ನಾಲೆ ಒಡೆದು ಜಮೀನಿಗೆ ನುಗ್ಗಿದ ಅಪಾರ ಪ್ರಮಾಣದ ನೀರು : ರೈತರ ಬೆಳೆ ಹಾನಿ
Team Udayavani, Apr 17, 2022, 8:25 PM IST
ಹುಣಸೂರು : ಹಾರಂಗಿ ಜಲಾಶಯದ ಅಣೆಕಟ್ಟೆಯ ಮುಖ್ಯ ನಾಲೆ ಒಡೆದು ಅಪಾರ ಪ್ರಮಾಣದ ನೀರು ಹರಿದು ಬೆಳೆ ನಷ್ಟವಾಗಿರುವ ಘಟನೆ ತಾಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದ ಸಮೀಪ ಶನಿವಾರ ರಾತ್ರಿ ನಡೆದಿದೆ.
ಹಾರಂಗಿ ನಾಲೆಯ ಮಾರೂರು ಬಲದಂಡೆ (ಎಂ.ಬಿ.ಸಿ.) ನಾಲೆಯಲ್ಲಿ ಕಳೆದ ಮೂರು ದಿನಗಳಿಂದ ಬೇಸಿಗೆಯಲ್ಲಿ ಕೆರೆಕಟ್ಟೆಗಳನ್ನು ತುಂಬಿಸಲು ನೀರು ಹಾಯಿಸಲಾಗಿತ್ತು. ಇದೇ ರೀತಿಯಲ್ಲಿ ಕಳೆದ ತಿಂಗಳು ಕೆರೆಕಟ್ಟೆ ತುಂಬಿಸಲು ಹದಿನೈದು-ಇಪ್ಪತ್ತು ದಿನ ನೀರು ಬಿಟ್ಟು ಕೆರೆಕಟ್ಟೆ ತುಂಬಿಸುತ್ತಿದ್ದರು ಕಳೆದ ಮೂರು ದಿನಗಳಿಂದ ಸಂಜೆ ವೇಳೆ ಸುರಿದ ಮಳೆಗೆ ನಾಲೆಯಲ್ಲಿ ನೀರು ಹೆಚ್ಚಾಗಿದ್ದರಿಂದ ನಾಲೆ ಒಡೆದು ಹೋಗಿ ಅಕ್ಕಪಕ್ಕದ ಜಮೀನು ಹಾಗೂ ತೋಟಗಳಿಗೆ ನೀರು ನುಗಿದ್ದು ಬೆಳೆದ ಬೆಳೆ ನಷ್ಟವಾಗಿದೆ.
ಹಿರೀಕ್ಯಾತನಹಳ್ಳಿ ಗ್ರಾಮದ ಸ್ವಾಮಿಗೌಡ ಎಂಬುವರಿಗೆ ಸೇರಿದ ಶುಂಠಿ ನೀರಿನಲ್ಲಿ ಮುಳುಗಿ ಸ್ವಲ್ಪ ಕೊಚ್ಚಿಕೊಂಡು ಹೋಗಿದೆ. ಶೀವೇಗೌಡ ಎಂಬುವರ ಒಂದು ಎಕರೆಗೂ ಹೆಚ್ಚು ಕುಂಬಳ ಗಿಡ ಸಂಪೂರ್ಣ ಜಲಾವೃತವಾಗಿದೆ. ಅಲ್ಲದೆ ಸುತ್ತಮುತ್ತಲ ಹಲವಾರು ರೈತರ ಜಮೀನಿನಲ್ಲಿ ಬೆಳೆದ ಬೆಳೆಗಳು ಕೊಚ್ಚಿಹೋಗಿದ್ದರೆ ಕೆಲವರ ಜಮೀನಿನಲ್ಲಿ ನೀರು ತುಂಬಿಕೊಂಡಿದೆ.
ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನಾಲಾ ಏರಿಯನ್ನು ತಕ್ಷಣವೇ ದುರಸ್ತಿ ಪಡಿಸಿ ರೈತರ ನೆರವಿಗೆ ಬರಬೇಕೆಂದು ರೈತರು ಮನವಿ ಮಾಡಿದ್ದಾರೆ.
ಸ್ಥಳಕ್ಕೆ ಅಧಿಕಾರಿ ಭೇಟಿ: ವಿಷಯ ತಿಳಿದ ಹಾರಂಗಿ ಎಂಜಿನಿಯರ್ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲಿಸಿ ನೀರನ್ನು ಸಂಪೂರ್ಣ ಬಂದ್ ಮಾಡಿಸಿ ನಾಲೆ ದುರಸ್ತಿ ಬಗ್ಗೆ ಮೇಲಾಧಿಕಾರಿಗೆ ತಿಳಿಸಿ ಕ್ರಮವಹಿಸಿ ನಾಲೆ ಅಕ್ಕಪಕ್ಕದ ಜಮಿನಿನ ರೈತರಿಗೆ ಆಗಿರುವ ನಷ್ಟದ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು