ಸಾರಾಯಿ ಖರೀದಿ ಹಣದಲ್ಲಿ ಚಿಲ್ಲರೆ ವಾಪಸ್ ಕೊಡದಿದ್ದಕ್ಕೆ ಬಿಯರ್ ಬಾಟಲಿಯಿಂದ ಹೊಡೆದು ಕೊಲೆ
Team Udayavani, Apr 17, 2022, 11:17 AM IST
ಬೆಳಗಾವಿ: ಸಾರಾಯಿ ತರಲು ಕೊಟ್ಟಿದ್ದ ಹಣದಲ್ಲಿ ಉಳಿದ ಚಿಲ್ಲರೆ ಹಣ ವಾಪಸ್ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಬಿಯರ್ ಬಾಟಲಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಇಲ್ಲಿಯ ವೈಭವ ನಗರದ ಸತ್ಯಸಾಯಿ ಕಾಲೋನಿಯಲ್ಲಿ ನಡೆದಿದೆ.
ವೈಭವ ನಗರದ ಸತ್ಯ ಸಾಯಿ ಕಾಲೋನಿ ನಿವಾಸಿ ಮಹ್ಮದ್ ದಿಲಾಪುಕಾರ ಶೇಖ್ (27 ವ) ಎಂಬಾತ ಕೊಲೆಗೀಡಾಗಿದ್ದಾನೆ. ಇದೇ ಕಾಲೋನಿಯ ಉಸ್ಮಾನ ಲಾಲಸಾಬ ಶೇಖ್ ಎಂಬಾತನೇ ಕೊಲೆ ಮಾಡಿದ ಆರೋಪಿ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಹುಬ್ಬಳ್ಳಿ ಗಲಾಟೆ ಒಂದು ವ್ಯವಸ್ಥಿತ ಸಂಚು: ಗೃಹ ಸಚಿವ ಆರಗ ಜ್ಞಾನೇಂದ್ರ
ಸತ್ಯಸಾಯಿ ಕಾಲೋನಿಯಲ್ಲಿ ಈ ಇಬ್ಬರೂ ನಿಂತುಕೊಂಡಿದ್ದರು. ಆಗ ಉಸ್ಮಾನ್ ಎಂಬಾತ ಮಹ್ಮದನಿಗೆ 500 ರೂ.ಹಣ ಕೊಟ್ಟು ಸಾರಾಯಿ ತೆಗದುಕೊಂಡು ಬರುವಂತೆ ಹೇಳಿದ್ದಾನೆ. ಆಗ ಮಹ್ಮದ್ 250 ರೂ.ಕೊಟ್ಟು ಸಾರಾಯಿ ತಂದಿದ್ದಾನೆ. ಉಳಿದ 250 ರೂ. ಚಿಲ್ಲರೆ ಹಣವನ್ನು ಉಸ್ಮಾನನಿಗೆ ಹಿಂದಿರುಗಿಸಿಲ್ಲ. ಆಗ ಮಾತಿಗೆ ಮಾತು ಬೆಳೆದು ಇಬ್ಬರ ಮಧ್ಯೆ ಜಗಳವಾಗಿದೆ. ಬಿಯರ್ ಬಾಟಲಿಯಿಂದ ಮಹ್ಮದನ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ