ಈಗ ಎಲ್‌ಪಿಜಿಗಾಗಿ ಲಂಕಾ ಮೊರೆ; ಎಲ್‌ಪಿಜಿ ನೀಡುವಂತೆ ಭಾರತಕ್ಕೆ ಮನವಿ

ದಿನಸಿ ಸಾಮಗ್ರಿಗಳ ಜೊತೆ ಎಲ್‌ಪಿಜಿ ಸಿಲಿಂಡರ್‌ ದರವೂ ಹೆಚ್ಚಳ

Team Udayavani, Apr 17, 2022, 7:45 AM IST

ಈಗ ಎಲ್‌ಪಿಜಿಗಾಗಿ ಲಂಕಾ ಮೊರೆ; ಎಲ್‌ಪಿಜಿ ನೀಡುವಂತೆ ಭಾರತಕ್ಕೆ ಮನವಿ

ಕೊಲಂಬೊ: ಆರ್ಥಿಕ ಸಂಕಷ್ಟ ಎದುರಾದ ನಂತರ ಆರ್ಥಿಕ ಸಹಾಯ ಸೇರಿದಂತೆ ಹಲವಾರು ರೀತಿಯ ಮಾನವೀಯ ನೆರವುಗಳನ್ನು ಭಾರತದ ಮುಂದಿಟ್ಟಿರುವ ಶ್ರೀಲಂಕಾ, ಈಗ ಅಡುಗೆ ಅನಿಲವನ್ನು (ಎಲ್‌ಪಿಜಿ) ಸಾಲದ ರೂಪದಲ್ಲಿ ಸರಬರಾಜು ಮಾಡುವಂತೆ ಭಾರತವನ್ನು ಕೇಳಿಕೊಂಡಿದೆ.

ಲಂಕಾದಲ್ಲಿ ಪೆಟ್ರೋಲ್‌, ಡೀಸೆಲ್‌ನಂಥ ಅಗತ್ಯ ಇಂಧನಗಳ ಅಭಾವ ಕಾಣಿಸಿಕೊಂಡಿದೆ. ದಿನಸಿ, ಹಣ್ಣು – ತರಕಾರಿ ಬೆಲೆಗಳು ಗಗನಕ್ಕೇರಿವೆ. ಎಲ್‌ಪಿಜಿಯ ಪ್ರತಿ ಸಿಲಿಂಡರ್‌ ಬೆಲೆ ಶೇ. 2,700 ರೂ.ಗಳಿಗೆ ಏರಿದೆ!

ಭಾರತ, ಶ್ರೀಲಂಕಾಕ್ಕೆ ಈಗಾಗಲೇ ಎರಡು ಹಂತಗಳಲ್ಲಿ ನಗದು ಸಹಾಯ ಮಾಡಿದೆ. ಜೊತೆಗೆ, 36 ಸಾವಿರ ಮೆಟ್ರಿಕ್‌ ಟನ್‌ ಪೆಟ್ರೋಲ್‌, 40 ಸಾವಿರ ಮೆಟ್ರಿಕ್‌ ಟನ್‌ನಷ್ಟು ಡೀಸೆಲ್‌ ಅನ್ನು ಸರಬರಾಜು ಮಾಡಿದೆ. ಇದರ ನಡುವೆಯೇ ಅಡುಗೆ ಅನಿಲದ ಬೇಡಿಕೆಯನ್ನು ಹೇಗೆ ನಿಭಾಯಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ದರ ಹೆಚ್ಚಳಕ್ಕೆ ಭ್ರಷ್ಟಾಚಾರ ಕಾರಣ?
ಮತ್ತೊಂದೆಡೆ, ಶ್ರೀಲಂಕಾ ಸರ್ಕಾರಿ ಸ್ವಾಮ್ಯದ ಎಲ್‌ಪಿಜಿ ಕಂಪನಿಯಾದ ಲಿಟ್ರೋ ಗ್ಯಾಸ್‌ ಕಂಪನಿಯ ಮುಖ್ಯಸ್ಥ ತೆಶಾರಾ ಜಯಸಿಂಘೆ, ತಮ್ಮ ಸ್ಥಾನಕ್ಕೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ. ತದನಂತರ ಮಾತನಾಡಿರುವ ಅವರು, “ಆರ್ಥಿಕ ದುಸ್ಥಿತಿಯಿಂದಾಗಿ ಜನರು ಅಗತ್ಯವಸ್ತುಗಳಿಗಾಗಿ ಪರದಾಡುತ್ತಿರುವ ಇಂಥ ದುಸ್ಥಿತಿಯಲ್ಲೂ ಕಂಪನಿಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯು ಅಗಾಧವಾಗಿ ಹೆಚ್ಚಾಗಿರುವುದಕ್ಕೆ ಈ ಕ್ಷೇತ್ರದಲ್ಲಿರುವ ಮಿತಿಮೀರಿದ ಭ್ರಷ್ಟಾಚಾರವೇ ಕಾರಣ ಎಂದು ಆರೋಪಿಸಿದ್ದಾರೆ.

ಷೇರು ಮಾರುಕಟ್ಟೆ ಬಂದ್‌
ಹದಗೆಟ್ಟ ಆರ್ಥಿಕತೆಯಿಂದಾಗಿ ಕೊಲಂಬೋ ಷೇರು ಮಾರುಕಟ್ಟೆಯನ್ನು ಐದು ದಿನಗಳವರೆಗೆ ಸ್ತಬ್ಧಗೊಳಿಸುವಂತೆ ಶ್ರೀಲಂಕಾದ ಸೆಕ್ಯುರಿಟಿ ಮತ್ತು ಎಕ್ಸ್‌ಚೇಂಜ್‌ ಆಯೋಗ ಆದೇಶಿಸಿದೆ. ಷೇರು ಮಾರುಕಟ್ಟೆಯ ಕಾರ್ಯನಿರ್ವಹಣಾ ನಿಯಮಗಳನ್ನು ಪರಿಷ್ಕರಿಸಬೇಕಿದ್ದು, ಆ ಹಿನ್ನೆಲೆಯಲ್ಲಿ ಐದು ದಿನಗಳವರೆಗೆ ಮಾರುಕಟ್ಟೆ ಬಂದ್‌ ಮಾಡಲು ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಾಷಿಂಗ್ಟನ್‌ಗೆ ನಿಯೋಗ
ಅಮೆರಿಕದಿಂದ 30 ಸಾವಿರ ಕೋಟಿ ರೂ. ಸಾಲ ಪಡೆಯುವ ಇರಾದೆ ಹೊಂದಿರುವ ಶ್ರೀಲಂಕಾ, ಅದಕ್ಕಾಗಿ ಅಮೆರಿಕ ಸರ್ಕಾರದ ಜೊತೆಗೆ ಮಾತುಕತೆ ನಡೆಸುವ ಸಲುವಾಗಿ ತನ್ನ ಉನ್ನತಾಧಿಕಾರಿಗಳ ನಿಯೋಗವೊಂದನ್ನು ವಾಷಿಂಗ್ಟನ್‌ಗೆ ಕಳುಹಿಸಿದೆ. ಅಸಲಿಗೆ, ವಾರದ ಹಿಂದೆಯೇ ಈ ನಿಯೋಗವನ್ನು ರಚಿಸಲಾಗಿದ್ದು ಇದರಲ್ಲಿ ಆರ್ಥಿಕ ತಜ್ಞರು, ಸರ್ಕಾರದ ಹಿರಿಯ ಅಧಿಕಾರಿಗಳು ಇದ್ದಾರೆ. ಈ ನಿಯೋಗವು, ಸಾಲ ತರುವುದಷ್ಟೇ ಅಲ್ಲ, ಇರುವ ಹಣದಲ್ಲಿ ದೇಶ ನಿಭಾಯಿಸುವ ಬಗೆಯ ಬಗ್ಗೆ ಸರ್ಕಾರಕ್ಕೆ ಸಲಹೆಗಳನ್ನು ನೀಡಲಿದೆ.

ಮಾನವೀಯ ಸಹಾಯ: ಕೇಂದ್ರಕ್ಕೆ ಸ್ಟಾಲಿನ್‌ ಮನವಿ
ಶ್ರೀಲಂಕಾದ ಪ್ರಜೆಗಳಿಗೆ ಮಾನವೀಯ ನೆರವಿನ ಆಧಾರದಲ್ಲಿ ಅಗತ್ಯ ವಸ್ತುಗಳನ್ನುಪೂರೈಸಲು ತಮಿಳುನಾಡು ಸರ್ಕಾರ ಸಜ್ಜಾಗಿದ್ದು, ಇದಕ್ಕೆ ಅವಕಾಶ ಕಲ್ಪಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರು ಕೇಂದ್ರ ಸರ್ಕಾರವನ್ನು ಕೋರಿದ್ದಾರೆ. ಮಾ. 31ರಂದು ಪ್ರಧಾನಿ ನರೇಂದ್ರ ಮೋದಿಯವರ ಜತೆಗೆ ನಡೆಸಲಾದ ಮಾತುಕತೆ ವೇಳೆ, ಲಂಕಾಕ್ಕೆ ಸಹಾಯ ಮಾಡುವ ವಿಚಾರದ ಬಗ್ಗೆಯೂ ಚರ್ಚಿಸಲಾಗಿತ್ತು. ಹಾಗಾಗಿ, ಶ್ರೀಲಂಕಾಕ್ಕೆ ಸಹಾಯ ಮಾಡುವ ವಿಚಾರದಲ್ಲಿ ತಮಿಳುನಾಡು ಸರ್ಕಾರ ಬದ್ಧವಾಗಿದೆ. ಅಡುಗೆಗೆ ಬೇಕಾದ ದಿನಸಿ ಸಾಮಗ್ರಿಗಳನ್ನು ಕಳುಹಿಸಲು ಸಿದ್ಧವಾಗಿದ್ದು, ಅವು ಹಡಗುಗಳ ಮೂಲಕ ಲಂಕಾಕ್ಕೆ ಕಳುಹಿಸಲು ಅನುಮತಿ ನೀಡಬೇಕೆಂದು ಅವರು ಕೋರಿದ್ದಾರೆ.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

31

Italian Open 2024: ಬೋಪಣ್ಣ ಜೋಡಿಗೆ ಸೋಲು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.