ನೀರಾವರಿಗೆ ಶೇ. 15 ಹಣ ಮೀಸಲಿಡಿ; ಎಸ್‌. ಆರ್‌. ಪಾಟೀಲ

ಅನುಷ್ಟಾನಗೊಳ್ಳದೇ ಇರುವುದರಿಂದ ಉತ್ತರ ಕರ್ನಾಟಕದ ಜನ ಅಧಿಕವಾಗಿ ವಲಸೆ ಹೊಗುತ್ತಿದ್ದಾರೆ

Team Udayavani, Apr 16, 2022, 5:25 PM IST

ನೀರಾವರಿಗೆ ಶೇ. 15 ಹಣ ಮೀಸಲಿಡಿ; ಎಸ್‌. ಆರ್‌. ಪಾಟೀಲ

ಕೂಡಲಸಂಗಮ: ಪ್ರಾದೇಶಿಕ ಅಸಮಾನತೆ ಸರಿಪಡಿಸಲು ಉತ್ತರ ಕರ್ನಾಟಕ ಮಹಾದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆ ಹಾಗೂ ನವಲಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕೃಷ್ಣಾ, ಮಹಾದಾಯಿ, ನವಲಿ ಸಂಕಲ್ಪ ಯಾತ್ರೆ ಆರಂಭಿಸಲಾಗಿದೆ ಎಂದು ಯಾತ್ರೆಯ ನೇತೃತ್ವ ವಹಿಸಿರುವ ವಿಧಾನ ಪರಿಷತ್‌ ಮಾಜಿ ಸದಸ್ಯ ಎಸ್‌. ಆರ್‌. ಪಾಟೀಲ ಹೇಳಿದರು.

ಕೂಡಲಸಂಗಮ ಸಭಾಭವನದಲ್ಲಿ ನಡೆದ ಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಈ ನೀರಾವರಿ ಯೋಜನೆಗೆ ಶೇ. 15ರಷ್ಟು ಹಣ ಮೀಸಲಿಟ್ಟಾಗ ಯೋಜನೆ ಯಶಸ್ವಿಯಾಗುವುದು. ರಾಜ್ಯ ಸರ್ಕಾರ ಪ್ರಸಕ್ತ ವರ್ಷ ಬಜೆಟ್‌ನಲ್ಲಿ ಐದು ಸಾವಿರ ಕೋಟಿ ಮೀಸಲಿಟ್ಟಿದೆ. ಇದರಿಂದ ಯೋಜನೆಗಳು ವಿಳಂಬವಾಗುತ್ತವೆ. 3ನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆಗೆ 60 ಸಾವಿರ ಕೋಟಿ ಅಗತ್ಯ ಇದ್ದು, ಇದರಿಂದ 7 ಜಿಲ್ಲೆಯ
14 ಸಾವಿರ ಹೆಕ್ಟೇರ್‌ ಪ್ರದೇಶದ ರೈತರಿಗೆ ಅನುಕೂಲವಾಗುತ್ತದೆ ಎಂದರು.

ಪಕ್ಷಾತೀತವಾಗಿ ನಡೆಸುತ್ತಿರುವ ಯಾತ್ರೆಗೆ ಅಭೂತಪೂರ್ವ ಬೆಂಬಲ ದೊರಕಿದೆ. ಸ್ವಪಕ್ಷದಿಂದ ನೀರಾವರಿ ಯೋಜನೆಗೆ ಅನ್ಯಾಯವಾದರೂ ವಿರೋಧಿ ಸುವ ಕಾರ್ಯ ಮಾಡುತ್ತೇನೆ. ಉತ್ತರ ಕರ್ನಾಟಕದ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಹೋರಾಟ ಅಗತ್ಯ ಇದ್ದು, ಎಲ್ಲರೂ ಬೆಂಬಲಿಸಬೇಕು ಎಂದು ಕರೆಕೊಟ್ಟರು.

ನಾರಾಯಣಪುರ ಜಲಾಶಯ ಹಿನ್ನಿರಿನಲ್ಲಿ ಮುಳುಗಡೆಗೊಂಡ ಪುನರ್‌ ವಸತಿ ಗ್ರಾಮಗಳಿಗೆ ಸರ್ಕಾರ ಮೂಲಭೂತ ಸೌಲಭ್ಯ ಕಲ್ಪಿಸಲು ವಿಫಲವಾಗಿದೆ. 40 ವರ್ಷ ಗತಿಸಿದರೂ ಈ ಯೋಜನೆಗೆ ಮನೆ, ಜಮೀನು ಕಳೆದುಕೊಂಡ ಸಂತ್ರಸ್ತರು ಇನ್ನೂ ತಗಡಿನ ಶೆಟ್ಟಿನಲ್ಲಿ ವಾಸವಿರುವರು. ಇಂದು ನಮ್ಮ ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದರು.

ನೀರಾವರಿ ಯೋಜನೆಗಳು ಸಮರ್ಪಕ ಅನುಷ್ಟಾನಗೊಳ್ಳದೇ ಇರುವುದರಿಂದ ಉತ್ತರ ಕರ್ನಾಟಕದ ಜನ ಅಧಿಕವಾಗಿ ವಲಸೆ ಹೊಗುತ್ತಿದ್ದಾರೆ. ಈ ಮೂರು ನೀರಾವರಿ ಯೋಜನೆಗಳು ಅನುಷ್ಟಾನಗೊಂಡರೆ ಯಾರು ವಲಸೆ ಹೋಗುವುದಿಲ್ಲ, ಬೇರೆ ರಾಜ್ಯದವರು ನಮ್ಮ ಕಡೆ ವಲಸೆ ಬರುವರು. ನವಲಿ ಬಳಿ ತುಂಗಭದ್ರಾ ನದಿಗೆ ಸಮತೋಲನ ಜಲಾಶಯ ನಿರ್ಮಿಸಿ 37 ಟಿ.ಎಂ.ಸಿ ನೀರು ಸಂಗ್ರಹಿಸಿ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಜಿಲ್ಲೆಯ ಜಮೀನುಗಳನ್ನು ನೀರಾವರಿಗೆ ಒಳಪಡಿಸಬಹುದು ಎಂದು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಸ್‌.ಜಿ. ನಂಜಯ್ಯನಮಠ ಮಾತನಾಡಿ, ನೀರಾವರಿ ಯೋಜನೆಗಳ ಶಾಶ್ವತ ಅನುಷ್ಠಾನಕ್ಕೆ ಆಂದೋಲನದ ಅಗತ್ಯವಿದ್ದು, ಈ ಯಾತ್ರೆಗೆ ಪಕ್ಷಾತೀತವಾಗಿ ಬೆಂಬಲಿಸಬೇಕು ಎಂದರು. ಎಸ್‌ಆರ್‌ಎನ್‌ಇ ಫೌಂಡೇಶನ್‌ ಅಧ್ಯಕ್ಷ ಎಸ್‌.ಆರ್‌.ನವಲಿಹಿರೇಮಠ ಪ್ರಾಸ್ತಾವಿಕವಾಗಿ ಮತನಾಡಿದರು. ಕಳಸಾ ಬಂಡೂರಿ ಹೋರಾಟ ವೇದಿಕೆಯ ವೀರೇಶ ಸೊಬರದಮಠ, ಜಿಪಂ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಮುಖಂಡರಾದ ಎಲ್‌.ಎಂ.ಪಾಟೀಲ, ಎಂ.ಎಸ್‌. ಪಾಟೀಲ, ಬಸಪ್ಪ ಹೆಸರೂರ, ಅಬ್ದುಲರಜಾಕ್‌ ತಟಗಾರ, ಜಗದೀಶ ಹೊಸಮನಿ, ಚೇತನ ಮುಕ್ಕನವರ, ಶಿವಪ್ಪ ಹೊರಕೇರಿ, ಎಸ್‌.ಟಿ.ಪಾಟೀಲ, ಎಮ್‌.
ಎನ್‌.ಪಾಟೀಲ ಇದ್ದರು.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.