ಕುಮಾರಸ್ವಾಮಿ ದೇವರು ಕೊಟ್ಟ ಮುಖ್ಯಮಂತ್ರಿ : ಶಾಸಕ ವೆಂಕಟರಾವ್ ನಾಡಗೌಡ
Team Udayavani, Apr 16, 2022, 5:30 PM IST
ಕೊಪ್ಪಳ: ಹೆಚ್.ಡಿ.ಕುಮಾರಸ್ವಾಮಿ ಅವರು ಎರಡು ಬಾರಿ ಸಿಎಂ ಆದರೂ ಅವರೊಬ್ಬ ದೇವರು ಕೊಟ್ಟ ಮುಖ್ಯಮಂತ್ರಿಯಾಗಿದ್ದಾರೆ. ಅವರು ಜನರು ಕೊಟ್ಟ ಮುಖ್ಯಮಂತ್ರಿಯಲ್ಲ ಎಂದು ಶಾಸಕ ವೆಂಕಟರಾವ್ ನಾಡಗೌಡ ಬಣ್ಣಿಸಿದ್ದಾರೆ.
ಮುನಿರಾಬಾದ್ನ ಜಲಧಾರೆ ಕಾರ್ಯಕ್ರಮದಲ್ಲಿ ಮಾತನಾಡಿ, ಹೆಚ್ಡಿಕೆ ಅವರು ನನಗೆ ಪೂರ್ಣ ಅಧಿಕಾರ ಕೊಡಿ ನಾನು ಅಭಿವೃದ್ಧಿಗೆ ಬದ್ದನಿದ್ದೇನೆ ಎಂದು ಜನರಿಗೆ ಮನವಿ ಮಾಡಿದ್ದರು. ಆದರೆ ಜನತೆ ಅವರಿಗೆ ಪೂರ್ಣ ಅಧಿಕಾರ ಕೊಡಲಿಲ್ಲ. ಅವರು ಅದೃಷ್ಟದಂತೆ ದೇವರು ಕೊಟ್ಟ ಮುಖ್ಯಮಂತ್ರಿಯಾಗಿದ್ದಾರೆ. ಜನರು ಕೊಟ್ಟ ಮುಖ್ಯಮಂತ್ರಿಯಲ್ಲ ಎಂದರು.
ಸಿದ್ದರಾಮಯ್ಯ ಅವರು ಹೆಚ್ಡಿಕೆ ಬಗ್ಗೆ ವ್ಯಂಗ್ಯವಾಡಿ ದೇವರಾಣೆ ಸಿಎಂ ಆಗಲ್ಲ ಎಂದಿದ್ದರು. ಆದರೆ ಹೆಚ್ಡಿಕೆ ಸಿಎಂ ಆದರು. ಸಿದ್ದು ಹೇಳಿದ್ದೆಲ್ಲವೂ ಉಲ್ಟಾ ಆಗಲಿದೆ ಎಂದರಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರೈತರ ಸಾಲ ಮನ್ನಾ ಮಾಡಲು ಸಮಯವಿಲ್ಲ. ಆದರೆ ಆದಾನಿ, ಅಂಬಾನಿ ಸಾಲ ಮನ್ನಾ ಮಾಡುತ್ತಾರೆ. ಎಲ್ಲೆಡೆ ಬೆಲೆ ಏರಿಕೆಯಾಗಿದೆ. ಆದರೆ ಮೋದಿ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಿಲ್ಲ ಎಂದು ಕಿಡಿ ಕಾರಿದರು.
ಪ್ರಾದೇಶಿಕ ಪಕ್ಷಗಳಿಗೆ ಭವಿಷ್ಯವಿದೆ. ದೇಶದ ಹಲವು ರಾಜ್ಯಗಳಲ್ಲಿ ಇಂದು ಪ್ರಾದೇಶಿಕ ಪಕ್ಷಗಳೇ ಅಧಿಕಾರ ನಡೆಸುತ್ತಿವೆ. ಜೆಡಿಎಸ್ 2023ರ ಚುನಾವಣೆಯಲ್ಲಿ ವಿಜನ್ 123 ಗುರಿಯೊಂದಿಗೆ ಸಜ್ಜಾಗಿದ್ದು ರೈತರ ಜಮೀನಿಗೆ ನೀರು ಹರಿಯಬೇಕೆಂಬ ಉದ್ದೇಶದಿಂದ ಜನತಾ ಜಲಧಾರೆ ಎನ್ನುವ ಯೋಜನೆಯ ಸಂಕಲ್ಪ ಮಾಡಿ 15 ನದಿಗಳ ಜಲ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ