ಕೇಂದ್ರ ಸಚಿವರಿಗೆ ಸಂತ್ರಸ್ತರ ಮುತ್ತಿಗೆ

ಮೀಸಲಿಟ್ಟಿದ್ದ ಭೂಮಿ ಬೇರೆ ಉದ್ದೇಶಕ್ಕೆ ನೀಡಿದ್ದು ಖಂಡಿಸಿ ಸಂತ್ರಸ್ತರ ಪ್ರತಿಭಟನೆ

Team Udayavani, Apr 17, 2022, 2:18 PM IST

against

ದಾವಣಗೆರೆ: ಆಶ್ರಯ ಮನೆ ನಿರ್ಮಿಸಲು ಮೀಸಲಿಟ್ಟಿದ್ದ ಭೂಮಿಯನ್ನು ಬೇರೆ ಉದ್ದೇಶಕ್ಕೆ ನೀಡಿರುವುದನ್ನು ಖಂಡಿಸಿ ಸಂತ್ರಸ್ತರು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ತಾಲೂಕಿನ ವಡ್ಡಿನಹಳ್ಳಿಯಲ್ಲಿ ಶನಿವಾರ ನಡೆಯಿತು.

ವಿಕಲಚೇತನರ ಸಬಲೀಕರಣ, ಕೌಶಲ್ಯ ಅಭಿವೃದ್ಧಿ ಮತ್ತು ಪುನರ್ವಸತಿ ಸಂಯುಕ್ತ ಪ್ರಾದೇಶಿಕ ಕೇಂದ್ರದ ನೂತನ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ ವೇಳೆ ಈ ಘಟನೆ ನಡೆಯಿತು. ಹಳೆಯ ಚಿಕ್ಕನಹಳ್ಳಿಯ ಹರಳಯ್ಯನಗರದ ಸಂತ್ರಸ್ತರು ಸಚಿವರಿಗೆ ಮುತ್ತಿಗೆ ಹಾಕಿ, ತಮಗೆ ಜಿಲ್ಲಾಡಳಿತ ಅನ್ಯಾಯ ಮಾಡಿದ್ದು ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.

ಹರಳಯ್ಯನಗರದ ಸಂತ್ರಸ್ತರಿಗೆ ಆಶ್ರಯ ಮನೆ ನಿರ್ಮಾಣಕ್ಕಾಗಿ 2016ರಲ್ಲಿ ಗುರುತಿಸಿ ಕಾಯ್ದಿರಿಸಿದ್ದ ನಾಲ್ಕು ಎಕರೆ ಭೂಮಿಯನ್ನು ಜಿಲ್ಲಾಡಳಿತ ವಿಕಲಚೇತನರ ಸಬಲೀಕರಣ, ಕೌಶಲ್ಯ ಅಭಿವೃದ್ಧಿ ಮತ್ತು ಪುನರ್ವಸತಿ ಸಂಯುಕ್ತ ಪ್ರಾದೇಶಿಕ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ನೀಡಿದೆ. ವಿಕಲಚೇತನರಿಗಾಗಿ ಭೂಮಿ ಕೊಟ್ಟಿದ್ದಕ್ಕೆ ಅಭ್ಯಂತರವಿಲ್ಲ. ಆದರೆ, ನಮಗೆ ನಗರ ಸಮೀಪ ಪರ್ಯಾಯ ಭೂಮಿ ಗುರುತಿಸಿ ಕೊಟ್ಟಿಯೇ ಕಟ್ಟಡ ಕಟ್ಟಲು ಆರಂಭ ಮಾಡಲಿ. ಅಲ್ಲಿಯವರೆಗೆ ಕಟ್ಟಡ ಕಟ್ಟಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ಆಶ್ರಯ ಮನೆಗಾಗಿ ಕಾಯ್ದಿರಿಸಿರುವ ಭೂಮಿ ಬೇರೆ ಉದ್ದೇಶಕ್ಕೆ ನೀಡದಂತೆ ಹಲವಾರು ಬಾರಿ ಮನವಿ ಕೊಟ್ಟರೂ ಜಿಲ್ಲಾಧಿಕಾರಿಯವರು ಮನವಿಗೆ ಸ್ಪಂದಿಸಿಲ್ಲ. ಸಂತ್ರಸ್ತರ ಮೇಲೆ ಮಾನವೀಯತೆ ತೋರದೆ ಅನ್ಯಾಯ ಮಾಡಿದ್ದಾರೆ. ಅವರನ್ನು ಬೇರೆಡೆ ವರ್ಗಾವಣೆ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿಸಿಗೆ ತರಾಟೆ

ಆಗ ಸಚಿವರು, ಸ್ಥಳದಲ್ಲೇ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರನ್ನು ತರಾಟೆ ತೆಗೆದು ಕೂಡಲೇ ಪರ್ಯಾಯ ಭೂಮಿ ಗುರುತಿಸಲು ಸೂಚಿಸಿದರು. ಇದರಿಂದ ಜಿಲ್ಲಾಧಿಕಾರಿ ಅವರು ತೀವ್ರ ಮುಜುಗರ ಅನುಭವಿಸುವಂತಾಯಿತು. ಸಂತ್ರಸ್ತರು ಜಿಲ್ಲಾಧಿಕಾರಿಯವರ ವಿರುದ್ಧ ಆರೋಪ ಮಾಡಿದ್ದು, ಸಚಿವರು ಜಿಲ್ಲಾಧಿಕಾರಿಯವರನ್ನು ತರಾಟೆ ತೆಗೆದುಕೊಂಡಿದ್ದನ್ನು ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಎಸ್‌.ಎ. ರವೀಂದ್ರನಾಥ್‌, ಪ್ರೊ| ಎನ್‌. ಲಿಂಗಣ್ಣ ಮೂಕಪ್ರೇಕ್ಷಕರಂತೆ ಗಮನಿಸಿದರು.

ವಿವಿಧ ಪ್ರಗತಿಪರ ಸಂಘಟನೆಗಳ ಪ್ರಮುಖರಾದ ಬಿ. ಹನುಮಂತಪ್ಪ, ಹೆಗ್ಗೆರೆ ರಂಗಪ್ಪ, ಕಬ್ಬಳ್ಳಿ ಮೈಲಪ್ಪ, ಬಾಬು ಅಳಗವಾಡಿ, ಜಯಪ್ಪ, ಕೆಟಿಜೆ ನಗರ ರಾಜಣ್ಣ ಇನ್ನಿತರರು ಸಂತ್ರಸ್ತರ ಪ್ರತಿಭಟನೆಗೆ ಬೆಂಬಲ ನೀಡಿದರು.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.