ಎಲ್ಲೆಡೆ ಹನುಮ ಜಯಂತಿ ಸಂಭ್ರಮ

ಸಿಂಗಾರಗೊಂಡ ಆಂಜನೇಯ ಸ್ವಾಮಿ ದೇವಸ್ಥಾನಗಳು

Team Udayavani, Apr 17, 2022, 3:10 PM IST

20

ಗದಗ: ಕೋವಿಡ್‌-19ರ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ಸಾಂಕೇತಿಕ ಆಚರಣೆಗೆ ಸೀಮಿತವಾಗಿದ್ದ ಪವನ ಪುತ್ರ ಹನುಮ ಜಯಂತಿಯನ್ನು ಈ ಬಾರಿ ಎಲ್ಲೆಡೆ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.

ಹನುಮ ಜಯಂತಿ ನಿಮಿತ್ತ ಅವಳಿ ನಗರ ಸೇರಿದಂತೆ ಜಿಲ್ಲಾದ್ಯಂತ ಮಾರುತಿ ಮಂದಿರಗಳಲ್ಲಿ ಶನಿವಾರ ಶ್ರದ್ಧಾ-ಭಕ್ತಿಯಿಂದ ಪೂಜೆ, ಪುನಸ್ಕಾರ ನೆರವೇರಿಸಲಾಯಿತು.

ಗದಗ-ಬೆಟಗೇರಿ ಅವಳಿ ನಗರದ ವಿವಿಧೆಡೆಯಿರುವ ಆಂಜನೇಯ ಸ್ವಾಮಿ ದೇವಸ್ಥಾನಗಳನ್ನು ಬಣ್ಣ ಬಣ್ಣದ ರಂಗೋಲಿ, ತಳಿರು-ತೋರಣ, ವಿದ್ಯುತ್‌ ದೀಪಗಳಿಂದ ಸಿಂಗರಿಸಲಾಗಿತ್ತು. ಬೆಳಗ್ಗೆಯಿಂದಲೇ ಧಾರ್ಮಿಕ ವಿವಿಧಾನಗಳೊಂದಿಗೆ ಅಭಿಷೇಕ ಹಾಗೂ ಪೂಜಾ ಕೈಂಕರ್ಯಗಳು ಆರಂಭಗೊಂಡಿದ್ದವು.

ವಿಶೇಷ ಪೂಜೆ: ನಗರದ ಪುರಾತನ ಕಿಲ್ಲಾದ ಜೋಡ ಮಾರುತಿ ದೇವಸ್ಥಾನ, ವಿವೇಕಾನಂದ ನಗರದ ವೀರಾಂಜನೇಯ ದೇವಸ್ಥಾನ, ನರಸಾಪುರದ ಗುಂಡದ ಮಾರುತಿ ಗುಡಿ, ಬಸವೇಶ್ವರ ನಗರದ ಜೋಡ ಹನುಂತದೇವರ ಗುಡಿ, ಗಂಗಾಪುರ ಪೇಟೆಯ ಮಾರುತಿ ಮಂದಿರ, ಹೆಲ್ತ್‌ಕ್ಯಾಂಪ್‌ನ ಮಾರುತಿ ದೇವಸ್ಥಾನ, ರೈಲ್ವೆ ನಿಲ್ದಾಣ ಸಮೀಪದ ಮಾರುತಿ ಮಂದಿರ, ಹುಡ್ಕೊà ಕಾಲೋನಿಯ ಬಯಲು ಆಂಜನೇಯ ದೇವಸ್ಥಾನ, ಶರಣಬಸವೇಶ್ವರ ನಗರದ ಆಂಜನೇಯ ಗುಡಿ, ಸೆಟ್ಲಮೆಂಟ್‌ ಬಡಾವಣೆಯ ಮಾರುತಿ ದೇವಸ್ಥಾನಗಳಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು.

ಬೆಳಗ್ಗೆಯಿಂದಲೇ ವಾಯು ಪುತ್ರನಿಗೆ ಮಹಾಭಿಷೇಕ, ರುದ್ರಾಭಿಷೇಕ ನೆರವೇರಿಸಲಾಯಿತು. ಹೋಮ-ಹವನದ ಮೂಲಕ ಪ್ರಾರ್ಥನೆ ಸಲ್ಲಿಸಲಾಯಿತು. ತುಳಸಿ ಅರ್ಚನೆ ಹಾಗೂ ಮಹಾಮಂಗಳಾರತಿ ಬೆಳಗಿ ಇಷ್ಟಾರ್ಥಗಳೊಂದಿಗೆ ನಾಡಿನ ಸಮೃದ್ಧಿಗೆ ಪ್ರಾರ್ಥಿಸಲಾಯಿತು.

ತೊಟ್ಟಿಲೋತ್ಸವ: ಗಂಗಾಪುರ ಪೇಟೆಯ ಬಾಲ ಮಾರುತಿ ದೇವಸ್ಥಾನದಲ್ಲಿ ಮಹಿಳಾ ಮಂಡಳದ ಸದಸ್ಯರು ಹನುಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಿದರು. ಬಾಲ ಮಾರುತಿಯನ್ನು ತೊಟ್ಟಿಲಿಗೆ ಹಾಕಿ, ಜೋಗುಳ ಗೀತೆಗಳನ್ನು ಹಾಡಿದರು. ಉತ್ಸಾಹದಿಂದ ತೊಟ್ಟಿಲು ತೂಗಿ ಕೃತಾರ್ಥರಾದರು. ಅದರಂತೆ ಬೆಳಗ್ಗೆಯಿಂದಲೇ ಭಕ್ತರು ಕುಟುಂಬ ಸಮೇತರಾಗಿ ದೇವಸ್ಥಾನಗಳಿಗೆ ತೆರಳಿ ಹೂ-ಹಣ್ಣು, ಕಾಯಿ ಅರ್ಪಿಸಿದರು. ಸುಮಂಗಲೆಯರು, ಭಕ್ತರು ಬಾಲ ಹನುಮನನ್ನು ತೊಟ್ಟಿಲಿಗೆ ಹಾಕಿ ತೂಗಿದರು. ನಾಮಕರಣ ಮಾಡಿ ಸಂಭ್ರಮಿಸಿದರು.

ವಿವಿಧೆಡೆ ಅನ್ನಸಂತರ್ಪಣೆ: ಸ್ವಾಮಿ ವಿವೇಕಾನಂದ ನಗರದ ವೀರಾಂಜನೇಯ ದೇವಸ್ಥಾನದಲ್ಲಿ ಹನುಮ ಜಯಂತಿ ಹಾಗೂ ಗಣ್ಯರಿಗೆ ಸನ್ಮಾನ ಸಮಾರಂಭ ನಡೆಯಿತು. ಪಂಚಾಕ್ಷರಿ ನಗರದ ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ನಗರದ ಜೋಡ ಮಾರುತಿ ದೇವಸ್ಥಾನ, ಕೆ.ಎಚ್‌.ಪಾಟೀಲ ಬಡಾವಣೆ, ಬಯಲು ಆಂಜನೇಯ ಸ್ವಾಮಿ ಸೇರಿದಂತೆ ಅವಳಿ ನಗರದ ಅನೇಕ ಮಾರುತಿ ಮಂದಿರಗಳಲ್ಲಿ ಭಕ್ತರಿಗೆ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಟಾಪ್ ನ್ಯೂಸ್

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.