮಂಗಳೂರು: ಭಾರತದ ಸ್ವಾತಂತ್ರ್ಯ ಹೋರಾಟಕ್ಕಾಗಿ ಈ ನಾಡಿನ ವಿಶ್ವದರ್ಜೆಯ ವಕೀಲರು ತಮ್ಮ ಸರ್ವಸ್ವವನ್ನು ಮುಡಿಪಿಟ್ಟು ದುಡಿದಿದ್ದಾರೆ. ಅವರೆಲ್ಲರ ಪರಿಶ್ರಮದ ಮೂಲಕ ಸುಂದರವಾದ ಸಂವಿಧಾನ ಮತ್ತು ಅತ್ಯಂತ ಬೃಹತ್ ಪ್ರಜಾಪ್ರಭುತ್ವದ ರಾಷ್ಟ್ರನಿರ್ಮಣ ಸಾಧ್ಯವಾಯಿತು. ಪ್ರಸ್ತುತ ಕಾನೂನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಿರಿಯರ ಆದರ್ಶಗಳನ್ನು ಪಾಲಿಸುತ್ತಾ ಇಂದಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಆಡಿ ಹೇಳಿದರು.

ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಯೋಜಿಸಿದ ಎರಡು ದಿನದ ಕಾನೂನು ವಿದ್ಯಾರ್ಥಿಗಳ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಶುಕ್ರವಾರ ಮಾತನಾಡಿದರು.

ಹಿಂದಿನ ಮತ್ತು ಇಂದಿನ ಕಾನೂನು ಅಧ್ಯಯನ ಶೈಲಿಯಲ್ಲಿ ಭಿನ್ನತೆ ಇದೆ‌. ಪಾರಂಪರಿಕ ಪಾಠಪ್ರವಚನವನ್ನು ಹೇಳಿಕೊಡುವುದರ ಜೊತೆಗೆ ಪ್ರಚಲಿತ ವಿದ್ಯಮಾನಗಳ ಅವಲೋಕನಕ್ಕೆ ಕಾನೂನು ವಿದ್ಯಾಲಯಗಳು ಮಹತ್ವ ಕೊಡಬೇಕು. ವಿದ್ಯಾರ್ಥಿಗಳು ತಮ್ಮ ವ್ಯಾಸಂಗವನ್ನು ಪೂರ್ಣಗೊಳಿಸುವ ಹೊತ್ತಿಗೆ ಮೌಲ್ಯಯುತ ವೃತ್ತಿಪರರಾಗಿ ನಿರ್ಮಾಣಗೊಳ್ಳುವಂತಹ ಪಠ್ಯೇತರ ಚಟುವಟಿಕೆಗಳನ್ನು ಜೋಡಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಕಾನೂನು ವಿದ್ಯಾರ್ಥಿಗಳ ವಿಮರ್ಶಾತ್ಮಕ ಗುಣ ಸೀಮಿತವಾಗಿರಬಾರದು. ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಅರಿತು ಕಾರ್ಯಪ್ರವೃತ್ತರಾಗಬೇಕು. ತಂತ್ರಜ್ಞಾನದ ಯುಗದಲ್ಲಿ ಮಾಹಿತಿಗೆ ಕೊರತೆಯಿಲ್ಲ. ಅವುಗಳನ್ನು ಪಡೆಯುವ ಕೌಶಲ್ಯ ವಿದ್ಯಾರ್ಥಿಗಳಲ್ಲಿರಬೇಕು ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿ ಎಬಿವಿಪಿ ರಾಷ್ಟ್ರೀಯ ಉಪಾಧ್ಯಕ್ಷ ಅಲ್ಲಮಪ್ರಭು ಗುಡ್ಡ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ರಾಷ್ಟ್ರಕ್ಕೆ ನಾಯಕತ್ವ ನೀಡಿದ್ದು ಕಾನೂನು ಕ್ಷೇತ್ರ. ಪ್ರಸ್ತುತ ರಾಷ್ಟ್ರಕ್ಕೆ ನಾಯಕತ್ವ ವಹಿಸುವವರನ್ನು ನಿರ್ಮಿಸುವ ಜವಾಬ್ದಾರಿ ಈ ಕ್ಷೇತ್ರಕ್ಕಿದೆ. ವಿಷಯದಲ್ಲಿ ಪ್ರಾವೀಣ್ಯತೆ ಮತ್ತು ಭಾಷಾ ಪ್ರಬುದ್ಧತೆ ಹೊಂದಿರುವ ಕಾನೂನು ವಿದ್ಯಾರ್ಥಿಗಳ ಅವಶ್ಯಕತೆ ಇದೆ ಎಂದು ನುಡಿದರು.

ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿ ವಿವೇಕಾನಂದ ಕಾನೂನು ವಿದ್ಯಾಲಯದ ನಿರ್ದೇಶಕ ಡಾ.ಬಿ.ಕೆ.ರವೀಂದ್ರ ಮಾತನಾಡಿ, ಕಾನೂನು ಅಧ್ಯಯನ ಬಹುಶಿಸ್ತು ಅಭ್ಯಾಸದ ಕ್ಷೇತ್ರ. ಸಮಾಜ ಕಟ್ಟುವಲ್ಲಿ ಕಾನೂನು ಅಧ್ಯಯನದ ಪಾತ್ರ ಮಹತ್ವವಾದದ್ದು. ಸಾಮಾಜಿಕ ದೃಷ್ಟಿಯುಳ್ಳ ವಕೀಲರನ್ನು ಸಮಾಜಕ್ಕೆ ಕೊಡುಗೆ ನೀಡುವ ಜವಾಬ್ದಾರಿ ಕಾನೂನು ವಿದ್ಯಾಲಯಗಳಿಗಿವೆ. ಪ್ರಸ್ತುತದ ಹಲವು ಸವಾಲುಗಳನ್ನು ಎದುರಿಸಿ ಸಮಾಜಿಕ ಬದಲಾವಣೆಗೆ ನಾಂದಿ ಹಾಡುವ ಕಾರ್ಯ ಕಾನೂನು ಅಧ್ಯಯನದಿಂದ ಆಗಬೇಕಿದೆ ಎಂದರು.

ಇದೇ ಸಂದರ್ಭದಲ್ಲಿ ‘ಸಂವಿಧಾನ ಶಿಲ್ಪಿ, ಜ್ಞಾನಯೋಗಿ ಡಾ.ಬಿ.ಆರ್. ಅಂಬೇಡ್ಕರ್’ ಎಂಬ ಮರುಮುದ್ರಣಗೊಂಡ ಪುಸ್ತಕ ಬಿಡುಗಡೆ ಮತ್ತು ಎಬಿವಿಪಿ ಮೂರನೇ ಆವೃತ್ತಿಯ ವಿದ್ಯಾರ್ಥಿ ಸಂಸ್ಕೃತಿ ಚಳುವಳಿಯ ಪೋಸ್ಟರ್ ಅನಾವರಣಗೊಂಡಿತು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕಾರ್ಯ ಸಮಿತಿಯ ಸದಸ್ಯೆ ಕು. ಪ್ರೇಮಾಶ್ರೀ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಮೀಕ್ಷಾ ಪ್ರಾರ್ಥಿಸಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ರಾಜ್ಯಾಧ್ಯಾಕ್ಷ ಡಾ.ರೋಹಿಣಾಕ್ಷ ಶಿರ್ಲಾಲು ಪ್ರಸ್ಥಾವಿಸಿ, ಕಾರ್ಯದರ್ಶಿ ಮಣಿಕಂಠ ಕಳಸ ಸ್ವಾಗತಿಸಿದರು. ವಿದ್ಯಾರ್ಥಿ ಪ್ರವೀಣ್ ಶಿವಮೊಗ್ಗ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.